AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Monkeypox: ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್​ ಕೇಸ್ ಪತ್ತೆ; ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ

ಕೇರಳದಲ್ಲಿ ಮಂಕಿಪಾಕ್ಸ್​ ಪ್ರಕರಣ ಪತ್ತೆಯಾಗಿರುವುದರಿಂದ ಈ ನಡುವೆ ಕೇಂದ್ರ ಸರ್ಕಾರವು ಕೇರಳ ರಾಜ್ಯಕ್ಕೆ ಸಹಾಯ ಮಾಡಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿದೆ.

Kerala Monkeypox: ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್​ ಕೇಸ್ ಪತ್ತೆ; ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರImage Credit source: NDTV
TV9 Web
| Edited By: |

Updated on:Jul 15, 2022 | 11:17 AM

Share

ತಿರುವನಂತಪುರಂ: ಯುಎಇಯಿಂದ (UAE) ವಾಪಸಾದ ವ್ಯಕ್ತಿಯೊಬ್ಬರಿಗೆ ಕೇರಳದಲ್ಲಿ ಮಂಕಿಪಾಕ್ಸ್​ (Monkeypox) ದೃಢಪಡುವ ಮೂಲಕ ಕೇರಳದಲ್ಲಿ (Kerala Monkeypox) ಭಾರತದಲ್ಲೇ ಮೊದಲ ಮಂಕಿಪಾಕ್ಸ್​ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ತಿಳಿಸಿದ್ದರು. ಮಂಗಳವಾರ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಂಕಿಪಾಕ್ಸ್​ ರೋಗಿಯ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಸಚಿವೆ ತಿಳಿಸಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರವು ಕೇರಳ ರಾಜ್ಯಕ್ಕೆ ಸಹಾಯ ಮಾಡಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿದೆ.

ಕೇರಳಕ್ಕೆ ಕೇಂದ್ರ ಸರ್ಕಾರ ಕಳುಹಿಸಿರುವ ತಂಡವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಡಾ. RML ಆಸ್ಪತ್ರೆ, ನವದೆಹಲಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳು, ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಯ ತಜ್ಞರನ್ನು ಒಳಗೊಂಡಿದೆ.

ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ಮಂಕಿಪಾಕ್ಸ್​ ತಗುಲಿರುವ ರೋಗಿಯ ಸ್ಥಿತಿ ಗಂಭೀರವಾಗಿಲ್ಲ. ಅವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್​ ನಿನ್ನೆ ಹೇಳಿದ್ದರು. ರೋಗಿಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಅವರ ಪ್ರಾಥಮಿಕ ಸಂಪರ್ಕಗಳನ್ನು ಗುರುತಿಸಲಾಗಿದೆ. ಅವರ ತಂದೆ, ತಾಯಿ, ಟ್ಯಾಕ್ಸಿ ಚಾಲಕ, ಆಟೋ ಚಾಲಕ ಮತ್ತು ಪಕ್ಕದ ಸೀಟ್​ನಲ್ಲಿ ಕುಳಿತು ವಿಮಾನದಲ್ಲಿ ಪ್ರಯಾಣಿಸಿದ್ದ 11 ಸಹ ಪ್ರಯಾಣಿಕರನ್ನು ಗುರುತಿಸಲಾಗಿದೆ.

ಇದನ್ನೂ ಓದಿ
Image
ಮಂಕಿಪಾಕ್ಸ್: ಯುರೋಪ್​​​ನಲ್ಲಿ ತುರ್ತು ಕ್ರಮ ಕೈಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಕರೆ
Image
Monkeypox: ಮಂಕಿಪಾಕ್ಸ್​ ಸೋಂಕನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ
Image
Monkeypox ಮಂಕಿಪಾಕ್ಸ್‌ ಎದುರಿಸಲು ಭಾರತ ಸಿದ್ಧ ಎಂದ ಐಸಿಎಂಆರ್; ಸಾಮೂಹಿಕ ಲಸಿಕೆ ಅಗತ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ
Image
Monkeypox alert: ಆಫ್ರಿಕಾ, ಯುರೋಪ್ ಮತ್ತು ಅಮೇರಿಕನ್ ದೇಶಗಳಗಳಲ್ಲಿ ಮಂಕಿಪಾಕ್ಸ್ ಹೊಸ ಸಾಂಕ್ರಾಮಿಕ ರೋಗ ಪತ್ತೆ

ಇದನ್ನೂ ಓದಿ: Monkeypox: ಮಂಕಿಪಾಕ್ಸ್​ ರೋಗದ ಲಕ್ಷಣಗಳೇನು? ಯಾವಾಗ ಚಿಕಿತ್ಸೆ ಪಡೆಯಬೇಕು?

ಇದಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಪತ್ರ ಬರೆದಿತ್ತು. ಯುರೋಪ್ ಮತ್ತು ಅಮೆರಿಕಾದಲ್ಲಿನ ಮಂಕಿಪಾಕ್ಸ್​ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಸರ್ಕಾರವು ಮೇ ತಿಂಗಳಲ್ಲಿ ಪ್ರತ್ಯೇಕತೆ ಮತ್ತು ಸಂಪರ್ಕ- ಪತ್ತೆಹಚ್ಚುವಿಕೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಿತ್ತು.

ಕೇರಳದ ವ್ಯಕ್ತಿ ಮಂಕಿಪಾಕ್ಸ್​ ವೈರಸ್ ಸೋಂಕಿಗೆ ಒಳಗಾಗಿದ್ದು, ಅವರುಕೊಲ್ಲಂ ಜಿಲ್ಲೆಯವರಾಗಿದ್ದಾರೆ ಎನ್ನಲಾಗಿದೆ. ಅವರು ಜುಲೈ 12 ರಂದು ಯುಎಇಯಿಂದ ಹಿಂದಿರುಗಿದ್ದರು. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ರೋಗಲಕ್ಷಣದ ವ್ಯಕ್ತಿಯ ಮಾದರಿಗಳ ಪರೀಕ್ಷೆಯ ಮೂಲಕ ಪ್ರಕರಣವು ದೃಢಪಟ್ಟಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಕ್ರೀನಿಂಗ್, ಟೆಸ್ಟಿಂಗ್: ಮಂಕಿಪಾಕ್ಸ್​ ಕುರಿತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಹೊಸ ಮಾರ್ಗಸೂಚಿ

ಈ ವಾರದ ಆರಂಭದಲ್ಲಿ 63 ದೇಶಗಳಿಂದ 9,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು WHO ಹೇಳಿದೆ. ಮಂಕಿಪಾಕ್ಸ್ ಒಂದು ವೈರಲ್ ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬಿನಂತೆಯೇ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಈ ರೋಗದ ಹರಡುವಿಕೆ ವೇಗವಾಗಿದ್ದರೂ ಅದರಿಂದ ಜೀವ ಕಳೆದುಕೊಳ್ಳುವ ಆತಂಕ ಕಡಿಮೆ ಎನ್ನಲಾಗಿದೆ. ಇಲ್ಲಿಯವರೆಗೆ, ಭಾರತದಲ್ಲಿ ಮಂಕಿಪಾಕ್ಸ್ ವೈರಸ್ ಪ್ರಕರಣಗಳು ವರದಿಯಾಗಿಲ್ಲ. ಜುಲೈ 11ರ ಹೊತ್ತಿಗೆ ಅಮೆರಿಕಾದಲ್ಲಿ ಮಂಕಿಪಾಕ್ಸ್​ನ ಸುಮಾರು 800 ಪ್ರಕರಣಗಳು ದಾಖಲಾಗಿತ್ತು. ಆದರೆ, ಜಾಗತಿಕವಾಗಿ 57 ದೇಶಗಳಲ್ಲಿ 8,200ಕ್ಕೂ ಹೆಚ್ಚು ಮಂಕಿಪಾಕ್ಸ್​ ಪ್ರಕರಣಗಳು ಪತ್ತೆಯಾಗಿದೆ.

Published On - 9:57 am, Fri, 15 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ