AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮುಂಗಾರು-2020: ದೇವರನಾಡಿಗೆ ಮತ್ತೆ ಕಾದಿದೆ ಮುಂಗಾರು ವಿಕೋಪ!

ತಿರುವನಂತಪುರಂ: ತನ್ನ ಅರ್ಧ ಗಡಿಭಾಗವನ್ನು ಕರ್ನಾಟಕದ ಜೊತೆ ಹಂಚಿಕೊಂಡಿರುವ ಕೇರಳದಲ್ಲಿ ಈ ಬಾರಿಯೂ ಭಾರೀ ಮುಂಗಾರು ಮಳೆ ಸುರಿಯಲಿದೆ. ದೇವರನಾಡಿನ ಭೀಕರ ಚರಿತ್ರೆಯಲ್ಲಿ ಮೊದಲ ಬಾರಿಗೆ ಇನ್ನಿಲ್ಲದಂತೆ ಕಾಡಿದ್ದ ಕೇರಳ ಮುಂಗಾರು-2019 ಇನ್ನೂ ಜನಮಾನಸದಲ್ಲಿ ದುಃಸ್ವಪ್ನದಂತೆ ತೊಟ್ಟಿಕ್ಕುತ್ತಿರುವಾಗ ಕೇರಳ ಮುಂಗಾರು-2020 ಇನ್ನೂ ಭೀಕರವಾಗಿರಲಿದೆ ಎಂದು ಹವಾಮಾನ ಇಲಾಖೆ ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ಮಳೆ ಸುರಿಯುವುದಕ್ಕೆ ಹೇಳಿಮಾಡಿಸಿದಂತಹ ಅನುಕೂಲಕರ ವಾತಾವರಣ ಇದೆ! ನದಿಗಳು ಉಕ್ಕಿ ಹರಿಯಲಿವೆ, ಅಣೆಕಟ್ಟೆಗಳು ಕಟ್ಟೆ ಒಡಯಲಿವೆ. ಒಟ್ಟಾರೆಯಾಗಿ ಕೇರಳ ಮುಂಗಾರು-2019 ರಿಪೀಟ್​ ಶೋ […]

ಕೇರಳ ಮುಂಗಾರು-2020: ದೇವರನಾಡಿಗೆ ಮತ್ತೆ ಕಾದಿದೆ ಮುಂಗಾರು ವಿಕೋಪ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2020 | 5:56 PM

Share

ತಿರುವನಂತಪುರಂ: ತನ್ನ ಅರ್ಧ ಗಡಿಭಾಗವನ್ನು ಕರ್ನಾಟಕದ ಜೊತೆ ಹಂಚಿಕೊಂಡಿರುವ ಕೇರಳದಲ್ಲಿ ಈ ಬಾರಿಯೂ ಭಾರೀ ಮುಂಗಾರು ಮಳೆ ಸುರಿಯಲಿದೆ. ದೇವರನಾಡಿನ ಭೀಕರ ಚರಿತ್ರೆಯಲ್ಲಿ ಮೊದಲ ಬಾರಿಗೆ ಇನ್ನಿಲ್ಲದಂತೆ ಕಾಡಿದ್ದ ಕೇರಳ ಮುಂಗಾರು-2019 ಇನ್ನೂ ಜನಮಾನಸದಲ್ಲಿ ದುಃಸ್ವಪ್ನದಂತೆ ತೊಟ್ಟಿಕ್ಕುತ್ತಿರುವಾಗ ಕೇರಳ ಮುಂಗಾರು-2020 ಇನ್ನೂ ಭೀಕರವಾಗಿರಲಿದೆ ಎಂದು ಹವಾಮಾನ ಇಲಾಖೆ ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಮಳೆ ಸುರಿಯುವುದಕ್ಕೆ ಹೇಳಿಮಾಡಿಸಿದಂತಹ ಅನುಕೂಲಕರ ವಾತಾವರಣ ಇದೆ! ನದಿಗಳು ಉಕ್ಕಿ ಹರಿಯಲಿವೆ, ಅಣೆಕಟ್ಟೆಗಳು ಕಟ್ಟೆ ಒಡಯಲಿವೆ. ಒಟ್ಟಾರೆಯಾಗಿ ಕೇರಳ ಮುಂಗಾರು-2019 ರಿಪೀಟ್​ ಶೋ ಈ ಬಾರಿಯೂ ಇರಲಿದೆ ಎನ್ನಲಾಗಿದೆ. ಈಗಾಗಲೇ ಕೊರೊನಾ ಸೋಂಕಿನಿಂದ ನಿತ್ರಾಣಗೊಂಡಿರುವ ಕೇರಳದಲ್ಲಿ ಈ ಬಾರಿ ಬೇಸಿಗೆ ಮಳೆ ಬೀಳಲಿಲ್ಲ. ಬಿರುಬಿಸಿಲು ಜೋರಾಗಿತ್ತು. ಹೀಗಾಗಿ ಕಳೆದ ಒಂದೂವರೆ ತಿಂಗಳಿಂದ ಕೇರಳದಲ್ಲಿ ವಿಪರೀತ ತಾಪಮಾನ ಮನೆಮಾಡಿದೆ. ದಿನದಲ್ಲಿ 35 ಡಿಗ್ರಿ ಸೆಲ್ಸಿಯಸ್ ಇದ್ದರೆ ರಾತ್ರಿ ವೇಳೆ 26 ಡಿಗ್ರಿ ತಾಪಮಾನ ನಿರಂತರವಾಗಿತ್ತು. ಇದರಿಂದ ವಾತಾವರಣ ಮತ್ತಷ್ಟು ಶಾಖದಿಂದ ಕೂಡಿರುತ್ತದೆ. ಹಾಗಾಗಿ ನಿಗದಿಯಂತೆ ಜೂನ್ ಆರಂಭಕ್ಕೆ ವಾಯವ್ಯ ಬೀಸುಗಾಳಿ ಕೇರಳಕ್ಕೆ ಅಪ್ಪಳಿಸಲಿದೆ. ಇದು ಮಳೆ ಸುರಿಯುವುದಕ್ಕೆ ಹೇಳಿಮಾಡಿಸಿದಂತಹ ಅನುಕೂಲಕರ ವಾತಾವರಣ.

ರಾಜ್ಯದ ದಕ್ಷಿಣ ಮಧ್ಯೆ ಭಾಗದಲ್ಲಿ ಸಮುದ್ರದಲ್ಲಿ ತಾಪಮಾನ ಎಷ್ಟಿದೆ ಎಂಬುದನ್ನು ಆಧರಿಸಿ, ಕೇರಳದಲ್ಲಿ ಮಳೆಯ ಪ್ರಮಾಣವನ್ನು ನಿರ್ಧರಿಸಲಾಗುತ್ತದೆ. ಸದ್ಯಕ್ಕೆ ಇಲ್ಲಿ ತಂಪಾದ ವಾತಾವರಣವಿದೆ. ಇದು ಮೋಡಗಳ ಸೃಷ್ಟಿಗೆ ಸಹಾಯಕವಾಗಲಿದೆ. ಆದರೆ ಅದು ಪಶ್ಚಿಮ ಘಟ್ಟಗಳತ್ತ ಸರಿದುಹೋಗುವುದಿಲ್ಲ. ಹಾಗಾಗಿ ಕೇರಳದಲ್ಲಿಯೇ ಧೋ ಎಂದು ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ