AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಪಕ್ಕದ ಮನೆಯ ಕೋಳಿ ಕೂಗಿ ನಿದ್ರೆಗೆ ತೊಂದರೆ ಮಾಡುತ್ತಿದೆ ಎಂದು ಕೇಸ್ ದಾಖಲು!

ಎಲ್ಲರ ಜೀವನದಲ್ಲೂ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ, ಕೇರಳದ ವ್ಯಕ್ತಿಯೊಬ್ಬನ ಈ ಸಮಸ್ಯೆ ನಮ್ಮನ್ನು ಸ್ವಲ್ಪ ದಿಗ್ಭ್ರಮೆಗೊಳಿಸುವಂತಿದೆ. ಕೇರಳದ ವ್ಯಕ್ತಿಯೊಬ್ಬರು ಬೆಳಗಿನ ಜಾವ 3 ಗಂಟೆಗೆ ನೆರೆಮನೆಯ ಕೋಳಿ ಕೂಗುತ್ತಿರುವ ಬಗ್ಗೆ ದೂರು ದಾಖಲಿಸಿದ್ದು, ಇದು ನನ್ನ ಶಾಂತಿಯುತ ಜೀವನವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದಾರೆ. ಆ ವ್ಯಕ್ತಿ ತನ್ನ ನೆರೆ ಮನೆಯವರ ಕೋಳಿ ಬೆಳಗಿನ ಜಾವ ತನ್ನ ನಿದ್ರೆಗೆ ಭಂಗ ತಂದಿದ್ದಕ್ಕಾಗಿ ದೂರು ದಾಖಲಿಸಿದ್ದಾರೆ.

ಬೆಳಗಿನ ಜಾವ ಪಕ್ಕದ ಮನೆಯ ಕೋಳಿ ಕೂಗಿ ನಿದ್ರೆಗೆ ತೊಂದರೆ ಮಾಡುತ್ತಿದೆ ಎಂದು ಕೇಸ್ ದಾಖಲು!
Rooster
ಸುಷ್ಮಾ ಚಕ್ರೆ
|

Updated on: Feb 19, 2025 | 5:38 PM

Share

ಪಥನಾಂತಿಟ್ಟ: ಕೇರಳದ ಪಥನಾಂತಿಟ್ಟ ಪ್ರದೇಶದ ಪಲ್ಲಿಕಲ್ ಎಂಬ ಶಾಂತ ಗ್ರಾಮದಲ್ಲಿ ಸಂಘರ್ಷ ನಡೆಯುತ್ತಿದೆ. ಇದು ಹಣಕ್ಕಾಗಿಯೂ ಅಲ್ಲ, ಜಾಗಕ್ಕಾಗಿಯೂ ಅಲ್ಲ. ಪಕ್ಕದ ಮನೆಯ ಕೋಳಿ ದಿನವೂ ಮುಂಜಾನೆ ಕೂಗಿ ತಮ್ಮ ನಿದ್ರೆಗೆ ಭಂಗ ತರುತ್ತಿದೆ ಎಂದು ಆರೋಪಿಸಿರುವ ವ್ಯಕ್ತಿಯೊಬ್ಬರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ ಆ ಊರಿನಲ್ಲಿ ಗಲಾಟೆ ಭುಗಿಲೆದ್ದಿದೆ. ರಾಧಾಕೃಷ್ಣ ಕುರುಪ್ ಎಂಬ ವೃದ್ಧನಿಗೆ ರಾತ್ರಿಯಲ್ಲಿ ಚೆನ್ನಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಬೆಳಗಿನ ಜಾವದಲ್ಲಿ ಇನ್ನೇನು ನಿದ್ರೆ ಹತ್ತುತ್ತಿದೆ ಎನ್ನುವಾಗ ದಿನವೂ ಬೆಳಗಿನ ಜಾವವೇ ಕೂಗಿ ತನ್ನ ಶಾಂತಿಯುತ ನಿದ್ರೆಗೆ ಭಂಗ ತರುತ್ತಿರುವ ಕೋಳಿಯ ಬಗ್ಗೆ ದೂರು ದಾಖಲಿಸಿದ್ದಾರೆ!

ಪ್ರತಿದಿನ ಬೆಳಿಗ್ಗೆ 3 ಗಂಟೆಗೆ ಕುರುಪ್ ಅವರ ನೆರೆಯವರ ಕೋಳಿ ನಿರಂತರವಾಗಿ ಕೂಗಲು ಪ್ರಾರಂಭಿಸುತ್ತದೆ. ಅದು ಅವರ ನಿದ್ರೆಗೆ ತೊಂದರೆ ಮಾಡುತ್ತಿದೆ ಮತ್ತು ಶಾಂತಿಯುತ ಜೀವನವನ್ನು ಅಡ್ಡಿಪಡಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರಾಧಾಕೃಷ್ಣ ಕುರುಪ್ ಅವರಿಗೆ ಸಾಕಾಗಿತ್ತು. ತನ್ನ ನೆರೆಮನೆಯ ಅನಿಲ್ ಕುಮಾರ್ ಎಂಬುವವರ ಕೋಳಿ ತನ್ನ ನಿದ್ರೆಗೆ ಭಂಗ ತರುತ್ತಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ: ಕರ್ನಾಟಕದಲ್ಲಿ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ

ಅಧಿಕಾರಿಗಳು ಈ ದೂರನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ಆರಂಭಿಸಿದರು. ಕೋಳಿಯೇ ಎರಡೂ ಮನೆಯ ಸಮಸ್ಯೆಗೆ ಕಾರಣ ಎಂದು ನಿರ್ಧರಿಸಿದರು. ಇಬ್ಬರನ್ನೂ ಕರೆಸಿ ಈ ಸಮಸ್ಯೆಯ ಬಗ್ಗೆ ಚರ್ಚಿಸಲಾಯಿತು. ಬಳಿಕ ಅಧಿಕಾರಿಗಳು ಆ ಸ್ಥಳವನ್ನು ಪರಿಶೀಲಿಸಿದರು.

ನೆರೆಹೊರೆಯವರು ತಮ್ಮ ಕೋಳಿಗಳನ್ನು ತಮ್ಮ ಮನೆಯ ಮೇಲಿನ ಮಹಡಿಯಲ್ಲಿ ಇಟ್ಟುಕೊಂಡಿರುವುದು ಕಂಡುಬಂದಿದೆ. ರಾಧಾಕೃಷ್ಣ ಕುರುಪ್ ಅವರಿಗೆ ಕೋಳಿಯ ಕೂಗುವಿಕೆಯಿಂದ ನಿಜಕ್ಕೂ ತೊಂದರೆಯಾಗುತ್ತಿತ್ತು ಎಂದು ತನಿಖೆಯಲ್ಲಿ ಗೊತ್ತಾಗಿದೆ. ವಿವಾದವನ್ನು ಬಗೆಹರಿಸಲು ಕೋಳಿ ಶೆಡ್ ಅನ್ನು ಮೇಲಿನ ಮಹಡಿಯಿಂದ ಮನೆಯ ಅಂಗಳದ ಪಕ್ಕಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳು ರಾಧಾಕೃಷ್ಣ ಅವರ ನೆರೆಹೊರೆಯವರಿಗೆ ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ