AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ

ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಏಕೈಕ ಆರೋಪಿ ವಿರುದ್ಧ ಎನ್‌ಐಎ ಅಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾರೂಖ್ ಸೈಫ್ ಎಂಬಾತ ಏಪ್ರಿಲ್​ನಲ್ಲಿ ರೈಲಿಗೆ ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ಒಂದು ಮಗು ಸೇರಿದಂತೆ ಮೂವರು ಮೃತಪಟ್ಟು 9 ಮಂದಿ ಗಾಯಗೊಂಡಿದ್ದರು. ನವದೆಹಲಿಯ ಶಾಹೀನ್ ಬಾಗ್ ಪ್ರದೇಶದ ನಿವಾಸಿ ಶಾರುಖ್ ಸೈಫಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಎಸ್), ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ರೈಲ್ವೇ ಕಾಯಿದೆ ಮತ್ತು ತಡೆಗಟ್ಟುವಿಕೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಎನ್‌ಐಎ ವಕ್ತಾರರು ತಿಳಿಸಿದ್ದಾರೆ

ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ
ಆರೋಪಿ ಶಾರೂಖ್Image Credit source: NDTV
ನಯನಾ ರಾಜೀವ್
|

Updated on: Oct 01, 2023 | 8:27 AM

Share

ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಏಕೈಕ ಆರೋಪಿ ವಿರುದ್ಧ ಎನ್‌ಐಎ ಅಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾರೂಖ್ ಸೈಫ್ ಎಂಬಾತ ಏಪ್ರಿಲ್​ನಲ್ಲಿ ರೈಲಿಗೆ ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ಒಂದು ಮಗು ಸೇರಿದಂತೆ ಮೂವರು ಮೃತಪಟ್ಟು 9 ಮಂದಿ ಗಾಯಗೊಂಡಿದ್ದರು. ನವದೆಹಲಿಯ ಶಾಹೀನ್ ಬಾಗ್ ಪ್ರದೇಶದ ನಿವಾಸಿ ಶಾರುಖ್ ಸೈಫಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಎಸ್), ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ರೈಲ್ವೇ ಕಾಯಿದೆ ಮತ್ತು ತಡೆಗಟ್ಟುವಿಕೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಎನ್‌ಐಎ ವಕ್ತಾರರು ತಿಳಿಸಿದ್ದಾರೆ. ಸಾರ್ವಜನಿಕ ಆಸ್ತಿಗೆ ಹಾನಿ (ಡಿಪಿಎ) ಪಿಡಿಪಿಪಿಯನ್ನು ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಸಲಾಗಿದೆ.

ಶಾರುಖ್ ಸೈಫಿ, ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಡಿ 1 ಕೋಚ್‌ಗೆ ಬೆಂಕಿ ಹಚ್ಚುವ ಮೂಲಕ ಭಯೋತ್ಪಾದಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಶಾರೂಖ್ ಜನರ ಮೇಲೆ ಪೆಟ್ರೋಲ್ ಎರಚಿದ್ದ, ಜನರನ್ನು ಕೊಲ್ಲುವ ಉದ್ದೇಶದಿಂದಲೇ ಬೋಗಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, 3 ಮಂದಿ ಸಾವು, 9 ಜನರಿಗೆ ಗಾಯ

ಶಾರುಖ್ ಮಾರ್ಚ್ 31 ರಂದು ನವದೆಹಲಿಯಿಂದ ಹೊರಟಿದ್ದ, ಏಪ್ರಿಲ್​ 2ಕ್ಕೆ ಕೇರಳಕ್ಕೆ ತಲುಪಿದ್ದ. ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ಹಾಗೂ ರೈಲ್ವೆ ನಿಲ್ದಾಣದ ಬಳಿ ಲೈಟರ್ ಖರೀದಿಸಿದ್ದ.

ಏಪ್ರಿಲ್ 17 ರಂದು ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ. NIA ದೆಹಲಿಯ 10 ಸ್ಥಳಗಳಲ್ಲಿ ಶೋಧಗಳನ್ನು ನಡೆಸಿತು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಹಲವಾರು ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿದೆ ಮತ್ತು ರೈಲ್ವೆ ನಿಲ್ದಾಣದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು