ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ

ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಏಕೈಕ ಆರೋಪಿ ವಿರುದ್ಧ ಎನ್‌ಐಎ ಅಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾರೂಖ್ ಸೈಫ್ ಎಂಬಾತ ಏಪ್ರಿಲ್​ನಲ್ಲಿ ರೈಲಿಗೆ ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ಒಂದು ಮಗು ಸೇರಿದಂತೆ ಮೂವರು ಮೃತಪಟ್ಟು 9 ಮಂದಿ ಗಾಯಗೊಂಡಿದ್ದರು. ನವದೆಹಲಿಯ ಶಾಹೀನ್ ಬಾಗ್ ಪ್ರದೇಶದ ನಿವಾಸಿ ಶಾರುಖ್ ಸೈಫಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಎಸ್), ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ರೈಲ್ವೇ ಕಾಯಿದೆ ಮತ್ತು ತಡೆಗಟ್ಟುವಿಕೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಎನ್‌ಐಎ ವಕ್ತಾರರು ತಿಳಿಸಿದ್ದಾರೆ

ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ
ಆರೋಪಿ ಶಾರೂಖ್
Image Credit source: NDTV

Updated on: Oct 01, 2023 | 8:27 AM

ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಏಕೈಕ ಆರೋಪಿ ವಿರುದ್ಧ ಎನ್‌ಐಎ ಅಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ.
ಶಾರೂಖ್ ಸೈಫ್ ಎಂಬಾತ ಏಪ್ರಿಲ್​ನಲ್ಲಿ ರೈಲಿಗೆ ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ಒಂದು ಮಗು ಸೇರಿದಂತೆ ಮೂವರು ಮೃತಪಟ್ಟು 9 ಮಂದಿ ಗಾಯಗೊಂಡಿದ್ದರು. ನವದೆಹಲಿಯ ಶಾಹೀನ್ ಬಾಗ್ ಪ್ರದೇಶದ ನಿವಾಸಿ ಶಾರುಖ್ ಸೈಫಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಎಸ್), ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ರೈಲ್ವೇ ಕಾಯಿದೆ ಮತ್ತು ತಡೆಗಟ್ಟುವಿಕೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಎನ್‌ಐಎ ವಕ್ತಾರರು ತಿಳಿಸಿದ್ದಾರೆ. ಸಾರ್ವಜನಿಕ ಆಸ್ತಿಗೆ ಹಾನಿ (ಡಿಪಿಎ) ಪಿಡಿಪಿಪಿಯನ್ನು ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಸಲಾಗಿದೆ.

ಶಾರುಖ್ ಸೈಫಿ, ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಡಿ 1 ಕೋಚ್‌ಗೆ ಬೆಂಕಿ ಹಚ್ಚುವ ಮೂಲಕ ಭಯೋತ್ಪಾದಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಶಾರೂಖ್ ಜನರ ಮೇಲೆ ಪೆಟ್ರೋಲ್ ಎರಚಿದ್ದ, ಜನರನ್ನು ಕೊಲ್ಲುವ ಉದ್ದೇಶದಿಂದಲೇ ಬೋಗಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, 3 ಮಂದಿ ಸಾವು, 9 ಜನರಿಗೆ ಗಾಯ

ಶಾರುಖ್ ಮಾರ್ಚ್ 31 ರಂದು ನವದೆಹಲಿಯಿಂದ ಹೊರಟಿದ್ದ, ಏಪ್ರಿಲ್​ 2ಕ್ಕೆ ಕೇರಳಕ್ಕೆ ತಲುಪಿದ್ದ. ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ಹಾಗೂ ರೈಲ್ವೆ ನಿಲ್ದಾಣದ ಬಳಿ ಲೈಟರ್ ಖರೀದಿಸಿದ್ದ.

ಏಪ್ರಿಲ್ 17 ರಂದು ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ. NIA ದೆಹಲಿಯ 10 ಸ್ಥಳಗಳಲ್ಲಿ ಶೋಧಗಳನ್ನು ನಡೆಸಿತು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಹಲವಾರು ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿದೆ ಮತ್ತು ರೈಲ್ವೆ ನಿಲ್ದಾಣದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us