AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ, ದೇಶದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ

Omicron variant ಕೇರಳದ ಒಮಿಕ್ರಾನ್ ರೋಗಿಯು ಡಿಸೆಂಬರ್ 8 ರಂದು ಪಾಸಿಟಿವ್  ಪರೀಕ್ಷೆ ನಡೆಸಿದ್ದರು. ಅವರು ಯುಕೆಯಿಂದ ರಾಜ್ಯಕ್ಕೆ ಮರಳಿದ್ದರು. ವಿಮಾನದಲ್ಲಿ ಅವರೊಂದಿಗೆ ಇದ್ದವರ ಮೇಲೆ ತೀವ್ರ ನಿಗಾ ಇಡಲಾಗಿದೆ.

ಕೇರಳದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ, ದೇಶದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 12, 2021 | 7:51 PM

Share

ದೆಹಲಿ: ಒಮಿಕ್ರಾನ್ (Omicron) ರೂಪಾಂತರದ ತನ್ನ ಮೊದಲ ಕೊವಿಡ್ ಪ್ರಕರಣವನ್ನು ಕೇರಳವು (kerala) ಭಾನುವಾರ ವರದಿ ಮಾಡಿದ್ದು ದೇಶದಲ್ಲೀಗ ಒಟ್ಟು ಒಮಿಕ್ರಾನ್ ಪ್ರಕರಣದ ಸಂಖ್ಯೆ 38ಕ್ಕೇರಿದೆ. ಹಿಂದಿನ ದಿನ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಚಂಡೀಗಢದಲ್ಲಿ ಈ ಹೊಸ ರೂಪಾಂತರದ ಹೊಸ ಪ್ರಕರಣಗಳು ವರದಿಯಾಗಿವೆ. ಕೇರಳದ ಒಮಿಕ್ರಾನ್ ರೋಗಿಯು ಡಿಸೆಂಬರ್ 8 ರಂದು ಪಾಸಿಟಿವ್  ಪರೀಕ್ಷೆ ನಡೆಸಿದ್ದರು. ಅವರು ಯುಕೆಯಿಂದ ರಾಜ್ಯಕ್ಕೆ ಮರಳಿದ್ದರು. ವಿಮಾನದಲ್ಲಿ ಅವರೊಂದಿಗೆ ಇದ್ದವರ ಮೇಲೆ ತೀವ್ರ ನಿಗಾ ಇಡಲಾಗಿದೆ. ವಿಮಾನದಲ್ಲಿ ಮುಂದಿನ ಸೀಟಿನಲ್ಲಿದ್ದವರು ಹೆಚ್ಚಿನ ಅಪಾಯದ ವರ್ಗದ ದೇಶದವರು ಎಂದು ವರದಿಯಾಗಿದೆ. ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ. ಅವರ ಪತ್ನಿ ಮತ್ತು ಅತ್ತೆ ಕೊವಿಡ್ ಪಾಸಿಟಿವ್ ಆಗಿದ್ದು ಅವರನ್ನು ಪ್ರತ್ಯೇಕಿಸಿ ನಿಗಾ ಇರಿಸಲಾಗಿದೆ.SARS-CoV-2 ನ ಹೊಸ ರೂಪಾಂತರವನ್ನು ಮೊದಲು ನವೆಂಬರ್ 24 ರಂದು ದಕ್ಷಿಣ ಆಫ್ರಿಕಾದಲ್ಲಿ ಗುರುತಿಸಲಾಯಿತು. ನವೆಂಬರ್ 26 ರಂದು, ವಿಶ್ವ ಆರೋಗ್ಯ ಸಂಸ್ಥೆಯು ಒಮಿಕ್ರಾನ್ ಕಾಳಜಿಯ ರೂಪಾಂತರವಾಗಿದೆ ಎಂದು ಘೋಷಿಸಿತು. ಭಾರತದ ಮೊದಲ ಒಮಿಕ್ರಾನ್ ಪ್ರಕರಣಗಳು ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ದೃಢಪಟ್ಟಿತ್ತು

ಭಾರತದಲ್ಲಿ ಇದುವರೆಗೆ ಯಾವ ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣಗಳಿವೆ? ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ದೆಹಲಿ, ಆಂಧ್ರಪ್ರದೇಶ, ಪಂಜಾಬ್ ಮತ್ತು ಈಗ ಕೇರಳದಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರವು ಇಲ್ಲಿಯವರೆಗೆ ಈ ರೂಪಾಂತರದ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಹೊಂದಿದೆ. ರಾಜ್ಯವೊಂದರಲ್ಲೇ 18 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಭಾನುವಾರ ಕರ್ನಾಟಕ, ಮಹಾರಾಷ್ಟ್ರ, ಚಂಡೀಗಢ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ತಲಾ ಒಂದು ಪ್ರಕರಣದಂತೆ ಐದು ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

ಅಂತರರಾಷ್ಟ್ರೀಯ ಪ್ರಯಾಣ ಮತ್ತು ಒಮಿಕ್ರಾನ್ ಭಾರತದಲ್ಲಿನ ಬಹುತೇಕ ಎಲ್ಲಾ ಒಮಿಕ್ರಾನ್ ರೋಗಿಗಳು ವಿದೇಶಿ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ. ಒಮಿಕ್ರಾನ್ ಕಳವಳಗಳ ನಡುವೆ, ಭಾರತವು ಡಿಸೆಂಬರ್ 15 ರಿಂದ ನಿಯಮಿತ ಅಂತರಾಷ್ಟ್ರೀಯ ವಿಮಾನಗಳನ್ನು ಪುನರಾರಂಭಿಸುವ ತನ್ನ ಹಿಂದಿನ ನಿರ್ಧಾರವನ್ನು ತಡೆಹಿಡಿಯಿತು. ಆದರೆ, ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಯಾವುದೇ ನಿಷೇಧ ಹೇರಿಲ್ಲ. ದೇಶಗಳನ್ನು “ಅಪಾಯದಲ್ಲಿರುವ” ಪಟ್ಟಿಯಲ್ಲಿ ಇರಿಸಲಾಗಿದೆ. ಇದರಿಂದ ಆ ದೇಶಗಳಿಂದ ಬರುವ ಪ್ರಯಾಣಿಕರನ್ನು ಟ್ರ್ಯಾಕ್ ಮಾಡಬಹುದು, ಪರೀಕ್ಷಿಸಬಹುದು ಮತ್ತು ಕ್ವಾರಂಟೈನ್ ಮಾಡಬಹುದು.

ಇದನ್ನೂ ಓದಿ: Omicron: ಆಂಧ್ರಪ್ರದೇಶ, ಚಂಡೀಗಡದ ಬೆನ್ನಲ್ಲೇ ನಾಗ್ಪುರದಲ್ಲೂ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ; ದೇಶದಲ್ಲಿ 37ಕ್ಕೇರಿದ ಸೋಂಕಿತರ ಸಂಖ್ಯೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ