AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ರಾಹುಲ್​ ಗಾಂಧಿ?-ಇಂದಿನ ಸಭೆಯಲ್ಲಿ ಅವರಾಡಿದ ಒಂದು ಮಾತಿನಿಂದ ಶುರುವಾಗಿದೆ ಕುತೂಹಲ

ಕೇರಳದ ಸಂಸದರಾಗಿರುವ ರಾಹುಲ್​ ಗಾಂಧಿ ಈ ಹಿಂದೆ 2017ರಲ್ಲಿ ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಏರಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಹೀನಾಯವಾಗಿ ಸೋತಿತ್ತು. ಅದರ ನೈತಿಕ ಹೊಣೆ ಹೊತ್ತ ರಾಹುಲ್​ ಗಾಂಧಿ ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ರಾಹುಲ್​ ಗಾಂಧಿ?-ಇಂದಿನ ಸಭೆಯಲ್ಲಿ ಅವರಾಡಿದ ಒಂದು ಮಾತಿನಿಂದ ಶುರುವಾಗಿದೆ ಕುತೂಹಲ
ರಾಹುಲ್​ ಗಾಂಧಿ
TV9 Web
| Edited By: |

Updated on: Oct 16, 2021 | 4:35 PM

Share

ದೆಹಲಿ: ಕಾಂಗ್ರೆಸ್​ ಕಾರ್ಯಕಾರಿ ಸಮಿತಿ(Congress working committee)ಯ ಸಭೆ ನಡೆದ ಬೆನ್ನಲ್ಲೇ ಕಾಂಗ್ರೆಸ್​ ವಲಯದಿಂದ ಇನ್ನೊಂದು ಸುದ್ದಿ ಹೊರಬಿದ್ದಿದೆ. ಕಾಂಗ್ರೆಸ್​ ಅಧ್ಯಕ್ಷ (Congress President) ಸ್ಥಾನಕ್ಕೆ ಮತ್ತೊಮ್ಮೆ ಏರುವ ಬಗ್ಗೆ ರಾಹುಲ್​ ಗಾಂಧಿ ಪರಾಮರ್ಶಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಗಾಂಧಿ (Sonia Gandhi) ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾನು ಹಂಗಾಮಿ ಅಧ್ಯಕ್ಷೆಯಲ್ಲ..ಪೂರ್ಣಾವಧಿ ಅಧ್ಯಕ್ಷೆಯಾಗಿಯೇ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಸಭೆಯಲ್ಲಿ ಸೋನಿಯಾ ಗಾಂಧಿ ಜಿ 23 ನಾಯಕರಿಗೆ ಹೇಳಿದ್ದಾರೆ. ಆದರೆ ಪಂಜಾಬ್​, ರಾಜಸ್ಥಾನ, ಛತ್ತೀಸಗಡ್​, ಮಾಜಿ ರಕ್ಷಣಾ ಸಚಿವ ಎ.ಕೆ.ಅಂಟೋನಿ ಸೇರಿ ಹಲವರು, ರಾಹುಲ್​ ಗಾಂಧಿಯವರಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಹೊರುವಂತೆ ಒತ್ತಾಯಿಸಿದ್ದಾರೆ. ಅವರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್​ ಗಾಂಧಿ, ಖಂಡಿತವಾಗಿಯೂ ನಿಮ್ಮ ಮನವಿಯನ್ನು ಪರಿಗಣಿಸುತ್ತೇನೆ. ಈ ಸಂಬಂಧ ಪರಾಮರ್ಶಿಸುತ್ತೇನೆ ಎಂದು ಹೇಳಿದ್ದಾಗಿ ವರದಿಯಾಗಿದೆ. 

ಇಂದಿನ ಸಭೆಯಲ್ಲಿ ಕಾಂಗ್ರೆಸ್​ ಸಾಂಸ್ಥಿಕ ಹುದ್ದೆಗಳ ಚುನಾವಣೆ ಸೇರಿ, ನೂತನ ಅಧ್ಯಕ್ಷನ ಆಯ್ಕೆ ಬಗ್ಗೆಯೂ ವ್ಯಾಪಕ ಚರ್ಚೆ ನಡೆದಿದೆ. ಮುಂದಿನ ವರ್ಷದ ಸೆಪ್ಟೆಂಬರ್​ ಒಳಗೆ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಾಂಸ್ಥಿಕ ಚುನಾವಣೆಗಳ ವೇಳಾಪಟ್ಟಿಯನ್ನೂ ಈಗಲೇ ಅಂತಿಮಗೊಳಿಸಲಾಗಿದೆ ಎಂದೂ ಹೇಳಲಾಗಿದೆ. ಈ ಮಧ್ಯೆ ಇಂದು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ, ನೀವೀಗ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಿ ಎಂದು ಒತ್ತಾಯಿಸಿದ್ದಾರೆ. ಅದಕ್ಕೆ ನಾನು ನಿಮ್ಮ ಮಾತನ್ನು ಪರಿಗಣಿಸುತ್ತೇನೆ (Will Consider) ಎಂದು ರಾಹುಲ್​ ಗಾಂಧಿ ಉತ್ತರಿಸಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಕೇರಳದ ಸಂಸದರಾಗಿರುವ ರಾಹುಲ್​ ಗಾಂಧಿ ಈ ಹಿಂದೆ 2017ರಲ್ಲಿ ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಏರಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಹೀನಾಯವಾಗಿ ಸೋತಿತ್ತು. ಅದರ ನೈತಿಕ ಹೊಣೆ ಹೊತ್ತ ರಾಹುಲ್​ ಗಾಂಧಿ ರಾಜೀನಾಮೆ ನೀಡಿದ್ದರು. ಅವರು ಹುದ್ದೆಯಿಂದ ಕೆಳಗೆ ಇಳಿದ ಬಳಿಕ ಮತ್ತೆ ಸೋನಿಯಾ ಗಾಂಧಿಯವರು ಮಧ್ಯಂತರ ಅವಧಿಗೆ ಅಧ್ಯಕ್ಷೆಯಾಗಿದ್ದರು. ಆದರೆ ಇದುವರೆಗೂ ಅಂದರೆ ಎರಡು ವರ್ಷವಾದರೂ ಕಾಂಗ್ರೆಸ್​ಗೆ ನೂತನ ಅಧ್ಯಕ್ಷ ಸಿಗಲಿಲ್ಲ. ಈ ಬಗ್ಗೆ ಅವರದ್ದೇ ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪದೇಪದೆ ಸೋನಿಯಾ ಗಾಂಧಿಗೆ ಪತ್ರ ಬರೆದು ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಕೆಲವರು ಮಾಧ್ಯಮಗಳ ಎದುರೂ ಹೇಳಿಕೊಂಡಿದ್ದಾರೆ.  ಇನ್ನು ರಾಹುಲ್​ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿದ ಬಳಿಕ ಪಕ್ಷಕ್ಕೆ ನೂತನ ನಾಯಕರು ಬೇಕು..ಆದರೆ ಗಾಂಧಿ ಕುಟುಂಬದಿಂದ ಹೊರತಾದ ನಾಯಕ ಆಗಿರಬೇಕು ಎಂಬ ಕೂಗೂ ಕೇಳಿಬಂದಿತ್ತು. ಈಗ ಮತ್ತೊಮ್ಮೆ ರಾಹುಲ್​ ಗಾಂಧಿಯೇ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವ ಎಲ್ಲ ಸಾಧ್ಯತೆಗಳೂ ಇದೆ.

ಇದನ್ನೂ ಓದಿ: ಮ್ಯೂಚುವಲ್ ಫಂಡ್​ನ ಫಂಡ್ ಮ್ಯಾನೇಜರ್​ಗಳು ಬಸ್ಸಿನ ಡ್ರೈವರ್ ಅಥವಾ ವಿಮಾನದ ಪೈಲಟ್​ಗಳಿದ್ದಂತೆ: ಡಾ ಬಾಲಾಜಿ ರಾವ್

ನಮ್ಮ ನಾಯಕರು ಯಾರನ್ನೂ ಮುಗಿಸುವ ಪ್ರಶ್ನೆ ಇಲ್ಲ, ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಕುಮಾರಸ್ವಾಮಿಗೆ ಶಿವಕುಮಾರ್ ತಿರುಗೇಟು

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’