Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?

|

Updated on: Mar 10, 2023 | 12:01 PM

ಈ ವರ್ಷ ಕೊರೆಯುವ ಚಳಿಯ ಬಳಿಕ ಬಿಸಿಲ ಝಳ ತೀರಾ ಹೆಚ್ಚಾಗಿದೆ. ಕೇರಳದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ತೀರಾ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ.

Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?
ಉಷ್ಣಗಾಳಿ
Image Credit source: Indian Express
Follow us on

ಈ ವರ್ಷ ಕೊರೆಯುವ ಚಳಿಯ ಬಳಿಕ ಬಿಸಿಲ ಝಳ ತೀರಾ ಹೆಚ್ಚಾಗಿದೆ. ಕೇರಳದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ತೀರಾ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ. ವರ್ಷದ ಹಿಂದೆ ಅತಿವೃಷ್ಟಿಯಿಂದ ಕೇರಳ ನಲುಗಿಹೋಗಿತ್ತು, ಇದೀಗ ದಾಖಲೆ ಮುರಿಯುವ ತಾಪಮಾನದಿಂದಾಗಿ ತತ್ತರಿಸಿದೆ. ಕೇರಳದಲ್ಲಿ ಈಗಷ್ಟೇ ಬೇಸಿಗೆ ಆರಂಭವಾಗಿದ್ದರೂ ಕೂಡ ಈಗಾಗಲೇ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದು ಗಂಭೀರ ಆರೋಗ್ಯ ಅಪಾಯವನ್ನುಂಟುಮಾಡುತ್ತದೆ. ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ,ಕೋಳಿಕ್ಕೋಡ್, ಕಣ್ಣೂರಿನಲ್ಲಿ 45-54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿತ್ತು. ದೀರ್ಘಕಾಲದವರೆಗೆ ಸೂರ್ಯನಿಗೆ ಒಡ್ಡಿಕೊಂಡರೆ ಆಯಾಸಕ್ಕೆ ಕಾರಣವಾಗಬಹುದು. ಕರ್ನಾಟಕದ ಕರಾವಳಿ ಭಾಗದಲ್ಲಿ ಕೂಡ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ಉಷ್ಣಗಾಳಿಯಿಂದ ರಕ್ಷಿಸಿಕೊಳ್ಳುವುದು ಹೇಗೆ?
ಈ ಹೀಟ್​ ವೇವ್ ಶಾರೀರಿಕ ಒತ್ತಡಕ್ಕೆ ಕಾರಣವಾಗಬಹುದು, ಇದು ಸಾವಿಗೆ ಕಾರಣವಾಗಬಹುದು. ಶಾಖದ ಅಲೆಯ ಸಮಯದಲ್ಲಿ ಪ್ರಭಾವವನ್ನು ಕಡಿಮೆ ಮಾಡಲು ಮಾಡಬೇಕಾದ ವಿಷಯಗಳು ಇಲ್ಲಿವೆ:

ಮತ್ತಷ್ಟು ಓದಿ: Health benefits of Buttermilk: ಶಾಖದ ಅಲೆ ಹೆಚ್ಚಾಗುತ್ತಿದೆ, ಮಜ್ಜಿಗೆ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ

-ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ.
-ಬಾಯಾರಿಕೆಯಿಲ್ಲದಿದ್ದರೂ, ಸಾಧ್ಯವಾದಷ್ಟು ಹೆಚ್ಚಾಗಿ ಸಾಕಷ್ಟು ನೀರು ಕುಡಿಯಿರಿ
-ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
-ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ
-ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
-ಫ್ಯಾನ್‌ಗಳು, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.
-ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ