AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್

ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದೆ.

Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್
ಕೇರಳ ಮಳೆImage Credit source: DNA
TV9 Web
| Edited By: |

Updated on:May 21, 2022 | 4:11 PM

Share

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ 10 ಜಿಲ್ಲೆಗಳಲ್ಲಿ ಇಂದು ಮತ್ತು ಭಾನುವಾರ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇದರ ನಡುವೆ ಇಡುಕ್ಕಿ (Idukki) ಜಿಲ್ಲಾಡಳಿತ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಕಲ್ಲರ್ಕುಟ್ಟಿ ಮತ್ತು ಪಾಂಬ್ಲಾ ಅಣೆಕಟ್ಟುಗಳ ಗೇಟ್​ಗಳನ್ನು ತೆರೆದಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದೆ. ಮೇ 22ರಂದು ವಯನಾಡ್‌ನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀಗಿಂತ ಹೆಚ್ಚಿನ ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ, ಆರೆಂಜ್ ಅಲರ್ಟ್ ಎಂದರೆ 6 ಸೆಂ.ಮೀನಿಂದ 20 ಸೆಂ.ಮೀವರೆಗೆ ಮಳೆಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಹಳದಿ ಎಚ್ಚರಿಕೆ ಎಂದರೆ 6ರಿಂದ 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ ಎಂಬುದರ ಮುನ್ನೆಚ್ಚರಿಕೆ. ಕಲ್ಲರ್ಕುಟ್ಟಿ ಅಣೆಕಟ್ಟಿನ ನೀರಿನ ಮಟ್ಟ 455 ಮೀಟರ್‌ಗೆ ತಲುಪಿರುವುದರಿಂದ ನೀರು ಬಿಡಲು ಶಟರ್‌ಗಳನ್ನು ತೆರೆಯಲಾಗಿದೆ ಎಂದು ಇಡುಕ್ಕಿ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡಗಾಡು ಜಿಲ್ಲೆಯ ಪಾಂಬ್ಲಾ ಅಣೆಕಟ್ಟಿನ ಪ್ರಕರಣದಂತೆಯೇ, ಅಧಿಕಾರಿಗಳು 500 ಕ್ಯುಮೆಕ್ ನೀರು ಬಿಡಲು ಶಟರ್‌ಗಳನ್ನು ತೆರೆದಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪೆರಿಯಾರ್ ನದಿಯ ದಡದ ಜನರಿಗೆ ನೀರಿನ ಒಳಹರಿವಿನಿಂದ ಜಾಗರೂಕರಾಗಿರಲು ತಿಳಿಸಿದೆ. ಕೇರಳದ ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ
Image
ದೆಹಲಿಯಲ್ಲಿ ಭಾರೀ ಮಳೆ; ರಕ್ಷಣಾ ಸಚಿವ ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲು
Image
ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ! ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ
Image
Karnataka Rain: ಮಲೆನಾಡಿನಲ್ಲಿ ಮಳೆಯ ಅಬ್ಬರ ಇಳಿಕೆ; ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಮಳೆ
Image
Kerala Rain: ಕೇರಳದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಇದನ್ನೂ ಓದಿ: Karnataka Rain: ಮಲೆನಾಡಿನಲ್ಲಿ ಮಳೆಯ ಅಬ್ಬರ ಇಳಿಕೆ; ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಮಳೆ

IMD ವೆಬ್‌ಸೈಟ್ ಪ್ರಕಾರ, ಮೇ 12ರಿಂದ 18ರ ಅವಧಿಯಲ್ಲಿ ಕೇರಳವು ಶೇ. 237ರಷ್ಟು ಅಧಿಕ ಮಳೆಯನ್ನು ಪಡೆದಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಕೇರಳದಲ್ಲಿ 47.3 ಮಿಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಕೇರಳದಲ್ಲಿ 159.3 ಮಿಮೀ ಮಳೆಯಾಗಿದೆ. ಕೇರಳದಲ್ಲಿ ಎಡವಪತಿ ಎಂದೂ ಕರೆಯಲ್ಪಡುವ ನೈಋತ್ಯ ಮಾನ್ಸೂನ್, ಮೇ 27ರೊಳಗೆ ಕೇರಳಕ್ಕೆ ತನ್ನ ಮೊದಲ ಮಳೆಯನ್ನು ಸಾಮಾನ್ಯ ಆರಂಭದ ದಿನಾಂಕಕ್ಕಿಂತ 5 ದಿನಗಳ ಮುಂಚಿತವಾಗಿ ತರುವ ಸಾಧ್ಯತೆಯಿದೆ ಎಂದು IMD ಮೊದಲೇ ಮುನ್ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sat, 21 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?