AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಮೇಲೆ ನಂಬಿಕೆ ಕಳೆದುಕೊಂಡಿದ್ದೇನೆ..ಅಲ್ಲಿದ್ದು ಪ್ರಯೋಜನ ಇಲ್ಲ: ಪಕ್ಷ ತೊರೆದ ಹಿರಿಯ ನಾಯಕ ಎ.ವಿ.ಗೋಪಿನಾಥನ್​

ಕೇರಳ ವಿಧಾನಸಭೆ ಚುನಾವಣೆಗೂ ಮೊದಲೇ ಗೋಪಿನಾಥನ್​ ಬಂಡಾಯವೆದ್ದಿದ್ದರು. ಆದರೆ ಆಗ ಪಕ್ಷದ ಹಿರಿಯರು, ಅವರಿಗೆ ಪಾಲಕ್ಕಡ್​​ ಜಿಲ್ಲಾ ಸಮಿತಿ ಅಧ್ಯಕ್ಷನ ಸ್ಥಾನ ಕೊಟ್ಟು ಸಮಾಧಾನಪಡಿಸಿದ್ದರು.

ಕಾಂಗ್ರೆಸ್​ ಮೇಲೆ ನಂಬಿಕೆ ಕಳೆದುಕೊಂಡಿದ್ದೇನೆ..ಅಲ್ಲಿದ್ದು ಪ್ರಯೋಜನ ಇಲ್ಲ: ಪಕ್ಷ ತೊರೆದ ಹಿರಿಯ ನಾಯಕ ಎ.ವಿ.ಗೋಪಿನಾಥನ್​
ಎ.ವಿ.ಗೋಪಿನಾಥನ್​
TV9 Web
| Edited By: |

Updated on: Aug 30, 2021 | 6:12 PM

Share

ಕೇರಳ ಕಾಂಗ್ರೆಸ್​ ಹಿರಿಯ ನಾಯಕ, ಪಾಲಕ್ಕಡ್​​ ಜಿಲ್ಲಾ ಕಾಂಗ್ರೆಸ್​ ಸಮಿತಿ ಮಾಜಿ (DCC)ಅಧ್ಯಕ್ಷ ಎ.ವಿ.ಗೋಪಿನಾಥನ್​ ಅವರಿಂದ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೇ ರಾಜೀನಾಮೆ ಸಲ್ಲಿಸಿರುವ ಎ.ವಿ.ಗೋಪಿನಾಥನ್ (AV Gopinathan)​, ಸದ್ಯಕ್ಕಂತೂ ಬೇರೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ. ಅಲತ್ತೂರಿನ ಮಾಜಿ ಶಾಸಕ, ಪೆರಿಂಗೊಟ್ಟುಕುರಿಸ್ಸಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೂ ಆಗಿರುವ ಗೋಪಿನಾಥನ್ ಇಷ್ಟು ದಿನಗಳ ತಮ್ಮ ಇಡೀ ಜೀವನವನ್ನು ಕಾಂಗ್ರೆಸ್​ಗೆ ಮುಡಿಪಾಗಿಟ್ಟಿದ್ದರು. ಆದರೆ, ಇದೀಗ ಕಾಂಗ್ರೆಸ್​​ನಿಂದ ತುಂಬ ಬೇಸರಗೊಂಡು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.

ಕೇರಳದ 14 ಜಿಲ್ಲೆಗಳ ಕಾಂಗ್ರೆಸ್​​ ಸಮಿತಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರದಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದಿಂದ ಬೇಸತ್ತಿರುವ ಅವರು, ಕಾಂಗ್ರೆಸ್ ನಾಯಕತ್ವದಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ. ಹಾಗಾಗಿ ಇಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ನಾನು ಕಾಂಗ್ರೆಸ್​ನಲ್ಲಿ ಸುಮಾರು 50 ವರ್ಷಗಳಿಂದ ಇದ್ದೇನೆ. ಆದರೆ ನಾನೀಗ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ. ಹಾಗಾಗಿ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ರಾಜೀನಾಮೆ ಸಂದರ್ಭದಲ್ಲಿ ಪಾಲಕ್ಕಡ್​​ನಲ್ಲಿ ತಿಳಿಸಿದ್ದಾರೆ.

ಏನಿದು ವಿವಾದ? ಕೇರಳ ವಿಧಾನಸಭೆ ಚುನಾವಣೆಗೂ ಮೊದಲೇ ಗೋಪಿನಾಥನ್​ ಬಂಡಾಯವೆದ್ದಿದ್ದರು. ಆದರೆ ಆಗ ಪಕ್ಷದ ಹಿರಿಯರು, ಅವರಿಗೆ ಪಾಲಕ್ಕಡ್​​ ಜಿಲ್ಲಾ ಸಮಿತಿ ಅಧ್ಯಕ್ಷನ ಸ್ಥಾನ ಕೊಟ್ಟು ಸಮಾಧಾನಪಡಿಸಿದ್ದರು. ಆದರೆ ಈಗೆರಡು ದಿನಗಳ  ಹಿಂದೆ ಕಾಂಗ್ರೆಸ್​ ಪಕ್ಷ, 14 ಜಿಲ್ಲೆಗಳ ಕಾಂಗ್ರೆಸ್​ ಸಮಿತಿಗೆ ಹೊಸ ಅಧ್ಯಕ್ಷರನ್ನು ಘೋಷಿಸಿತ್ತು. ಅದರ ಪಟ್ಟಿ ನೋಡಿ ಗೋಪಿನಾಥನ್​ ತುಂಬ ಬೇಜಾರಾಗಿದ್ದರು. ಯಾಕೆಂದರೆ ಪಾಲಕ್ಕಡ್​ಗೆ ಗೋಪಿನಾಥನ್​ ಬದಲಿಗೆ ತಂಕಪ್ಪನ್​ ಎಂಬುವನ್ನು ನೇಮಕ ಮಾಡಲಾಗಿತ್ತು. ಇವರು ಜಿಲ್ಲೆಯಲ್ಲಿ ಅಷ್ಟೇನೂ ಪರಿಚಿತರಾಗಿರಲಿಲ್ಲ. ಹೀಗಾಗಿ ಸಹಜವಾಗಿಯೇ ಗೋಪಿನಾಥನ್​ ಸ್ವಾಭಿಮಾನಕ್ಕೆ ಪೆಟ್ಟುಬಿದ್ದಿದೆ. ಈ ವಿಚಾರವಾಗಿ ಮಾಜಿ ಶಾಸಕ ಅನಿಲ್​ ಅಕ್ಕಾರೆಯವರನ್ನೂ ಗೋಪಿನಾಥನ್​ ಟೀಕಿಸಿದ್ದಾರೆ.

ಇದನ್ನೂ ಓದಿ: Tokyo Paralympics: ಅಪ್ಪನ ಆಸೆಯನ್ನು ಈಡೇರಿಸಿದ್ದೇನೆ; ಪದಕವನ್ನು ದಿವಂಗತ ತಂದೆಗೆ ಅರ್ಪಿಸಿದ ದೇವೇಂದ್ರ ಜಜಾರಿಯಾ

Tomato Rate: ಬಹುತೇಕ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಅಪ್ಪಚ್ಚಿ; ಕೇಜಿಗೆ 4 ರೂಪಾಯಿಯಂತೆ ಪಾತಾಳ ತಲುಪಿದ ದರ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು