AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ನಿಷೇಧಿತ PFI ನಡೆಸುತ್ತಿದ್ದ ಶಸ್ತ್ರಾಸ್ತ್ರ ತರಬೇತಿ ಕೇಂದ್ರ ಮೇಲೆ NIA ದಾಳಿ, ಗ್ರೀನ್ ವ್ಯಾಲಿಯ ಸತ್ಯ ಬಿಚ್ಚಿಟ್ಟ ತನಿಖಾ ಸಂಸ್ಥೆ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿದಲ್ಲಿ ನಡೆಸುತ್ತಿರುವ ಗ್ರೀನ್ ವ್ಯಾಲಿ ಅಕಾಡೆಮಿ ಮೇಲೆ ದಾಳಿ ಮಾಡಿದೆ.

ಕೇರಳ: ನಿಷೇಧಿತ PFI ನಡೆಸುತ್ತಿದ್ದ ಶಸ್ತ್ರಾಸ್ತ್ರ ತರಬೇತಿ ಕೇಂದ್ರ ಮೇಲೆ NIA ದಾಳಿ, ಗ್ರೀನ್ ವ್ಯಾಲಿಯ ಸತ್ಯ ಬಿಚ್ಚಿಟ್ಟ ತನಿಖಾ ಸಂಸ್ಥೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 01, 2023 | 10:21 AM

Share

ಮಂಜೇರಿ, ಆ.1: ಇಂದು (ಆ.1) ಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿದಲ್ಲಿ ನಡೆಸುತ್ತಿರುವ ಗ್ರೀನ್ ವ್ಯಾಲಿ ಅಕಾಡೆಮಿ ಮೇಲೆ ದಾಳಿ ಮಾಡಿದೆ. NIA ವರದಿ ಪ್ರಕಾರ ಗ್ರೀನ್ ವ್ಯಾಲಿಯು ಕೇರಳದ PFI ಯ ಅತ್ಯಂತ ಹಳೆಯ ಮತ್ತು ದೊಡ್ಡ ಶಸ್ತ್ರಾಸ್ತ್ರ ತರಬೇತಿ ಕೇಂದ್ರಗಳಲ್ಲಿ ಒಂದಾಗಿದೆ. ಇದನ್ನು 1994ರಲ್ಲಿ ಪಿಎಫ್‌ಐನ ಹಿಂದಿನ ಸಂಘಟನೆಯಾದ ನ್ಯಾಷನಲ್ ಡೆವಲಪ್‌ಮೆಂಟ್ ಫ್ರಂಟ್ ಅವಧಿಯಲ್ಲಿ ಪ್ರಾರಂಭಿಸಲಾಯಿತು.

ಗ್ರೀನ್ ವ್ಯಾಲಿ ನಿಷೇಧದ ನಂತರ PFI ಕೇರಳದಲ್ಲಿ ಹುಟ್ಟಿಕೊಂಡಿರುವ 18ನೇ ಸಂಘಟನೆಯಾಗಿದೆ ಎಂದು NIA ಹೇಳಿದೆ. ಗ್ರೀನ್ ವ್ಯಾಲಿ ಫೌಂಡೇಶನ್ ನಿರ್ವಹಿಸುವ ಗ್ರೀನ್ ವ್ಯಾಲಿ ಅಕಾಡೆಮಿಯನ್ನು ಆರಂಭದಲ್ಲಿ ಎನ್‌ಡಿಎಫ್‌ನ ಕಾರ್ಯಕರ್ತರು ಶಸ್ತ್ರಾಸ್ತ್ರ ಮತ್ತು ದೈಹಿಕ ತರಬೇತಿಗಾಗಿ ಬಳಸುತ್ತಿದ್ದರು. ಬಳಿಕ ಈ ತರಬೇತಿ ಕೇಂದ್ರವನ್ನು ಪಿಎಫ್‌ಐ ಸದಸ್ಯರು ಬಳಸುತ್ತಿದ್ದರು ಎಂದು ಎನ್‌ಐಎ ಹೇಳಿದೆ. ಈ ಶಸ್ತ್ರಾಸ್ತ್ರ ಮತ್ತು ದೈಹಿಕ ತರಬೇತಿ ಕೇಂದ್ರವು 10 ಎಕರೆಗಳಷ್ಟು ಪ್ರದೇಶದಲ್ಲಿ ಸ್ಥಾಪನೆಯಾಗಿದೆ ಎಂದು ಎನ್‌ಐಎ ಬಹಿರಂಗಪಡಿಸಿದೆ.

ಕೊಲೆಗಳು ಸೇರಿದಂತೆ ಅನೇಕ ಅಪರಾಧ ಕೃತ್ಯಗಳಿಗೆ ಈ ಕೇಂದ್ರವನ್ನು ಪಿಎಫ್‌ಐ ಸದಸ್ಯರು ಬಳಸುತ್ತಿದ್ದಾರೆ. ಈ ಸಂಘಟನೆ ಅಪರಾಧ ಕತ್ಯಗಳನ್ನು ಮಾಡಲು ಬೆಂಬಲ ಮತ್ತು ಅದಕ್ಕೆ ಬೇಕಾಗಿರುವ ಸೌಲಭ್ಯಗಳನ್ನು ನೀಡುತ್ತಿದೆ. ಇನ್ನೂ ಸರ್ಕಾರದ ಮುಂದೆ ಶೈಕ್ಷಣಿಕ ಕೇಂದ್ರ ಎಂಬ ನೆಪದಲ್ಲಿ ಗ್ರೀನ್ ವ್ಯಾಲಿ ಕಾರ್ಯನಿರ್ವಹಿಸುತ್ತಿದೆ ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ

ಮಲಬಾರ್ ಹೌಸ್, ಪೆರಿಯಾರ್ ವ್ಯಾಲಿ, ವಳ್ಳುವನಾಡ್ ಹೌಸ್, ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಮತ್ತು ತಿರುವನಂತಪುರ ಶಿಕ್ಷಣ ಮತ್ತು ಸೇವಾ ಟ್ರಸ್ಟ್ ಇವುಗಳು ಇತ್ತೀಚೆಗೆ NIA ದಾಳಿಗೊಳಗಾದ PFI ತರಬೇತಿ ಕೇಂದ್ರಗಳಾಗಿವೆ. ಶಸ್ತ್ರಾಸ್ತ್ರ ತರಬೇತಿ ಮತ್ತು ಸೈದ್ಧಾಂತಿಕ ಪ್ರಚಾರಕ್ಕಾಗಿ ಬಳಸಲಾಗುತ್ತಿರುವ ಪಿಎಫ್‌ಐ ಅಡಿಯಲ್ಲಿ ನಡೆಸುತ್ತಿರುವ ಇಂತಹ ಸಂಸ್ಥೆಗಳ ಮೇಲೆ ಎನ್‌ಐಎ ದಾಳಿ ನಡೆಸಿ, ತನಿಖೆ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ