AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ವಿಷಯದಲ್ಲೂ ಎ ಪ್ಲಸ್; ಮೆದುಳು ನಿಷ್ಕ್ರಿಯವಾದಾಗ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ ಸಾರಂಗ್

Kerala SSLC results: ಆಟೋರಿಕ್ಷಾದಿಂದ ಕೆಳಗೆ ಉರುಳಿ ರಸ್ತೆಗೆ ಬಿದ್ದ ಸಾರಂಗ್ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅವರ ಮೆದುಳು ಡೆಡ್ ಆಗಿದೆ. ಶುಕ್ರವಾರ ಫಲಿತಾಂಶ ಪ್ರಕಟಿಸುವ ಕೆಲವೇ ಗಂಟೆಗಳಿಗೆ ಮುನ್ನ ಸಾರಂಗ್ ಸಾವು ಸಂಭವಿಸಿದೆ.

ಎಲ್ಲ ವಿಷಯದಲ್ಲೂ ಎ ಪ್ಲಸ್; ಮೆದುಳು ನಿಷ್ಕ್ರಿಯವಾದಾಗ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ ಸಾರಂಗ್
ವಿದ್ಯಾರ್ಥಿ ಸಾರಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 19, 2023 | 7:39 PM

Share

ತಿರುವನಂತಪುರಂ: ಕೇರಳದ ಎಸ್‌ಎಸ್‌ಎಲ್‌ಸಿ (Kerala SSLC Exam) ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲಿ ಎ ಪ್ಲಸ್‌ ಪಡೆಯುವ ಪಡೆದು ಸಾರಂಗ್ ಪಾಸಾಗಿದ್ದಾನೆ.  ಶಿಕ್ಷಣ ಸಚಿವ ವಿ.ಶಿವನಕುಟ್ಟಿ(V. Sivankutty) ಅವರು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಸಾರಂಗ್ (Sarang) ಎಂಬ ವಿದ್ಯಾರ್ಥಿಯ ಫಲಿತಾಂಶ ಬಗ್ಗೆ ಹೇಳುವಾಗ ಕಣ್ಣೀರಾಗಿದ್ದಾರೆ. ಸಾರಂಗ್ ದೊಡ್ಡ ಕೆಲಸ ಮಾಡಿ ನಮ್ಮನ್ನು ಅಗಲಿದ್ದಾರೆ. ಸಾರಂಗ್ ಅಂಗಾಂಗ ದಾನದ ಮೂಲಕ ಆರು ಮಂದಿಗೆ ಹೊಸ ಜೀವನ ನೀಡಿದರು. ದುಃಖದ ಕಡಲಲ್ಲಿಯೂ ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಕ್ಕೆ ಅಭಿನಂದನೆ ಸಲ್ಲಿಸೋಣ ಎಂದು ಹೇಳಿ ಸಚಿವರು ಭಾವುಕರಾದರು. ಸಾರಂಗ್ ಗ್ರೇಸ್ ಮಾರ್ಕ್ಸ್ ಇಲ್ಲದೇ ಎಲ್ಲಾ ವಿಷಯಗಳಿಗೂ ಎಪ್ಲಸ್ ಪಡೆದಿರುವುದಾಗಿ ಸಚಿವರು ಹೇಳಿದ್ದಾರೆ.

ಆಸ್ಪತ್ರೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಟೋ ರಿಕ್ಷಾ ಪಲ್ಟಿಯಾಗಿ ಸಾರಂಗ್ ಮರಣ ಸಂಭವಿಸಿದೆ. ಬನೀಶ್ ಕುಮಾರ್ ಮತ್ತು ರಜಿನಿ ದಂಪತಿಯ ಪುತ್ರ ಸಾರಂಗ್ ತನ್ನ ತಾಯಿಯೊಂದಿಗೆ ಕಾರವಾರಂ ವಂಚಿಯೂರು ನಡಕಾಪಂರಂಬ್ ನಿಕುಂಜತ್‌ನಲ್ಲಿ 13ನೇ ತಾರೀಖು ಸಂಜೆ 3 ಗಂಟೆಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ತೊಟ್ಟಕ್ಕಾಡ್ ವಡಕ್ಕೋಟ್​​ಕಾವ್ ಕುನ್ನತ್ತ್ ಕೋಣಂ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಬ್ರೈನ್ ಡೆಡ್ ಆಗಿದ್ದ ಸಾರಂಗ್​​ನ ಅಂಗಾಂಗ ದಾನ ಮಾಡಿದ್ದು, ಇದರಿಂದ 6 ಮಂದಿಗೆ ಹೊಸ ಬದುಕು ಸಿಕ್ಕಿದೆ. ಸಾರಂಗ್ ಆಟ್ಟಿಂಗಲ್ ಸರ್ಕಾರಿ ಬಿಎಚ್‌ಎಸ್‌ಎಸ್‌ನಲ್ಲಿ ಪರೀಕ್ಷೆ ಬರೆದಿದ್ದರು.

ಇದನ್ನೂ ಓದಿ: Kerala SSLC Result 2023: ಕೇರಳ ಎಸ್‌ಎಸ್‌ಎಲ್‌ಸಿ ತರಗತಿ ಫಲಿತಾಂಶ ಘೋಷಣೆ: ಶೇಕಡಾ 99.70 ವಿದ್ಯಾರ್ಥಿಗಳು ತೇರ್ಗಡೆ

ಇನ್ನೊಂದು ವಾಹನಕ್ಕೆ ಸೈಡ್ ನೀಡುತ್ತಿದ್ದಾಗ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಉರುಳಿತ್ತು. ಆಟೋರಿಕ್ಷಾದಿಂದ ಕೆಳಗೆ ಉರುಳಿ ರಸ್ತೆಗೆ ಬಿದ್ದ ಸಾರಂಗ್ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅವರ ಮೆದುಳು ಡೆಡ್ ಆಗಿದೆ. ಶುಕ್ರವಾರ ಫಲಿತಾಂಶ ಪ್ರಕಟಿಸುವ ಕೆಲವೇ ಗಂಟೆಗಳಿಗೆ ಮುನ್ನ ಸಾರಂಗ್ ಸಾವು ಸಂಭವಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!