ಕೇರಳ: ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಫಾನ್

ತನ್ನ ಪ್ರೇಯಸಿ ಹಾಗೂ ಕುಟುಂಬಸದಸ್ಯರೆಲ್ಲರನ್ನೂ ಕೊಲೆ ಮಾಡಿ ಯುವಕನೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. 23 ವರ್ಷದ ಯುವಕ ಪೊಲೀಸರಿಗೆ ಶರಣಾಗಿದ್ದಾನೆ. ಆತ ಪೊಲೀಸ್ ಠಾಣೆಗೆ ಹೋಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಆರು ಜನರನ್ನು ಕ್ರೂರವಾಗಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಕೇರಳ: ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಫಾನ್
ಆರೋಪಿ ಅಫಾನ್
Image Credit source: India TV

Updated on: Feb 25, 2025 | 10:28 AM

ತಿರುವನಂತಪುರಂ, ಫೆಬ್ರವರಿ 25: ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. 23 ವರ್ಷದ ಯುವಕ ಅಫಾನ್ ಪೊಲೀಸರಿಗೆ ಶರಣಾಗಿದ್ದಾನೆ. ಆತ ಪೊಲೀಸ್ ಠಾಣೆಗೆ ಹೋಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಆರು ಜನರನ್ನು ಕ್ರೂರವಾಗಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆತನ ತಾಯಿ ಅದೃಷ್ಟವಶಾತ್ ಬದುಕುಳಿದಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಯ ತಾಯಿಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಐದು ಜನರ ಭೀಕರ ಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಮುಂದೆ ಶರಣಾದ ಆರೋಪಿ, ಕುಟುಂಬ ಸದಸ್ಯರನ್ನು ಕೊಂದ ನಂತರ ವಿಷ ಸೇವಿಸಿದ್ದಾಗಿ ಹೇಳಿದ್ದಾನೆ, ನಂತರ ಪೊಲೀಸರು ಅವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ: ಮದುವೆಯಾಗದೆ ಮಗಳು ಗರ್ಭಿಣಿ, ಕೋಪದಲ್ಲಿ ಆಕೆಯನ್ನು ಕೊಂದ ತಾಯಿ

ಆರೋಪಿಯನ್ನು ಪೆರುಮಾಳದ ನಿವಾಸಿ ಅಫಾನ್ ಎಂದು ಗುರುತಿಸಲಾಗಿದೆ. ಮೂರು ಮನೆಗಳಲ್ಲಿ ವಾಸಿಸುತ್ತಿದ್ದ ಆರು ಜನರನ್ನು ತಾನು ಕೊಂದಿರುವುದಾಗಿ ಅಫಾನ್ ಒಪ್ಪಿಕೊಂಡಿದ್ದಾನೆ. ಆರೋಪಿಗಳ ಹೇಳಿಕೆಗಳ ತನಿಖೆಗೆ ಹೋದ ಪೊಲೀಸರು ಮೂರು ಮನೆಗಳಲ್ಲಿ ಆರು ಮಂದಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ತಾಯಿಯನ್ನು ಹೊರತುಪಡಿಸಿ ಎಲ್ಲರೂ ಸಾವನ್ನಪ್ಪಿದ್ದಾರೆ
ಪೊಲೀಸರು ಬರುವ ಮೊದಲೇ ಅಫಾನ್ ಅವರ ತಾಯಿ ಹೊರತುಪಡಿಸಿ ಎಲ್ಲರೂ ಸಾವನ್ನಪ್ಪಿದ್ದರು. ಅವರ ತಾಯಿ ಶೆಮಿ ಅವರ ಸ್ಥಿತಿ ಗಂಭೀರವಾಗಿದೆ. ಅವರು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೆಳತಿ ಸೇರಿದಂತೆ ಕುಟುಂಬ ಸದಸ್ಯರ ಕೊಲೆ
ಆರೋಪಿಯು ತನ್ನ ಅಜ್ಜಿ, ಕಿರಿಯ ಸಹೋದರ ಮತ್ತು ಇತರ ಸಂಬಂಧಿಕರು ಸೇರಿದಂತೆ ತನ್ನದೇ ಕುಟುಂಬದ ಐದು ಸದಸ್ಯರನ್ನು ಕೊಂದಿದ್ದಾನೆ. ಮೃತರನ್ನು ಅಜ್ಜಿ ಸಲ್ಮಾಬಿ, 13 ವರ್ಷದ ಸಹೋದರ ಅಫ್ಸಾನ್, ಆತನ ತಂದೆಯ ಸಹೋದರ ಲತೀಫ್, ಲತೀಫ್ ಪತ್ನಿ ಶಾಹಿದಾ ಮತ್ತು ಗೆಳತಿ ಫರ್ಜಾನಾ ಎಂದು ಗುರುತಿಸಲಾಗಿದೆ.

ಪೊಲೀಸರು ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕ್ರೂರ ಹತ್ಯೆಗಳಿಗೆ ಕಾರಣಗಳನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:59 am, Tue, 25 February 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us