AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಟ್ಟೆಯಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ಭೂಪ; ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ

ನೌಫಲ್ ಸೆಪ್ಟೆಂಬರ್ 19ರಂದು ದುಬೈನಿಂದ ಬಂದಿದ್ದ. ಆತ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಆತನನ್ನು ತಪಾಸಣೆ ಮಾಡಿದ್ದರು.

Shocking News: ಹೊಟ್ಟೆಯಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ಭೂಪ; ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ
ಚಿನ್ನದ ಸ್ಮಗ್ಲಿಂಗ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 20, 2022 | 11:24 AM

Share

ತಿರುವನಂತಪುರಂ: ಹೊಟ್ಟೆಯಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಸ್ಮಗ್ಲಿಂಗ್ (Gold Smuggling) ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೇರಳದ (Kerala) ಕರಿಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿ 36 ವರ್ಷದ ನೌಫಲ್ ತನ್ನ ಹೊಟ್ಟೆಯಲ್ಲಿ 4 ಚಿನ್ನದ ಕ್ಯಾಪ್ಸುಲ್‌ಗಳನ್ನು ಸಾಗಿಸುತ್ತಿದ್ದನು. ಆತ ಮಲಪ್ಪುರಂ (Malappuram) ಜಿಲ್ಲೆಯ ನಿವಾಸಿಯಾಗಿದ್ದಾನೆ. ವರದಿಗಳ ಪ್ರಕಾರ, ನೌಫಲ್ ಸೆಪ್ಟೆಂಬರ್ 19ರಂದು ದುಬೈನಿಂದ (Dubai) ಬಂದಿದ್ದ. ಆತ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಆತನನ್ನು ತಪಾಸಣೆ ಮಾಡಿದ್ದರು.

ತಮಗೆ ಸಿಕ್ಕ ಸುಳಿವಿನ ಮೇರೆಗೆ ಪೊಲೀಸರು ಆತನನ್ನು ವಿಮಾನ ನಿಲ್ದಾಣದಲ್ಲಿ ಕೂಲಂಕುಷವಾಗಿ ಪರಿಶೀಲಿಸಿದರೂ ಎಲ್ಲೂ ಚಿನ್ನ ಪತ್ತೆಯಾಗಿರಲಿಲ್ಲ. ನಂತರ ಅವನನ್ನು ವೈದ್ಯಕೀಯ ಸ್ಕ್ಯಾನ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ಹೊಟ್ಟೆಯಲ್ಲಿ ಚಿನ್ನದ ಲೋಹ ಪತ್ತೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನ ನಿಲ್ದಾಣದಲ್ಲಿ ಈ ರೀತಿಯ 59 ಚಿನ್ನ ಕಳ್ಳಸಾಗಣೆ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!

ನೌಫಲ್ ತಮ್ಮ ಗುದನಾಳದಲ್ಲಿ 4 ಚಿನ್ನದ ಕ್ಯಾಪ್ಸುಲ್​ಗಳನ್ನು ಬಚ್ಚಿಟ್ಟುಕೊಂಡು ದುಬೈನಿಂದ ಬಂದಿದ್ದ. ಈ ಚಿನ್ನದ ತೂಕ 1.063 ಕೆಜಿ ಇತ್ತು. ಪೊಲೀಸರು ಆತನ ದೇಹ ಮತ್ತು ಲಗೇಜನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಆದರೆ, ಅವರಿಗೆ ಚಿನ್ನ ಪತ್ತೆಯಾಗಲಿಲ್ಲ. ಬಳಿಕ ಆತನನ್ನು ಕೊಂಡೊಟ್ಟಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ವಿವರವಾದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅವರ ದೇಹದ ಎಕ್ಸ್-ರೇ ಹೊಟ್ಟೆಯೊಳಗೆ ಚಿನ್ನವನ್ನು ಹೊಂದಿರುವ ನಾಲ್ಕು ಕ್ಯಾಪ್ಸುಲ್​ಗಳು ಇರುವುದು ಪತ್ತೆಯಾಯಿತು. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ