AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ
ಮೊಬೈಲ್ -ವಿದ್ಯಾರ್ಥಿImage Credit source: Guardian
ನಯನಾ ರಾಜೀವ್
|

Updated on: Jan 22, 2025 | 9:35 AM

Share

ಸಾಮಾನ್ಯವಾಗಿ ಯಾವ ಶಾಲೆಗಳಲ್ಲೂ ಮೊಬೈಲ್​ಗಳೊಟ್ಟಿಗೆ ಮಕ್ಕಳು ಬರುವಂತಿಲ್ಲ, ಅದನ್ನು ವಶಪಡಿಸಿಕೊಂಡು ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಲಾಗುತ್ತದೆ. ಯಾಕೆಂದರೆ ಮಕ್ಕಳು ಮೊಬೈಲ್​ ಕಡೆಗೆ ಗಮನ ಕೊಟ್ಟರೆ ವಿದ್ಯಾಭ್ಯಾಸದಲ್ಲಿ ಹಿಂದುಳಿಯಬೇಕಾಗುತ್ತದೆ. ಹೀಗಾಗಿ ಶಾಲೆ ಹಾಗೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆದರೆ ಮಕ್ಕಳು ಮೊಬೈಲ್​ಗಳನ್ನು ತೆಗೆದುಕೊಂಡು ಶಿಕ್ಷಕರ ಬಳಿ ಸಿಕ್ಕಿಬೀಳುವ ಪ್ರಕರಣಗಳೂ ಹೆಚ್ಚಾಗಿದೆ.

ಅದು ಇದು ಸಬೂಬು ಹೇಳಿ ಅವರಿಂದ ಮೊಬೈಲ್ ವಾಪಸ್ ಪಡೆಯುವುದು ಹೇಗೆ ಎಂಬುದನ್ನು ನೋಡುತ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಶಿಕ್ಷಕರಿಗೇ ಜೀವ ಬೆದರಿಕೆಯೊಡ್ಡಿದ್ದಾರೆ.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.

ಮತ್ತಷ್ಟು ಓದಿ: ಹಣಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ!

ವಿದ್ಯಾರ್ಥಿಯು ತನ್ನ ಫೋನ್ ತೆಗೆದುಕೊಂಡಾಗ ಆರಂಭದಲ್ಲಿ ಗಲಾಟೆ ಮಾಡಿದ್ದಾನೆ. ನಂತರ ಆತನನ್ನು ಪ್ರಾಂಶುಪಾಲರ ಕಚೇರಿಗೆ ಕರೆಸಿಕೊಂಡು, ಶಾಲೆಯಿಂದ ಹೊರಗೆ ಕಾಲಿಟ್ಟರೆ ತನಗೆ ಕೊಲೆ ಮಾಡುವುದಾಗಿ ಹೇಳಿ ಶಿಕ್ಷಕರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದ್ದು, ಶಿಕ್ಷಕರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್