AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆ

ಕೇರಳದಲ್ಲಿರುವ ಅಬಕಾರಿ ಅಧಿಕಾರಿಗಳ ಸಮುಚ್ಚಯದಲ್ಲಿ ಮೂವರ ಕೊಳೆತ ಶವ ಪತ್ತೆಯಾಗಿದೆ. ಮೃತರನ್ನು ಹಿರಿಯ ಕಸ್ಟಮ್ಸ್ ಅಧಿಕಾರಿ, ಅವರ ಸಹೋದರಿ ಮತ್ತು ತಾಯಿ ಎಂದು ಶಂಕಿಸಲಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಶವಗಳ ತೀವ್ರವಾಗಿ ಕೊಳೆತ ಸ್ಥಿತಿಯಿಂದಾಗಿ ಗುರುತಿಸುವುದು ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆ
ಪ್ರಾತಿನಿಧಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Feb 21, 2025 | 10:29 AM

Share

ಕೊಚ್ಚಿ, ಫೆಬ್ರವರಿ 21: ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆಯಾಗಿವೆ. ಕೊಚ್ಚಿಯ ಕಕ್ಕನಾಡ್​ನಲ್ಲಿರುವ ಸಮುಚ್ಚಯದಲ್ಲಿ ಶವ ಸಿಕ್ಕಿದ್ದು, ಮೃತರನ್ನು ಹಿರಿಯ ಕಸ್ಟಮ್ಸ್ ಅಧಿಕಾರಿ, ಅವರ ಸಹೋದರಿ ಮತ್ತು ತಾಯಿ ಎಂದು ಶಂಕಿಸಲಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಶವಗಳ ತೀವ್ರವಾಗಿ ಕೊಳೆತ ಸ್ಥಿತಿಯಿಂದಾಗಿ ಗುರುತಿಸುವುದು ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮುಚ್ಚಯ ಲಾಕ್ ಆಗಿತ್ತು, ಗಂಟೆಗಳ ಪ್ರಯತ್ನದ ನಂತರ ಅಧಿಕಾರಿಗಳು ಕಟ್ಟಡದ ಸುತ್ತಮುತ್ತಲು ಪರಿಶೀಲಿಸಿದರು. ಅಲ್ಲಿ ವಾಸಿಸುವ ಅಧಿಕಾರಿ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಆದರೆ ಅವರು ಕೆಲಸಕ್ಕೆ ಮರಳದಿದ್ದಾಗ ಅಹೋದ್ಯೋಗಿಗಳು ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅವರು ಕಿಟಕಿಯ ಮೂಲಕ ನೋಡಿದಾಗ ಶವ ನೇತಾಡುತ್ತಿರುವುದು ಕಂಡುಬಂದಿದೆ. ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಯಿತು. ಅವರು ಮನೆಗೆ ಬಂದಾಗ ಮತ್ತೊಂದು ಕೋಣೆಯಲ್ಲಿ ಇನ್ನೊಂದು ಶವ ಇರುವುದು ಕಂಡುಬಂದಿದೆ. ನಂತರದ ಹುಡುಕಾಟಗಳಲ್ಲಿ ಮತ್ತೊಂದು ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದ ಅಧಿಕಾರಿಯ ತಾಯಿಯದ್ದಾಗಿರಬಹುದು ಎಂದು ಶಂಕಿಸಲಾಗಿದೆ. ಒಟ್ಟು ಮೂರು ಶವಗಳು ಪತ್ತೆಯಾಗಿವೆ.

ಮತ್ತಷ್ಟು ಓದಿ: ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ

ಕುಟುಂಬವು ಕಳೆದ ಒಂದೂವರೆ ವರ್ಷದಿಂದ ಸಮುಚ್ಚಯದಲ್ಲಿ ವಾಸಿಸುತ್ತಿತ್ತು, ಆದರೆ ನೆರೆಹೊರೆಯವರೊಂದಿಗೆ ಅಷ್ಟಾಗಿ ಮಾತನಾಡುತ್ತಿರಲಿಲ್ಲ. ಕೊಳೆತ ದೇಹಗಳು ಪ್ರದೇಶದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದು, ಅನುಮಾನಗಳನ್ನು ಹುಟ್ಟುಹಾಕಿದೆ. ಎಲ್ಲರ ಸಾವು ಆತ್ಮಹತ್ಯೆಯೇ ಎಂಬುದನ್ನು ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಮುಚ್ಚಯದಲ್ಲಿ ಕ್ವಾರ್ಟರ್ಸ್‌ನಲ್ಲಿ ವಿಧಿವಿಜ್ಞಾನ ತಂಡದ ಪರಿಶೀಲನೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ