AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣದಂಡನೆ ವಿರುದ್ಧ ಕೇರಳದ ನರ್ಸ್‌ನ ಮೇಲ್ಮನವಿ ವಜಾಗೊಳಿಸಿದ ಯೆಮೆನ್ ನ್ಯಾಯಾಲಯ

ಪ್ರಿಯಾ ಅವರ ತಾಯಿ ಯೆಮೆನ್‌ಗೆ ಪ್ರಯಾಣಿಸಲು ಅನುವು ಮಾಡಿರುವ ಮನವಿಯ ಕುರಿತು ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರವನ್ನು ಒತ್ತಾಯಿಸಿದೆ. ಅರಬ್ ರಾಷ್ಟ್ರದಲ್ಲಿ ನಡೆಯುತ್ತಿರುವ ಅಂತರ್ಯುದ್ಧದ ಕಾರಣ 2017 ರಿಂದ ಜಾರಿಗೆ ಬಂದಿರುವ ಭಾರತೀಯ ಪ್ರಜೆಗಳಿಗೆ ಪ್ರಯಾಣ ನಿಷೇಧದ ಹೊರತಾಗಿಯೂ ಯೆಮೆನ್‌ಗೆ ಪ್ರಯಾಣಿಸಲು ಅನುಮತಿ ಕೋರಿ ಪ್ರಿಯಾಳ ತಾಯಿ ಈ ವರ್ಷದ ಆರಂಭದಲ್ಲಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಮರಣದಂಡನೆ ವಿರುದ್ಧ ಕೇರಳದ ನರ್ಸ್‌ನ ಮೇಲ್ಮನವಿ ವಜಾಗೊಳಿಸಿದ ಯೆಮೆನ್ ನ್ಯಾಯಾಲಯ
ನಿಮಿಷ ಪ್ರಿಯಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 17, 2023 | 3:49 PM

Share

ದೆಹಲಿ ನವೆಂಬರ್ 17: ಯೆಮೆನ್ (Yemen) ಪ್ರಜೆಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ 2017ರಿಂದ ದೇಶದಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೇರಳದ (Kerala) ನರ್ಸ್ ನಿಮಿಷ ಪ್ರಿಯಾ (Nimisha Priya) ಅವರ ಮರಣದಂಡನೆ ವಿರುದ್ಧದ ಮೇಲ್ಮನವಿಯನ್ನು ಯೆಮೆನ್ ಸುಪ್ರೀಂಕೋರ್ಟ್ ತಿರಸ್ಕರಿಸಿದೆ ತಲಾಲ್ ಅಬ್ದೋ ಮಹದಿಯನ್ನು ಆತನ ಬಳಿಯಿಂದ ತನ್ನ ಪಾಸ್‌ಪೋರ್ಟ್ ಅನ್ನು ಹಿಂಪಡೆಯುವ ಪ್ರಯತ್ನದಲ್ಲಿ ನಿದ್ದೆಬರುವ ಚುಚ್ಚುಮದ್ದು ನೀಡಿ ಮೂಲಕ ಕೊಂದಿದ್ದಕ್ಕಾಗಿ ಪ್ರಿಯಾಗೆ ಶಿಕ್ಷೆ ವಿಧಿಸಲಾಗಿದೆ.

ಪ್ರಿಯಾ ಅವರ ತಾಯಿ ಯೆಮೆನ್‌ಗೆ ಪ್ರಯಾಣಿಸಲು ಅನುವು ಮಾಡಿರುವ ಮನವಿಯ ಕುರಿತು ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರವನ್ನು ಒತ್ತಾಯಿಸಿದೆ. ಅರಬ್ ರಾಷ್ಟ್ರದಲ್ಲಿ ನಡೆಯುತ್ತಿರುವ ಅಂತರ್ಯುದ್ಧದ ಕಾರಣ 2017 ರಿಂದ ಜಾರಿಗೆ ಬಂದಿರುವ ಭಾರತೀಯ ಪ್ರಜೆಗಳಿಗೆ ಪ್ರಯಾಣ ನಿಷೇಧದ ಹೊರತಾಗಿಯೂ ಯೆಮೆನ್‌ಗೆ ಪ್ರಯಾಣಿಸಲು ಅನುಮತಿ ಕೋರಿ ಪ್ರಿಯಾಳ ತಾಯಿ ಈ ವರ್ಷದ ಆರಂಭದಲ್ಲಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಕೇರಳದ ನರ್ಸ್‌ನ ತಾಯಿ ತನ್ನ ಬಿಡುಗಡೆಯನ್ನು ಪಡೆಯಲು ಮಹದಿಯ ಕುಟುಂಬದೊಂದಿಗೆ ಪರಿಹಾರವನ್ನು ಮಾತುಕತೆ ನಡೆಸಲು ಯೆಮೆನ್‌ಗೆ ಪ್ರಯಾಣಿಸಲು ಬಯಸುತ್ತಾರೆ ಎಂದು ವರದಿಯಾಗಿದೆ. ವಕೀಲರಾದ ಸುಭಾಷ್ ಚಂದರನ್ ಕೆಆರ್ ಪ್ರತಿನಿಧಿಸಿದ ಅರ್ಜಿದಾರರು ಈ ಹಿಂದೆ ತನ್ನ ಮಗಳನ್ನು ಉಳಿಸುವ ಏಕೈಕ ಮಾರ್ಗವೆಂದರೆ ಸಂತ್ರಸ್ತೆಯ ಕುಟುಂಬದೊಂದಿಗೆ ನೇರ ಮಾತುಕತೆ ನಡೆಸುವುದಾಗಿದೆ, ಈ ಪ್ರಕ್ರಿಯೆಯು ಯೆಮೆನ್‌ನಲ್ಲಿ ಅವಳ ಭೌತಿಕ ಉಪಸ್ಥಿತಿಯ ಅಗತ್ಯವಿರುತ್ತದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದಾಗ್ಯೂ, ಭಾರತೀಯ ಪ್ರಜೆಗಳಿಗೆ ಅಸ್ತಿತ್ವದಲ್ಲಿರುವ ಪ್ರಯಾಣ ನಿಷೇಧವು ತಡೆಗೋಡೆಯಾಗಿ ನಿಂತಿದೆ.

ಗುರುವಾರ, ಕೇಂದ್ರದ ವಕೀಲರು ಹೈಕೋರ್ಟ್‌ಗೆ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಯೆಮೆನ್‌ಗೆ ಪ್ರಯಾಣ ನಿಷೇಧವನ್ನು ಸಡಿಲಿಸಬಹುದು, ನಿರ್ದಿಷ್ಟ ಕಾರಣಗಳಿಗಾಗಿ ಮತ್ತು ಸೀಮಿತ ಅವಧಿಗಳಿಗಾಗಿ ಭಾರತೀಯ ಪ್ರಜೆಗಳಿಗೆ ದೇಶಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಡಬಹುದು ಎಂದು ತಿಳಿಸಿದರು.

“ಪ್ರಾತಿನಿಧ್ಯವನ್ನು ಪರಿಗಣಿಸಿ, ಪ್ರಸ್ತುತ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸಲಿ. ಇಂದಿನಿಂದ ಒಂದು ವಾರದೊಳಗೆ ಪ್ರಾತಿನಿಧ್ಯವನ್ನು ನಿರ್ಧರಿಸಲು ಪ್ರತಿವಾದಿಗೆ ಸೂಚಿಸಲಾಗಿದೆ” ಎಂದು ನ್ಯಾಯಮೂರ್ತಿ ಸುಬ್ರಮಣ್ಯ ಪ್ರಸಾದ್ ಆದೇಶಿಸಿದರು. “ಸೇವ್ ನಿಮಿಷ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್”, ಪ್ರಿಯಾಳ ಬಿಡುಗಡೆಗಾಗಿ 2022 ರಲ್ಲಿ ಹೈಕೋರ್ಟನ್ನು ಸಂಪರ್ಕಿಸಿತು. “ರಾಜತಾಂತ್ರಿಕ ಮಧ್ಯಸ್ಥಿಕೆಗಳು ಮತ್ತು ಸಂತ್ರಸ್ತೆಯ ಕುಟುಂಬದೊಂದಿಗೆ ಮಾತುಕತೆ ನಡೆಸಲು ಅನುಕೂಲವಾಗುವಂತೆ ನಿಮಿಶಾ ಪ್ರಿಯಾ ಅವರನ್ನು ಉಳಿಸಲು ಕೇಂದ್ರಕ್ಕೆ ಮನವಿ ಮಾಡಿತು. ಕಾಲಮಿತಿಯಲ್ಲಿ ದೇಶದ ಕಾನೂನಿಗೆ ಅನುಸಾರವಾಗಿ ಹಣ ಪಾವತಿಸುವ ಮೂಲಕ ಆಕೆಯ ಜೀವ ಉಳಿಸಲು ಮನವಿ ಮಾಡಲಾಗಿದೆ.

ಇದನ್ನೂ ಓದಿ: ಕೇರಳ ಗಡಿಯಲ್ಲಿ ಪೊಲೀಸ್, ನಕ್ಸಲರ ನಡುವೆ ಗುಂಡಿನ ಚಕಮಕಿ: ಕೊಡಗಿನಲ್ಲಿ ಹೈ ಅಲರ್ಟ್

ಆದಾಗ್ಯೂ, ಪ್ರಿಯಾ ಅವರನ್ನು ಉಳಿಸಲು ” ಹಣ” ಸಂಧಾನ ಮಾಡಲು ಕೇಂದ್ರಕ್ಕೆ ಆದೇಶವನ್ನು ನೀಡಲು ಹೈಕೋರ್ಟ್ ನಿರಾಕರಿಸಿದ್ದುಆಕೆಯ ಶಿಕ್ಷೆಯ ವಿರುದ್ಧ ಕಾನೂನು ಕ್ರಮಗಳನ್ನು ಅನುಸರಿಸುವಂತೆ ಕೇಳಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!