AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ

ಕೇರಳದಲ್ಲಿ 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ಕೇರಳದಲ್ಲಿ ನ. 1ರಿಂದ ಪ್ರಾಥಮಿಕ, ಎಸ್​ಎಸ್​ಎಲ್​ಸಿ, ಪಿಯುಸಿ ತರಗತಿಗಳು ಪುನರಾರಂಭ
ಪಿಣರಾಯಿ ವಿಜಯನ್
TV9 Web
| Edited By: |

Updated on: Sep 19, 2021 | 11:46 AM

Share

ತಿರುವನಂತಪುರಂ: ಕೇರಳದಲ್ಲಿ ನವೆಂಬರ್ 1ರಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಆನ್​ಲೈನ್ ಕ್ಲಾಸ್​ಗಳು ಮಾತ್ರ ನಡೆಯುತ್ತಿದ್ದವು. ನ. 1ರಿಂದ ರೆಗ್ಯುಲರ್ ಕ್ಲಾಸ್​ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 

ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. 1 ರಿಂದ 7ನೇ ತರಗತಿಯವರೆಗಿನ (ಪ್ರಾಥಮಿಕ ವಿಭಾಗ) ಮತ್ತು 10 ಹಾಗೂ 12ನೇ ತರಗತಿಗಳು ನವೆಂಬರ್ 1ರಂದು ಆರಂಭವಾಗಲಿದ್ದು, ಇತರ ತರಗತಿಗಳು ನವೆಂಬರ್ 15ರಂದು ಆರಂಭವಾಗುತ್ತವೆ. ​

ನಿನ್ನೆ ಶೈಕ್ಷಣಿಕ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪಿಣರಾಯಿ ವಿಜಯನ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಪ್ರಾಥಮಿಕ ತರಗತಿಗಳನ್ನು ಮೊದಲು ಪುನರಾರಂಭಿಸಬೇಕು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿತ್ತು. ಆದರೆ, 10 ಮತ್ತು 12 ನೇ ತರಗತಿಗಳನ್ನು ಮೊದಲು ಆರಂಭಿಸಬೇಕಾಗಿದೆ. ಆ ವಿದ್ಯಾರ್ಥಿಗಳು ಮುಂದಿನ ವರ್ಷ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಕೇಸುಗಳು ಹೆಚ್ಚುತ್ತಲೇ ಇದ್ದು, ನಿಫಾ ಪ್ರಕರಣಗಳು ಕೂಡ ಹೆಚ್ಚಾಗಿವೆ. ಇದರಿಂದ ಕೇರಳದ ಗಡಿಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಕೇರಳದ ಬಿಷಪ್​​ನ ನಾರ್ಕೋಟಿಕ್ಸ್ ಜಿಹಾದ್ ಹೇಳಿಕೆ ವಿವಾದ: ಲವ್ ಜಿಹಾದ್ ಬಗ್ಗೆ ಕಾನೂನು ತರಲು ಕೇಂದ್ರಕ್ಕೆ ಬಿಜೆಪಿ ಒತ್ತಾಯ

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Kerala schools to reopen for Classes 1 to 7 10 and 12 from November 1 amid of Nipah and Covid Scare)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್