AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಕಾಡುಹಂದಿಗಳಿಗಾಗಿ ಹಾಕಿದ್ದ ವಿದ್ಯುತ್ ಬಲೆ ಸ್ಪರ್ಶಿಸಿ ಇಬ್ಬರು ಸಾವು

ಕಾಡು ಹಂದಿಗಳನ್ನು ಹಿಡಿಯಲು ಹಾಕಲಾಗಿದ್ದ ವಿದ್ಯುತ್ ಬಲೆಯನ್ನು ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ಮೃತರನ್ನು ಪುದುಸ್ಸೆರಿ ನಿವಾಸಿ ಸತೀಶ್ (22) ಮತ್ತು ಕೊಟ್ಟೆಕ್ಕಾಡ್ ಮೂಲದ ಶಿಜಿತ್ (22) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ಕಾಡುಹಂದಿಗಳಿಗಾಗಿ ಹಾಕಿದ್ದ ವಿದ್ಯುತ್ ಬಲೆ ಸ್ಪರ್ಶಿಸಿ ಇಬ್ಬರು ಸಾವು
ನಯನಾ ರಾಜೀವ್
|

Updated on: Sep 28, 2023 | 10:14 AM

Share

ಕಾಡು ಹಂದಿಗಳನ್ನು ಹಿಡಿಯಲು ಹಾಕಲಾಗಿದ್ದ ವಿದ್ಯುತ್ ಬಲೆಯನ್ನು ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ಮೃತರನ್ನು ಪುದುಸ್ಸೆರಿ ನಿವಾಸಿ ಸತೀಶ್ (22) ಮತ್ತು ಕೊಟ್ಟೆಕ್ಕಾಡ್ ಮೂಲದ ಶಿಜಿತ್ (22) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಕ್ಕಾಡ್ ಎಸ್ಪಿ ಆರ್.ಆನಂದ್, ನಿನ್ನೆ ಸತೀಶ್ ಮತ್ತು ಶಿಜಿತ್ ಅವರ ಸಂಬಂಧಿಕರು ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಬಳಿಕ ಹುಡುಕಾಟ ಆರಂಭಿಸಿದ್ದೆವು. ಭತ್ತದ ಗದ್ದೆಯ ಬಳಿ ಮಣ್ಣು ಕದಡಿದಿರುವುದು ಕಂಡುಬಂದಿದೆ. ಅಲ್ಲಿ ಶವಗಳನ್ನು ಹೂತಿರುವ ಶಂಕೆ ವ್ಯಕ್ತವಾಗಿತ್ತು.

ನಾವು ಆರ್‌ಡಿಒ, ವಿಧಿವಿಜ್ಞಾನ ಮತ್ತು ವೈಜ್ಞಾನಿಕ ತಜ್ಞರ ಸಮ್ಮುಖದಲ್ಲಿ ಪ್ರದೇಶದಿಂದ ಎರಡು ಶವಗಳನ್ನು ಹೊರತೆಗೆದಿದ್ದೇವೆ ಮತ್ತು ಅವುಗಳನ್ನು ಸತೀಶ್ ಮತ್ತು ಶಿಜಿತ್ ಅವರ ಕುಟುಂಬಗಳು ಎಂದು ಗುರುತಿಸಲಾಗಿದೆ. ತನಿಖೆಯ ಸಮಯದಲ್ಲಿ, ಅವರು ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮತ್ತಷ್ಟು ಓದಿ: ಕೇರಳ: ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸಮಾಧಿ ಮಾಡಿರುವ ಶಂಕೆ

ಅನುಮಾನದ ಆಧಾರದ ಮೇಲೆ ನಾವು ವಶಕ್ಕೆ ಪಡೆದಿದ್ದ ಗದ್ದೆಯ ಮಾಲೀಕರು ಕಾಡು ಹಂದಿಗಳನ್ನು ಹಿಡಿಯಲು ವಿದ್ಯುತ್ ಬಲೆ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ವ್ಯಕ್ತಿಗಳ ಎರಡು ಶವಗಳನ್ನು ಕಂಡಾಗ ಗಾಬರಿ ಮತ್ತು ಸಿಕ್ಕಿಬೀಳಬಹುದೆಂದು ಭಯ ಪಟ್ಟಿದ್ದಾಗಿ ತಿಳಿಸಿದ್ದಾರೆ.

ಸಾಕ್ಷ್ಯಗಳನ್ನು ನಾಶಪಡಿಸಲು ಮತ್ತು ಪೊಲೀಸರಿಗೆ ಸಿಕ್ಕಿಬೀಳುವುದನ್ನು ತಡೆಯಲು, ಎರಡು ಶವಗಳನ್ನು ಹೊಲದ ಪಕ್ಕದ ಗುಂಡಿಯಲ್ಲಿ ಹೂತುಹಾಕಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಇಬ್ಬರ ಶವಗಳನ್ನು ಹೂತಿಟ್ಟ ಗದ್ದೆಯ ಮಾಲೀಕ ಅಂಬಲಪರಂಬು ವೀಟಿಲ್ ಅನಂತಕುಮಾರ್ (53) ಎಂಬಾತನನ್ನು ಬಂಧಿಸಲಾಗಿದ್ದು, ಸಾಕ್ಷ್ಯ ನಾಶಪಡಿಸುವುದು, ಅಕ್ರಮವಾಗಿ ವಿದ್ಯುತ್ ಬಳಕೆ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳು ಮೃತದೇಹಗಳನ್ನು ವಿಲೇವಾರಿ ಮಾಡಲು ಇತರರಿಂದ ಸಹಾಯ ಪಡೆದಿದ್ದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಆರೋಪಿಗಳು ಶವವನ್ನು ಹೂಳುವ ವೇಳೆ ಇಬ್ಬರ ಹೊಟ್ಟೆಯಲ್ಲಿ ಆಳವಾದ ಗಾಯಗಳನ್ನು ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?