AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ತ್ರಿಶೂರ್‌ನಲ್ಲಿ ವೆಸ್ಟ್ ನೈಲ್ ಜ್ವರದಿಂದ ವ್ಯಕ್ತಿ ಸಾವು, ಜಾಗ್ರತೆ ವಹಿಸಿ ಎಂದ ರಾಜ್ಯ ಆರೋಗ್ಯ ಇಲಾಖೆ

ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ವೆಸ್ಟ್ ನೈಲ್ ವೈರಸ್ ಮಾನವರಲ್ಲಿ ಮಾರಣಾಂತಿಕ ನ್ಯುರೋಲಾಜಿಕಲ್ ಕಾಯಿಲೆಗೆ ಕಾರಣವಾಗಬಹುದು. ಆದಾಗ್ಯೂ, ಸೋಂಕಿತರಲ್ಲಿ ಸರಿಸುಮಾರು 80 ಪ್ರತಿಶತದಷ್ಟು ಜನರು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ

ಕೇರಳದ ತ್ರಿಶೂರ್‌ನಲ್ಲಿ ವೆಸ್ಟ್ ನೈಲ್ ಜ್ವರದಿಂದ ವ್ಯಕ್ತಿ ಸಾವು, ಜಾಗ್ರತೆ ವಹಿಸಿ ಎಂದ ರಾಜ್ಯ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 29, 2022 | 4:06 PM

Share

ತ್ರಿಶೂರ್: ಕೇರಳದ (Kerala) ತ್ರಿಶೂರ್ (Thrissur) ಜಿಲ್ಲೆಯ ಪಣಂಚೇರಿ ಮೂಲದ ಪುತ್ತನ್‌ಪುರಕ್ಕಲ್ ಜೋಬಿ (47) ಎಂಬವರು ಭಾನುವಾರ ವೆಸ್ಟ್ ನೈಲ್ (West Nile) ಜ್ವರದಿಂದ ಸಾವಿಗೀಡಾಗಿದ್ದಾರೆ. ಸಾವಿನ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳಿಂದ ಹರಡುವ ವೆಸ್ಟ್ ನೈಲ್ ಜ್ವರವು ಈ ಹಿಂದೆ ಕೇರಳದಲ್ಲಿ 2019 ರಲ್ಲಿ ಒಬ್ಬ  ವ್ಯಕ್ತಿಯನ್ನು ಬಲಿ ತೆಗೆದುಕೊಂಡಿತ್ತು.ಮೇ 17 ರಂದು ಜೋಬಿ ಜ್ವರ ಮತ್ತು ಇತರ ರೋಗಲಕ್ಷಣಗಳನ್ನು ಹೊಂದಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ, ಅವರನ್ನು ತ್ರಿಶೂರ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಅವರಿಗೆ ವೆಸ್ಟ್ ನೈಲ್ ಜ್ವರ ಇರುವುದಾಗಿ ದೃಢಪಡಿಸಿದರು. ಸಂತ್ರಸ್ತರನ್ನು ನೋಡಿಕೊಳ್ಳುತ್ತಿದ್ದ ಇಬ್ಬರಲ್ಲಿ ರೋಗದ ಲಕ್ಷಣಗಳು ಕಂಡುಬಂದಿದ್ದು, ಅವರ ರಕ್ತದ ಮಾದರಿಗಳನ್ನು ತನಿಖೆಗೆ ಕಳುಹಿಸಲಾಗಿದೆ ಎಂದು ಪಣಂಚೇರಿ ಪಂಚಾಯತ್ ಅಧ್ಯಕ್ಷ ಪಿ ರವೀಂದ್ರನ್ ಹೇಳಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಸತಿ ಪ್ರದೇಶಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಪಣಂಚೇರಿ ಪಂಚಾಯತ್ ವ್ಯಾಪ್ತಿಯಲ್ಲಿ ಡ್ರೈ ಡೇ ಘೋಷಿಸಲಾಗಿದೆ. ಇದಲ್ಲದೆ, ರೋಗ ಹರಡುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. “ಮುಖ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿಯ ಮೂಲಗಳನ್ನು ನಾಶಮಾಡಲು ತಡೆಗಟ್ಟುವ ಕ್ರಮಗಳನ್ನು ಬಲಪಡಿಸಲು ಆರೋಗ್ಯ ಅಧಿಕಾರಿಗಳು ಮತ್ತು ಪಂಚಾಯತ್ ಸದಸ್ಯರ ಸಭೆಯನ್ನು ಕರೆಯಲಾಗಿದೆ” ಎಂದು ಪಂಚಾಯತ್ ಅಧ್ಯಕ್ಷರು ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ವೆಸ್ಟ್ ನೈಲ್ ವೈರಸ್ ಮಾನವರಲ್ಲಿ ಮಾರಣಾಂತಿಕ ನ್ಯುರೋಲಾಜಿಕಲ್ ಕಾಯಿಲೆಗೆ ಕಾರಣವಾಗಬಹುದು. ಆದಾಗ್ಯೂ, ಸೋಂಕಿತರಲ್ಲಿ ಸರಿಸುಮಾರು 80 ಪ್ರತಿಶತದಷ್ಟು ಜನರು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ. ಇದು ಮುಖ್ಯವಾಗಿ ಸೋಂಕಿತ ಸೊಳ್ಳೆಗಳ ಕಡಿತದ ಮೂಲಕ ಹರಡುತ್ತದೆ. ಪಕ್ಷಿಗಳು ವೆಸ್ಟ್ ನೈಲ್ ವೈರಸ್‌ನ ನೈಸರ್ಗಿಕ ಮೂಲಗಳಾಗಿವೆ.ಮಾನವನಿಗೆ ಸೋಂಕು ಹೆಚ್ಚಾಗಿ ಸೋಂಕಿತ ಸೊಳ್ಳೆಗಳಿಂದ ಕಡಿತದಿಂದ ಬರುತ್ತವೆ.

ಸೊಳ್ಳೆಗಳು ಸೋಂಕಿತ ಪಕ್ಷಿಗಳನ್ನು ತಿನ್ನುವಾಗ ಸೋಂಕಿಗೆ ಒಳಗಾಗುತ್ತವೆ. ವೈರಸ್ ಸೊಳ್ಳೆಗಳ ರಕ್ತದಲ್ಲಿ ಕೆಲವು ದಿನಗಳವರೆಗೆ ಪರಿಚಲನೆಯಾಗುತ್ತದೆ ಮತ್ತು ಅಂತಿಮವಾಗಿ ಸೊಳ್ಳೆಯ ಲಾಲಾರಸ ಗ್ರಂಥಿಗಳನ್ನು ತಲುಪುತ್ತದೆ. ಸೊಳ್ಳೆ ಕಡಿತವು ನಂತರ ವೈರಸ್ ಅನ್ನು ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ವರ್ಗಾಯಿಸುತ್ತದೆ. ಅಲ್ಲಿ ಇದು ದ್ವಿಗುಣಗೊಂಡು ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ
Image
ದ್ವೇಷ ಭಾಷಣ ಪ್ರಕರಣ: ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್​ಗೆ 14 ದಿನಗಳ ನ್ಯಾಯಾಂಗ ಬಂಧನ; ಕೋಮು ದ್ವೇಷ ಸಹಿಸುವುದಿಲ್ಲ ಎಂದ ಪಿಣರಾಯಿ ವಿಜಯನ್
Image
ಪಿಎಫ್​ಐ ರ್‍ಯಾಲಿಯಲ್ಲಿ ಹಿಂದೂ-ಕ್ರಿಶ್ಚಿಯನ್ನರ ವಿರುದ್ಧ ಘೋಷಣೆ: ಒಬ್ಬನ ಬಂಧನ, ನಾಯಕರ ವಿರುದ್ಧ ದೂರು ದಾಖಲು
Image
Vismaya Dowry Death Case: ಪತ್ನಿಯ ಆತ್ಮಹತ್ಯೆಗೆ ಪತಿಯೇ ಕಾರಣವೆಂದು ತೀರ್ಪು ನೀಡಿದ ನ್ಯಾಯಾಲಯ
Image
CSpace: ಕೇರಳದಲ್ಲಿ ಪ್ರಾರಂಭವಾಗಲಿದೆ ಸರ್ಕಾರಿ ಸ್ವಾಮ್ಯದ ಓಟಿಟಿ; ಏನಿದರ ವಿಶೇಷ? ಇಲ್ಲಿದೆ ನೋಡಿ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​