AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಹೆಂಡತಿಯನ್ನು ಕೊಂದು ಕೊಳಕ್ಕೆ ಶವ ಎಸೆದ ಗಂಡ

ಕೇರಳದಲ್ಲಿ ಭೀಕರ ಕೊಲೆಯೊಂದು ಬೆಳಕಿಗೆ ಬಂದಿದೆ. ತನ್ನ ಹೆಂಡತಿಯನ್ನು ಕೊಲೆ ಮಾಡಿದ ಗಂಡ ಆಕೆಯ ಮೃತದೇಹವನ್ನು ಕೊಳಕ್ಕೆ ಎಸೆದಿದ್ದಾನೆ. ಈ ಆರೋಪದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೇರಳದ ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ ಬಳಿ ಈ ಘಟನೆ ನಡೆದಿದೆ. ತನಿಖೆಯ ಸಮಯದಲ್ಲಿ ಪೊಲೀಸರು ಜಾರ್ಜ್‌ನನ್ನು ಪ್ರಶ್ನಿಸಿದರು. ಆಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಆತನನ್ನು ಬಂಧಿಸಲಾಯಿತು.

ಕೇರಳದಲ್ಲಿ ಹೆಂಡತಿಯನ್ನು ಕೊಂದು ಕೊಳಕ್ಕೆ ಶವ ಎಸೆದ ಗಂಡ
Crime
ಸುಷ್ಮಾ ಚಕ್ರೆ
|

Updated on:Oct 03, 2025 | 10:57 PM

Share

ಕೊಟ್ಟಾಯಂ, ಅಕ್ಟೋಬರ್ 3: ತನ್ನ ವಿವಾಹೇತರ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕೆ ಪತ್ನಿಯನ್ನು ಕೊಂದು ಆಕೆಯ ಶವವನ್ನು ಕೊಳಕ್ಕೆ ಎಸೆದ ಆರೋಪದ ಮೇಲೆ ಕೇರಳದ (Kerala) 59 ವರ್ಷದ ವ್ಯಕ್ತಿಯೊಬ್ಬನನ್ನು ಇಂದು ಬಂಧಿಸಲಾಗಿದೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ ಬಳಿ ಈ ಘಟನೆ ನಡೆದಿದೆ. ಸ್ಯಾಮ್ ಜಾರ್ಜ್ ಸಂಜೆ 6 ಗಂಟೆ ಸುಮಾರಿಗೆ ಮನೆಗೆ ನುಗ್ಗಿ, ಪತ್ನಿಯ ಕತ್ತು ಹಿಸುಕಿ ಕೊಂದು, ಆಕೆಯ ಶವವನ್ನು ಕಾರಿನ ಬೂಟಿನಲ್ಲಿ ಇರಿಸಿಕೊಂಡು, ನಂತರ ಇಡುಕ್ಕಿ ಜಿಲ್ಲೆಯ ಉಡುಂಬನ್ನೂರ್ ಬಳಿಯ ಕೊಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಜ್ ಕಳೆದ 15 ವರ್ಷಗಳಿಂದ ತನ್ನ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದನು. ಎರಡು ಅಂತಸ್ತಿನ ಮನೆಯಲ್ಲಿ ಮೇಲೆ ಆತ ವಾಸವಾಗಿದ್ದರೆ ಕೆಳಗಿನ ಮಹಡಿಯಲ್ಲಿ ಆತನ ಹೆಂಡತಿ ವಾಸವಾಗಿದ್ದಳು. ಆತ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಅವನ ಪತ್ನಿ ಜೆಸ್ಸಿ (49) ತಮ್ಮ ಮೂವರು ಮಕ್ಕಳೊಂದಿಗೆ ಇದ್ದರು. ಮಕ್ಕಳು ವಿದೇಶಕ್ಕೆ ತೆರಳಿದ ನಂತರ, ಜೆಸ್ಸಿ ಕಳೆದ 6 ತಿಂಗಳಿನಿಂದ ಒಂಟಿಯಾಗಿ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ

ಜಾರ್ಜ್ ಕೂಡ ಕೆಲಸಕ್ಕಾಗಿ ವಿದೇಶದಲ್ಲಿಯೇ ಇದ್ದು, ಕಳೆದ 6 ತಿಂಗಳಿನಿಂದ ಎಂಜಿ ವಿಶ್ವವಿದ್ಯಾಲಯದಲ್ಲಿ ಪ್ರವಾಸೋದ್ಯಮದಲ್ಲಿ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿದೇಶದಲ್ಲಿದ್ದ ಮಕ್ಕಳು ಎಷ್ಟೇ ಫೋನ್ ಮಾಡಿದರೂ ಸೆಪ್ಟೆಂಬರ್ 26ರಿಂದ ತಮ್ಮ ತಾಯಿಯನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದರು. ಅವರು ಪೊಲೀಸರೊಂದಿಗೆ ಅವರ ಮನೆಯನ್ನು ಹುಡುಕಿದರು. ಆದರೆ ಏನೂ ಸಿಕ್ಕಿರಲಿಲ್ಲ.

ಆರಂಭದಲ್ಲಿ, ನಾಪತ್ತೆ ಪ್ರಕರಣ ದಾಖಲಾಗಿತ್ತು. ತನಿಖೆಯ ಸಮಯದಲ್ಲಿ ಪೊಲೀಸರು ಜಾರ್ಜ್‌ನನ್ನು ಪ್ರಶ್ನಿಸಿದರು. ಆಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಆತನನ್ನು ಬಂಧಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Fri, 3 October 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ