AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala rain: ಕೇರಳದಲ್ಲಿ ಭಾರೀ ಮಳೆಗೆ ಒಂದೇ ಕುಟುಂಬದ ಐದು ಜನ ಸಾವು

ಕೇರಳದಲ್ಲಿ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಒಂದೇ ಕುಟುಂಬದ ಐದು ಜನ ಸಾವನ್ನಪ್ಪಿದ್ದಾರೆ.

Kerala rain: ಕೇರಳದಲ್ಲಿ ಭಾರೀ ಮಳೆಗೆ ಒಂದೇ ಕುಟುಂಬದ ಐದು ಜನ ಸಾವು
Kerala rain
TV9 Web
| Edited By: |

Updated on: Aug 29, 2022 | 4:13 PM

Share

ಇಡುಕ್ಕಿ :ಕೇರಳದ ಇಡುಕ್ಕಿಯ ತೊಡುಪುಳ ಬಳಿಯ ಗ್ರಾಮದಲ್ಲಿ ಸೋಮವಾರ ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಕಂಜರ್ ನಿವಾಸಿಗಳಾದ ತಂಕಮ್ಮ (80), ಅವರ ಮಗ ಸೋಮನ್ (52), ಅವರ ಪತ್ನಿ ಶಾಜಿ (50), ಅವರ ಪುತ್ರಿ ಶಿಮಾ (30), ಮತ್ತು ದೇವಾನಂದ್ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಕಾಸರಗೋಡು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಮುನ್ಸೂಚನೆ ನೀಡಿದೆ.

ಕೊಟ್ಟಾಯಂ ಜಿಲ್ಲೆ, ನೆಡುಂಕುನ್ನಂ, ಕರುಕಚಲ್, ಗ್ರಾಮಗಳು ಜಲಾವೃತವಾಗಿದ್ದು, ನಿವಾಸಿಗಳನ್ನು ಸ್ಥಳಾಂತರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯಲ್ಲಿ, ಮಲ್ಲಪ್ಪಲ್ಲಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಸಣ್ಣ ಪ್ರವಾಹದ ಅನುಭವವಾಗಿದೆ. ಮಲ್ಲಪ್ಪಲ್ಲಿ, ಆನಿಕ್ಕಾಡ್, ತೊಳ್ಳಿಯೂರು ಗ್ರಾಮಗಳ ಸಣ್ಣ ತೊರೆಗಳು ತುಂಬಿ ಹರಿಯುತ್ತಿವೆ.

ಮಲ್ಲಪ್ಪಲ್ಲಿ ತಾಲೂಕಿನ ಕೊಟ್ಟಂಗಲ್ ಗ್ರಾಮದಲ್ಲಿ ಕೆಲವು ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುವ ನೀರಿನಲ್ಲಿ ಕಾರೊಂದು ಕೊಚ್ಚಿಕೊಂಡು ಹೋಗಿದ್ದು, ಸ್ಥಳೀಯರು ಹಗ್ಗದಿಂದ ಮರಕ್ಕೆ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಪತ್ತನಂತಿಟ್ಟ ಜಿಲ್ಲಾ ಮಾಹಿತಿ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ.

ಮಲಪ್ಪುರಂ ಜಿಲ್ಲೆಯಲ್ಲಿ, ಒಲಿಪುಳ ತನ್ನ ದಡದ ಮೇಲೆ ಚೆಲ್ಲುತ್ತಿದ್ದು, ನದಿಯ ದಡದಲ್ಲಿರುವ ನಿವಾಸಿಗಳನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?