Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಕೇರಳದಲ್ಲಿ ಎಲ್ಎನ್​ಜಿ ಇಂಧನವಾಗಿ ಬಳಸುವ ಬಸ್ ಸೇವೆಗೆ ಚಾಲನೆ

LNG Bus: ದಶಕಗಳಿಂದ ನಷ್ಟದಲ್ಲಿ ಸಾಗುತ್ತಿರುವ ಬಸ್ ಕಂಪನಿ, ಪೆಟ್ರೋನೆಟ್ ಎಲ್‌ಎನ್‌ಜಿಯಿಂದ ಎರಡು ಎಲ್‌ಎನ್‌ಜಿ ಚಾಲಿತ ಬಸ್‌ಗಳನ್ನು ಮೂರು ತಿಂಗಳ ಕಾಲ ಗುತ್ತಿಗೆಗೆ ನೀಡಿದೆ. ಅಂತಹ ಬಸ್‌ಗಳನ್ನು ದೀರ್ಘ, ನಗರಗಳೊಳಗೆ ವಾಣಿಜ್ಯಿಕವಾಗಿ ಚಾಲನೆ ಮಾಡುವ ಆರ್ಥಿಕ ಮತ್ತು ತಾಂತ್ರಿಕ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಲು ಅಧ್ಯಯನಗಳನ್ನು ನಡೆಸುವ ಉದ್ದೇಶದಿಂದ ರಸ್ತೆಗಿಳಿಸಲಾಗಿದೆ.

KSRTC ಕೇರಳದಲ್ಲಿ ಎಲ್ಎನ್​ಜಿ ಇಂಧನವಾಗಿ ಬಳಸುವ ಬಸ್ ಸೇವೆಗೆ ಚಾಲನೆ
ಎಲ್​ಎನ್​ಜಿ ಬಸ್ (ಕೃಪೆ:ಕೆಎಸ್​ಆರ್​ಟಿಸಿ ನೆಡುಮಂಗಾಡ್ ಫೇಸ್​ಬುಕ್ ಪುಟ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 21, 2021 | 6:49 PM

ತಿರುವನಂತಪುರಂ: ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಪ್ರಮುಖ ಹೆಜ್ಜೆಯಲ್ಲಿ ಕೇರಳ ಸೋಮವಾರ ದ್ರವೀಕೃತ ನೈಸರ್ಗಿಕ ಅನಿಲದಿಂದ (liquefied natural gas-LNG) ಚಲಿಸುವ ಮೊದಲ ಸಾರ್ವಜನಿಕ ಬಸ್ ಸೇವೆಗೆ ಚಾಲನೆ ನೀಡಿದೆ. ಸಾರಿಗೆ ಸಚಿವ ಆಂಟನಿ ರಾಜು ಅವರು ತಿರುವನಂತಪುರಂ ಸೆಂಟ್ರಲ್ ಬಸ್ ನಿಲ್ದಾಣದಿಂದ ಹಸಿರು ಬಸ್ ಸೇವೆಗೆ ಹಸಿರು ನಿಶಾನೆ ತೋರಿಸಿದ್ದಾರೆ. ಈ ಬಸ್ ತಿರುವನಂತಪುರಂ-ಎರ್ನಾಕುಲಂ ಮತ್ತು ಎರ್ನಾಕುಲಂ-ಕೋಯಿಕೋಡ್ ಮಾರ್ಗಗಳಲ್ಲಿ ಚಲಿಸಲಿದೆ.

ಹಣದ ಕೊರತೆಯಿರುವ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಎರಡು ಉದ್ದೇಶಗಳಿಂದ ಈ ಬಸ್ ಗಳಿಗೆ ಚಾಲನೆ ನೀಡಿದೆ. ಅದೇನೆಂದರೆ ಅಗ್ಗದ ಇಂಧನಕ್ಕೆ ಬದಲಾಗುವುದರ ಮೂಲಕ ಹೆಚ್ಚುತ್ತಿರುವ ಕಾರ್ಯಾಚರಣೆಯ ನಷ್ಟವನ್ನು ಕಡಿತಗೊಳಿಸುವುದು ಮತ್ತು ಪರಿಸರಕ್ಕೆ ಹಾನಿಕಾರಕವೆಂದು ಪರಿಗಣಿಸಲಾದ ಇಂಧನ ಮೂಲವನ್ನು ಉತ್ತೇಜಿಸುವುದು ಆಗಿದೆ.

ಇದು ಕೆಎಸ್‌ಆರ್‌ಟಿಸಿಯು ತನ್ನ ಸಂಪೂರ್ಣ ಫ್ಲೀಟ್ ಅನ್ನು ಕೂಲಂಕಷವಾಗಿ ಪರಿಶೀಲಿಸುವ, ಪ್ರಸ್ತುತ ಡೀಸೆಲ್‌ನಲ್ಲಿ ಚಾಲನೆಯಲ್ಲಿರುವ ಮತ್ತು ಅವುಗಳನ್ನು ಎಲ್‌ಎನ್‌ಜಿ ಮತ್ತು ಕಂಪ್ರೆಸ್ಡ್ ನೈಸರ್ಗಿಕ ಅನಿಲಕ್ಕೆ (ಸಿಎನ್‌ಜಿ) ಬದಲಾಯಿಸುವ ಯೋಜನೆಗಳ ಒಂದು ಭಾಗವಾಗಿದೆ. ತನ್ನ ಹಳೆಯ ಡೀಸೆಲ್ ಚಾಲಿತ 400 ಬಸ್‌ಗಳನ್ನು ಎಲ್‌ಎನ್‌ಜಿಗೆ ಪರಿವರ್ತಿಸುವ ಯೋಜನೆಯನ್ನು ಕೆಎಸ್‌ಆರ್‌ಟಿಸಿ ಈಗಾಗಲೇ ಪ್ರಕಟಿಸಿದೆ. ದಶಕಗಳಿಂದ ನಷ್ಟದಲ್ಲಿ ಸಾಗುತ್ತಿರುವ ಬಸ್ ಕಂಪನಿ, ಪೆಟ್ರೋನೆಟ್ ಎಲ್‌ಎನ್‌ಜಿಯಿಂದ ಎರಡು ಎಲ್‌ಎನ್‌ಜಿ ಚಾಲಿತ ಬಸ್‌ಗಳನ್ನು ಮೂರು ತಿಂಗಳ ಕಾಲ ಗುತ್ತಿಗೆಗೆ ನೀಡಿದೆ. ಅಂತಹ ಬಸ್‌ಗಳನ್ನು ದೀರ್ಘ, ನಗರಗಳೊಳಗೆ ವಾಣಿಜ್ಯಿಕವಾಗಿ ಚಾಲನೆ ಮಾಡುವ ಆರ್ಥಿಕ ಮತ್ತು ತಾಂತ್ರಿಕ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಲು ಅಧ್ಯಯನಗಳನ್ನು ನಡೆಸುವ ಉದ್ದೇಶದಿಂದ ರಸ್ತೆಗಿಳಿಸಲಾಗಿದೆ.

ಹೊಸ ಎಲ್‌ಎನ್‌ಜಿ ಬಸ್ ಸೇವೆಯನ್ನು ಮೊದಲ ಹಂತದಲ್ಲಿ ಪ್ರಮುಖ ನಗರಗಳ ನಡುವೆ ನಡೆಸಲಾಗುವುದು. ಆನಂತರ ಅದರ ಕಾರ್ಯಾಚರಣೆಯ ದಕ್ಷತೆಯನ್ನು ಅಳೆಯಲು ಮುನ್ನಾರ್‌ನಂತಹ ಉನ್ನತ-ಶ್ರೇಣಿಯ ಪ್ರದೇಶಗಳಿಗೆ ಕರೆದೊಯ್ಯಲಾಗುವುದು ಎಂದು ಸಾರಿಗೆ ಸಚಿವರು ಹೇಳಿದರು.

ಇದನ್ನೂ ಓದಿ: Lakshadweep ಲಕ್ಷದ್ವೀಪ ಹೈಕೋರ್ಟ್ ಕಾನೂನು ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ವರ್ಗಾಯಿಸಲು ಪ್ರಸ್ತಾಪ ಮುಂದಿಟ್ಟ ಪ್ರಫುಲ್ ಪಟೇಲ್

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ