AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ

ಕೇರಳದಲ್ಲಿ 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ
ಪಿಣರಾಯಿ ವಿಜಯನ್
TV9 Web
| Edited By: |

Updated on: Sep 19, 2021 | 11:46 AM

Share

ತಿರುವನಂತಪುರಂ: ಕೇರಳದಲ್ಲಿ ನವೆಂಬರ್ 1ರಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಆನ್​ಲೈನ್ ಕ್ಲಾಸ್​ಗಳು ಮಾತ್ರ ನಡೆಯುತ್ತಿದ್ದವು. ನ. 1ರಿಂದ ರೆಗ್ಯುಲರ್ ಕ್ಲಾಸ್​ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 

ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ನಿನ್ನೆ ಶೈಕ್ಷಣಿಕ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪಿಣರಾಯಿ ವಿಜಯನ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಪ್ರಾಥಮಿಕ ತರಗತಿಗಳನ್ನು ಮೊದಲು ಪುನರಾರಂಭಿಸಬೇಕು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿತ್ತು. ಆದರೆ, 10 ಮತ್ತು 12 ನೇ ತರಗತಿಗಳನ್ನು ಮೊದಲು ಆರಂಭಿಸಬೇಕಾಗಿದೆ. ಆ ವಿದ್ಯಾರ್ಥಿಗಳು ಮುಂದಿನ ವರ್ಷ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಕೇಸುಗಳು ಹೆಚ್ಚುತ್ತಲೇ ಇದ್ದು, ನಿಫಾ ಪ್ರಕರಣಗಳು ಕೂಡ ಹೆಚ್ಚಾಗಿವೆ. ಇದರಿಂದ ಕೇರಳದ ಗಡಿಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಕೇರಳದ ಬಿಷಪ್​​ನ ನಾರ್ಕೋಟಿಕ್ಸ್ ಜಿಹಾದ್ ಹೇಳಿಕೆ ವಿವಾದ: ಲವ್ ಜಿಹಾದ್ ಬಗ್ಗೆ ಕಾನೂನು ತರಲು ಕೇಂದ್ರಕ್ಕೆ ಬಿಜೆಪಿ ಒತ್ತಾಯ

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Kerala schools to reopen for Classes 1 to 7 10 and 12 from November 1 amid of Nipah and Covid Scare)

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ