AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಕೇರಳ: ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ
ರೈಲುImage Credit source: Deccan Herald
ನಯನಾ ರಾಜೀವ್
|

Updated on: Apr 03, 2024 | 3:30 PM

Share

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚಲಿಸುತ್ತಿರುವ ರೈಲಿನಿಂದ ಟಿಟಿಇಯನ್ನು ತಳ್ಳಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದರ ಪರಿಣಾಮ ಟಿಟಿಇ ಸಾವನ್ನಪ್ಪಿದ್ದಾರೆ, ಪಾಟ್ನಾ ಸೂಪರ್​ಫಾಸ್ಟ್​ ರೈಲಿನ ಕೋಚ್​ ಸಂಖ್ಯೆ ಎಸ್​11ರಲ್ಲಿ ಟಿಟಿಇ ವಿನೋದ್​ ಕುಮಾರ್ ಟಿಕೆಟ್ ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬ ವಿನೋದ್ ಅವರನ್ನು ತಳ್ಳಿದ್ದಾನೆ, ಆತನನ್ನು ಪಾಲಕ್ಕಾಡ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಟಿಕೆಟ್ ಕೇಳಿದಾಗ ಆರೋಪಿ ಟಿಟಿಇಯನ್ನು ರೈಲಿನಿಂದ ತಳ್ಳಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭಿಸಿದ ರೈಲ್ವೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರೈಲು ಪ್ರಯಾಣಿಕರ ಹೇಳಿಕೆಗಳ ಪ್ರಕಾರ, ಆರೋಪಿಗಳು ತ್ರಿಶೂರ್‌ನಿಂದ ಸೂಪರ್‌ಫಾಸ್ಟ್ ರೈಲಿನ ಸ್ಲೀಪರ್ ಕೋಚ್​ಗೆ ಮದ್ಯಪಾನ ಮಾಡಿ ಹತ್ತಿದ್ದ.

ಕಾಯ್ದಿರಿಸಿದ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣ ಪಾವತಿಸಬೇಕಾದ ದಂಡದ ಬಗ್ಗೆ ಟಿಟಿಇ ಜತೆಗೆ ಜಗಳವಾಡಿದ್ದ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Big News: ರೈಲಿನಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಟಿಕೆಟ್ ಬುಕ್ ಮಾಡಬೇಕಾ?; ರೈಲ್ವೆ ಇಲಾಖೆಯ ನಿಯಮ ಹೀಗಿದೆ

ಟಿಟಿಇ ರೈಲ್ವೆ ಹಳಿ ಮೇಲೆ ಬಿದ್ದ ತಕ್ಷಣ ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದ ಮತ್ತೊಂದು ರೈಲಿಗೆ ಸಿಲುಕಿ ನುಜ್ಜುಗುಜ್ಜಾಗಿದ್ದಾರೆ. ಎರ್ನಾಕುಲಂ-ಪಾಟ್ನಾ ಎಕ್ಸ್​ಪ್ರೆಸ್​ ತ್ರಿಶೂರ್​ ರೈಲು ನಿಲ್ದಾಣದಿಂದ ಹೊರಟ ಬಳಿಕ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ