AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಟ್ಟೆಯಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ಭೂಪ; ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ

ನೌಫಲ್ ಸೆಪ್ಟೆಂಬರ್ 19ರಂದು ದುಬೈನಿಂದ ಬಂದಿದ್ದ. ಆತ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಆತನನ್ನು ತಪಾಸಣೆ ಮಾಡಿದ್ದರು.

Shocking News: ಹೊಟ್ಟೆಯಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ಭೂಪ; ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ
ಚಿನ್ನದ ಸ್ಮಗ್ಲಿಂಗ್ (ಸಾಂದರ್ಭಿಕ ಚಿತ್ರ)
TV9 Web
| Updated By: ಸುಷ್ಮಾ ಚಕ್ರೆ|

Updated on: Sep 20, 2022 | 11:24 AM

Share

ತಿರುವನಂತಪುರಂ: ಹೊಟ್ಟೆಯಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಸ್ಮಗ್ಲಿಂಗ್ (Gold Smuggling) ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೇರಳದ (Kerala) ಕರಿಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿ 36 ವರ್ಷದ ನೌಫಲ್ ತನ್ನ ಹೊಟ್ಟೆಯಲ್ಲಿ 4 ಚಿನ್ನದ ಕ್ಯಾಪ್ಸುಲ್‌ಗಳನ್ನು ಸಾಗಿಸುತ್ತಿದ್ದನು. ಆತ ಮಲಪ್ಪುರಂ (Malappuram) ಜಿಲ್ಲೆಯ ನಿವಾಸಿಯಾಗಿದ್ದಾನೆ. ವರದಿಗಳ ಪ್ರಕಾರ, ನೌಫಲ್ ಸೆಪ್ಟೆಂಬರ್ 19ರಂದು ದುಬೈನಿಂದ (Dubai) ಬಂದಿದ್ದ. ಆತ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಆತನನ್ನು ತಪಾಸಣೆ ಮಾಡಿದ್ದರು.

ತಮಗೆ ಸಿಕ್ಕ ಸುಳಿವಿನ ಮೇರೆಗೆ ಪೊಲೀಸರು ಆತನನ್ನು ವಿಮಾನ ನಿಲ್ದಾಣದಲ್ಲಿ ಕೂಲಂಕುಷವಾಗಿ ಪರಿಶೀಲಿಸಿದರೂ ಎಲ್ಲೂ ಚಿನ್ನ ಪತ್ತೆಯಾಗಿರಲಿಲ್ಲ. ನಂತರ ಅವನನ್ನು ವೈದ್ಯಕೀಯ ಸ್ಕ್ಯಾನ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ಹೊಟ್ಟೆಯಲ್ಲಿ ಚಿನ್ನದ ಲೋಹ ಪತ್ತೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನ ನಿಲ್ದಾಣದಲ್ಲಿ ಈ ರೀತಿಯ 59 ಚಿನ್ನ ಕಳ್ಳಸಾಗಣೆ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!

ನೌಫಲ್ ತಮ್ಮ ಗುದನಾಳದಲ್ಲಿ 4 ಚಿನ್ನದ ಕ್ಯಾಪ್ಸುಲ್​ಗಳನ್ನು ಬಚ್ಚಿಟ್ಟುಕೊಂಡು ದುಬೈನಿಂದ ಬಂದಿದ್ದ. ಈ ಚಿನ್ನದ ತೂಕ 1.063 ಕೆಜಿ ಇತ್ತು. ಪೊಲೀಸರು ಆತನ ದೇಹ ಮತ್ತು ಲಗೇಜನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಆದರೆ, ಅವರಿಗೆ ಚಿನ್ನ ಪತ್ತೆಯಾಗಲಿಲ್ಲ. ಬಳಿಕ ಆತನನ್ನು ಕೊಂಡೊಟ್ಟಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ವಿವರವಾದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅವರ ದೇಹದ ಎಕ್ಸ್-ರೇ ಹೊಟ್ಟೆಯೊಳಗೆ ಚಿನ್ನವನ್ನು ಹೊಂದಿರುವ ನಾಲ್ಕು ಕ್ಯಾಪ್ಸುಲ್​ಗಳು ಇರುವುದು ಪತ್ತೆಯಾಯಿತು. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ