AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ

ಕೇರಳದಲ್ಲಿ 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ
ಪಿಣರಾಯಿ ವಿಜಯನ್
TV9 Web
| Edited By: |

Updated on: Sep 19, 2021 | 11:46 AM

Share

ತಿರುವನಂತಪುರಂ: ಕೇರಳದಲ್ಲಿ ನವೆಂಬರ್ 1ರಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಆನ್​ಲೈನ್ ಕ್ಲಾಸ್​ಗಳು ಮಾತ್ರ ನಡೆಯುತ್ತಿದ್ದವು. ನ. 1ರಿಂದ ರೆಗ್ಯುಲರ್ ಕ್ಲಾಸ್​ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 

ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ನಿನ್ನೆ ಶೈಕ್ಷಣಿಕ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪಿಣರಾಯಿ ವಿಜಯನ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಪ್ರಾಥಮಿಕ ತರಗತಿಗಳನ್ನು ಮೊದಲು ಪುನರಾರಂಭಿಸಬೇಕು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿತ್ತು. ಆದರೆ, 10 ಮತ್ತು 12 ನೇ ತರಗತಿಗಳನ್ನು ಮೊದಲು ಆರಂಭಿಸಬೇಕಾಗಿದೆ. ಆ ವಿದ್ಯಾರ್ಥಿಗಳು ಮುಂದಿನ ವರ್ಷ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಕೇಸುಗಳು ಹೆಚ್ಚುತ್ತಲೇ ಇದ್ದು, ನಿಫಾ ಪ್ರಕರಣಗಳು ಕೂಡ ಹೆಚ್ಚಾಗಿವೆ. ಇದರಿಂದ ಕೇರಳದ ಗಡಿಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಕೇರಳದ ಬಿಷಪ್​​ನ ನಾರ್ಕೋಟಿಕ್ಸ್ ಜಿಹಾದ್ ಹೇಳಿಕೆ ವಿವಾದ: ಲವ್ ಜಿಹಾದ್ ಬಗ್ಗೆ ಕಾನೂನು ತರಲು ಕೇಂದ್ರಕ್ಕೆ ಬಿಜೆಪಿ ಒತ್ತಾಯ

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Kerala schools to reopen for Classes 1 to 7 10 and 12 from November 1 amid of Nipah and Covid Scare)

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ