AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಕಾಡುಹಂದಿಗಳಿಗಾಗಿ ಹಾಕಿದ್ದ ವಿದ್ಯುತ್ ಬಲೆ ಸ್ಪರ್ಶಿಸಿ ಇಬ್ಬರು ಸಾವು

ಕಾಡು ಹಂದಿಗಳನ್ನು ಹಿಡಿಯಲು ಹಾಕಲಾಗಿದ್ದ ವಿದ್ಯುತ್ ಬಲೆಯನ್ನು ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ಮೃತರನ್ನು ಪುದುಸ್ಸೆರಿ ನಿವಾಸಿ ಸತೀಶ್ (22) ಮತ್ತು ಕೊಟ್ಟೆಕ್ಕಾಡ್ ಮೂಲದ ಶಿಜಿತ್ (22) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ಕಾಡುಹಂದಿಗಳಿಗಾಗಿ ಹಾಕಿದ್ದ ವಿದ್ಯುತ್ ಬಲೆ ಸ್ಪರ್ಶಿಸಿ ಇಬ್ಬರು ಸಾವು
ನಯನಾ ರಾಜೀವ್
|

Updated on: Sep 28, 2023 | 10:14 AM

Share

ಕಾಡು ಹಂದಿಗಳನ್ನು ಹಿಡಿಯಲು ಹಾಕಲಾಗಿದ್ದ ವಿದ್ಯುತ್ ಬಲೆಯನ್ನು ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ಮೃತರನ್ನು ಪುದುಸ್ಸೆರಿ ನಿವಾಸಿ ಸತೀಶ್ (22) ಮತ್ತು ಕೊಟ್ಟೆಕ್ಕಾಡ್ ಮೂಲದ ಶಿಜಿತ್ (22) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಕ್ಕಾಡ್ ಎಸ್ಪಿ ಆರ್.ಆನಂದ್, ನಿನ್ನೆ ಸತೀಶ್ ಮತ್ತು ಶಿಜಿತ್ ಅವರ ಸಂಬಂಧಿಕರು ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಬಳಿಕ ಹುಡುಕಾಟ ಆರಂಭಿಸಿದ್ದೆವು. ಭತ್ತದ ಗದ್ದೆಯ ಬಳಿ ಮಣ್ಣು ಕದಡಿದಿರುವುದು ಕಂಡುಬಂದಿದೆ. ಅಲ್ಲಿ ಶವಗಳನ್ನು ಹೂತಿರುವ ಶಂಕೆ ವ್ಯಕ್ತವಾಗಿತ್ತು.

ನಾವು ಆರ್‌ಡಿಒ, ವಿಧಿವಿಜ್ಞಾನ ಮತ್ತು ವೈಜ್ಞಾನಿಕ ತಜ್ಞರ ಸಮ್ಮುಖದಲ್ಲಿ ಪ್ರದೇಶದಿಂದ ಎರಡು ಶವಗಳನ್ನು ಹೊರತೆಗೆದಿದ್ದೇವೆ ಮತ್ತು ಅವುಗಳನ್ನು ಸತೀಶ್ ಮತ್ತು ಶಿಜಿತ್ ಅವರ ಕುಟುಂಬಗಳು ಎಂದು ಗುರುತಿಸಲಾಗಿದೆ. ತನಿಖೆಯ ಸಮಯದಲ್ಲಿ, ಅವರು ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮತ್ತಷ್ಟು ಓದಿ: ಕೇರಳ: ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸಮಾಧಿ ಮಾಡಿರುವ ಶಂಕೆ

ಅನುಮಾನದ ಆಧಾರದ ಮೇಲೆ ನಾವು ವಶಕ್ಕೆ ಪಡೆದಿದ್ದ ಗದ್ದೆಯ ಮಾಲೀಕರು ಕಾಡು ಹಂದಿಗಳನ್ನು ಹಿಡಿಯಲು ವಿದ್ಯುತ್ ಬಲೆ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ವ್ಯಕ್ತಿಗಳ ಎರಡು ಶವಗಳನ್ನು ಕಂಡಾಗ ಗಾಬರಿ ಮತ್ತು ಸಿಕ್ಕಿಬೀಳಬಹುದೆಂದು ಭಯ ಪಟ್ಟಿದ್ದಾಗಿ ತಿಳಿಸಿದ್ದಾರೆ.

ಸಾಕ್ಷ್ಯಗಳನ್ನು ನಾಶಪಡಿಸಲು ಮತ್ತು ಪೊಲೀಸರಿಗೆ ಸಿಕ್ಕಿಬೀಳುವುದನ್ನು ತಡೆಯಲು, ಎರಡು ಶವಗಳನ್ನು ಹೊಲದ ಪಕ್ಕದ ಗುಂಡಿಯಲ್ಲಿ ಹೂತುಹಾಕಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಇಬ್ಬರ ಶವಗಳನ್ನು ಹೂತಿಟ್ಟ ಗದ್ದೆಯ ಮಾಲೀಕ ಅಂಬಲಪರಂಬು ವೀಟಿಲ್ ಅನಂತಕುಮಾರ್ (53) ಎಂಬಾತನನ್ನು ಬಂಧಿಸಲಾಗಿದ್ದು, ಸಾಕ್ಷ್ಯ ನಾಶಪಡಿಸುವುದು, ಅಕ್ರಮವಾಗಿ ವಿದ್ಯುತ್ ಬಳಕೆ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳು ಮೃತದೇಹಗಳನ್ನು ವಿಲೇವಾರಿ ಮಾಡಲು ಇತರರಿಂದ ಸಹಾಯ ಪಡೆದಿದ್ದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಆರೋಪಿಗಳು ಶವವನ್ನು ಹೂಳುವ ವೇಳೆ ಇಬ್ಬರ ಹೊಟ್ಟೆಯಲ್ಲಿ ಆಳವಾದ ಗಾಯಗಳನ್ನು ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?