ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ
ರೈಲುImage Credit source: Deccan Herald
Follow us
|

Updated on: Apr 03, 2024 | 3:30 PM

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಟಿಕೆಟ್ ಕೇಳಿದಾಗ ಆರೋಪಿ ಟಿಟಿಇಯನ್ನು ರೈಲಿನಿಂದ ತಳ್ಳಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭಿಸಿದ ರೈಲ್ವೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರೈಲು ಪ್ರಯಾಣಿಕರ ಹೇಳಿಕೆಗಳ ಪ್ರಕಾರ, ಆರೋಪಿಗಳು ತ್ರಿಶೂರ್‌ನಿಂದ ಸೂಪರ್‌ಫಾಸ್ಟ್ ರೈಲಿನ ಸ್ಲೀಪರ್ ಕೋಚ್​ಗೆ ಮದ್ಯಪಾನ ಮಾಡಿ ಹತ್ತಿದ್ದ.

ಕಾಯ್ದಿರಿಸಿದ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣ ಪಾವತಿಸಬೇಕಾದ ದಂಡದ ಬಗ್ಗೆ ಟಿಟಿಇ ಜತೆಗೆ ಜಗಳವಾಡಿದ್ದ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Big News: ರೈಲಿನಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಟಿಕೆಟ್ ಬುಕ್ ಮಾಡಬೇಕಾ?; ರೈಲ್ವೆ ಇಲಾಖೆಯ ನಿಯಮ ಹೀಗಿದೆ

ಟಿಟಿಇ ರೈಲ್ವೆ ಹಳಿ ಮೇಲೆ ಬಿದ್ದ ತಕ್ಷಣ ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದ ಮತ್ತೊಂದು ರೈಲಿಗೆ ಸಿಲುಕಿ ನುಜ್ಜುಗುಜ್ಜಾಗಿದ್ದಾರೆ. ಎರ್ನಾಕುಲಂ-ಪಾಟ್ನಾ ಎಕ್ಸ್​ಪ್ರೆಸ್​ ತ್ರಿಶೂರ್​ ರೈಲು ನಿಲ್ದಾಣದಿಂದ ಹೊರಟ ಬಳಿಕ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’