AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಸ್ಥಳೀಯ ರೆಸ್ಟೋರೆಂಟ್‌ನಿಂದ ಆಹಾರ ಸೇವಿಸಿದ ಮಹಿಳೆ ಸಾವು,178 ಮಂದಿ ಅಸ್ವಸ್ಥ

ವರದಿಗಳ ಪ್ರಕಾರ, ಜಿಲ್ಲಾ ವೈದ್ಯಕೀಯ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಕಲಾ ನೇತೃತ್ವದ ತಂಡವು ಐಡಿಎಸ್ಪಿ ಅಧಿಕಾರಿ ಡಾ. ಗೀತಾ ಅವರೊಂದಿಗೆ ರೆಸ್ಟೋರೆಂಟ್‌ನಲ್ಲಿ ಪುರಾವೆಗಳನ್ನು ಸಂಗ್ರಹಿಸಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಆಹಾರದಲ್ಲಿ ವಿಷವಿರುವುದು ಪತ್ತೆಯಾಗಿದೆ

ಕೇರಳ: ಸ್ಥಳೀಯ ರೆಸ್ಟೋರೆಂಟ್‌ನಿಂದ ಆಹಾರ ಸೇವಿಸಿದ ಮಹಿಳೆ ಸಾವು,178 ಮಂದಿ ಅಸ್ವಸ್ಥ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 29, 2024 | 6:50 PM

Share

ತ್ರಿಶೂರ್ ಮೇ 29: ಕೇರಳದ (Kerala) ತ್ರಿಶೂರ್ ಜಿಲ್ಲೆಯಲ್ಲಿ ಫುಡ್ ಪಾಯ್ಸನ್​​ನಿಂದಾಗಿ (food poisoning) ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಇಲ್ಲಿನ ಪೆರಿಂಞನಂ (Perinjanam) ಎಂಬ ಪ್ರದೇಶದ ಸ್ಥಳೀಯ ರೆಸ್ಟೋರೆಂಟ್‌ನಿಂದ ಕುಝಿಮಂದಿ (ಬಿರಿಯಾನಿ ಮಾದರಿಯ ಖಾದ್ಯ) ಸೇವಿಸಿದ ನಂತರ ಸುಮಾರು 178 ಜನರು ಅಸ್ವಸ್ಥರಾಗಿದ್ದಾರೆ. ಬೇಧಿ ಮತ್ತು ವಾಂತಿ ಸೇರಿದಂತೆ ರೋಗಲಕ್ಷಣಗಳು ಇವರಲ್ಲಿ ಕಂಡು ಬಂದಿದ್ದು ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕುಟಿಲಕ್ಕಡವ್ ನಿವಾಸಿ ಉಝೈಬಾ (56) ಎಂದು ಗುರುತಿಸಲಾಗಿದೆ. ತೀವ್ರ ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಆಕೆಗೆ ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಉಝೈಬಾ ಮತ್ತು ಆಕೆಯ ಇಬ್ಬರು ಸಂಬಂಧಿಕರು ಕೂಡಾ ಅಸ್ವಸ್ಥರಾಗಿದ್ದರು.

ಮಯೋನೀಸ್​​ನಿಂದ ಆಹಾರದಲ್ಲಿ ವಿಷ

ಕೇರಳದ ಮಾಂಸಾಹಾರಿ ರೆಸ್ಟೋರೆಂಟ್‌ಗಳಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಸುವಾಸನೆಯ ಅಕ್ಕಿ ಮತ್ತು ಮಾಂಸವನ್ನು ಒಳಗೊಂಡಿರುವ ಯೆಮೆನ್ ಮೂಲದ ಕುಝಿಮಂದಿ ಜತೆ ಬಡಿಸಿದ ಮಯೋನಿಸ್​​ನಿಂದ ಆಹಾರದಿಂದ ವಿಷ ಉಂಟಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ನಂತರ ಅಧಿಕಾರಿಗಳು ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದ್ದಾರೆ ಎಂದು ಕೈಪಮಂಗಲಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ರೆಸ್ಟೋರೆಂಟ್ ಬಂದ್

ಈ ಸ್ಥಳೀಯ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಸ್ಥಳೀಯ ಅಧಿಕಾರಿಗಳು ರೆಸ್ಟೋರೆಂಟ್ ವಿರುದ್ಧ ಕಠಿಣ ಕ್ರಮಗಳ ಭರವಸೆ ನೀಡಿದ್ದಾರೆ. ಪಂಚಾಯಿತಿ ಅಧ್ಯಕ್ಷೆ ವಿನೀತಾ ಮೋಹನ್‌ದಾಸ್ ಮಾತನಾಡಿ, ಪೆರಿಂಞನಂ ಮತ್ತು ಕಯ್ಪಮಂಗಲಂ ನಿವಾಸಿಗಳು ಆಸ್ಪತ್ರೆಯಲ್ಲಿದ್ದಾರೆ. ಅವರನ್ನು ಕೊಡಂಗಲ್ಲೂರು ಮತ್ತು ಇರಿಂಞಾಲಕುಡದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ, ಪಂಚಾಯತ್, ಆಹಾರ ಮತ್ತು ಸುರಕ್ಷತಾ ಅಧಿಕಾರಿಗಳು ಮತ್ತು ಪೊಲೀಸರು ಹೋಟೆಲ್‌ನಲ್ಲಿ ತಪಾಸಣೆ ನಡೆಸಿದರು ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಜಿಲ್ಲಾ ವೈದ್ಯಕೀಯ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಕಲಾ ನೇತೃತ್ವದ ತಂಡವು ಐಡಿಎಸ್ಪಿ ಅಧಿಕಾರಿ ಡಾ. ಗೀತಾ ಅವರೊಂದಿಗೆ ರೆಸ್ಟೋರೆಂಟ್‌ನಲ್ಲಿ ಪುರಾವೆಗಳನ್ನು ಸಂಗ್ರಹಿಸಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಆಹಾರದಲ್ಲಿ ವಿಷವಿರುವುದು ಪತ್ತೆಯಾಗಿದೆ. ಪ್ರಾಥಮಿಕ ಸಂಶೋಧನೆಗಳು ರೆಸ್ಟೋರೆಂಟ್ ಕೊಳು ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ 24 ವರ್ಷದ ಯುವಕನ ಸಾವು; ಪೋಷಕರಿಂದ ಕೊಲೆಯ ಶಂಕೆ

ಶನಿವಾರ ರಾತ್ರಿ, ಆಹಾರ ಸೇವಿಸಿದ ಪೆರಿಂಞನಂನಲ್ಲಿರುವ ಸೇನ್ ಹೋಟೆಲ್‌ನ ಪೋಷಕರಿಗೆ ಜ್ವರ, ಅತಿಸಾರ ಮತ್ತು ವಾಂತಿಯಂತಹ ಲಕ್ಷಣಗಳು ಕಾಣಿಸಿಕೊಂಡವು. ಹಲವರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರು. ಹೋಟೆಲ್ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಘಟನೆಗೆ ಸಂಬಂಧಿಸಿದಂತೆ ಕಯ್ಪಮಂಗಲಂ ಪೊಲೀಸ್ ಠಾಣೆ ಮತ್ತು ಪೆರಿಂಞನಂ ಪಂಚಾಯತ್‌ಗೆ ಅಧಿಕೃತ ವರದಿ ಸಲ್ಲಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Wed, 29 May 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ