AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಸ್ಥಳೀಯ ರೆಸ್ಟೋರೆಂಟ್‌ನಿಂದ ಆಹಾರ ಸೇವಿಸಿದ ಮಹಿಳೆ ಸಾವು,178 ಮಂದಿ ಅಸ್ವಸ್ಥ

ವರದಿಗಳ ಪ್ರಕಾರ, ಜಿಲ್ಲಾ ವೈದ್ಯಕೀಯ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಕಲಾ ನೇತೃತ್ವದ ತಂಡವು ಐಡಿಎಸ್ಪಿ ಅಧಿಕಾರಿ ಡಾ. ಗೀತಾ ಅವರೊಂದಿಗೆ ರೆಸ್ಟೋರೆಂಟ್‌ನಲ್ಲಿ ಪುರಾವೆಗಳನ್ನು ಸಂಗ್ರಹಿಸಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಆಹಾರದಲ್ಲಿ ವಿಷವಿರುವುದು ಪತ್ತೆಯಾಗಿದೆ

ಕೇರಳ: ಸ್ಥಳೀಯ ರೆಸ್ಟೋರೆಂಟ್‌ನಿಂದ ಆಹಾರ ಸೇವಿಸಿದ ಮಹಿಳೆ ಸಾವು,178 ಮಂದಿ ಅಸ್ವಸ್ಥ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 29, 2024 | 6:50 PM

Share

ತ್ರಿಶೂರ್ ಮೇ 29: ಕೇರಳದ (Kerala) ತ್ರಿಶೂರ್ ಜಿಲ್ಲೆಯಲ್ಲಿ ಫುಡ್ ಪಾಯ್ಸನ್​​ನಿಂದಾಗಿ (food poisoning) ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಇಲ್ಲಿನ ಪೆರಿಂಞನಂ (Perinjanam) ಎಂಬ ಪ್ರದೇಶದ ಸ್ಥಳೀಯ ರೆಸ್ಟೋರೆಂಟ್‌ನಿಂದ ಕುಝಿಮಂದಿ (ಬಿರಿಯಾನಿ ಮಾದರಿಯ ಖಾದ್ಯ) ಸೇವಿಸಿದ ನಂತರ ಸುಮಾರು 178 ಜನರು ಅಸ್ವಸ್ಥರಾಗಿದ್ದಾರೆ. ಬೇಧಿ ಮತ್ತು ವಾಂತಿ ಸೇರಿದಂತೆ ರೋಗಲಕ್ಷಣಗಳು ಇವರಲ್ಲಿ ಕಂಡು ಬಂದಿದ್ದು ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕುಟಿಲಕ್ಕಡವ್ ನಿವಾಸಿ ಉಝೈಬಾ (56) ಎಂದು ಗುರುತಿಸಲಾಗಿದೆ. ತೀವ್ರ ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಆಕೆಗೆ ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಉಝೈಬಾ ಮತ್ತು ಆಕೆಯ ಇಬ್ಬರು ಸಂಬಂಧಿಕರು ಕೂಡಾ ಅಸ್ವಸ್ಥರಾಗಿದ್ದರು.

ಮಯೋನೀಸ್​​ನಿಂದ ಆಹಾರದಲ್ಲಿ ವಿಷ

ಕೇರಳದ ಮಾಂಸಾಹಾರಿ ರೆಸ್ಟೋರೆಂಟ್‌ಗಳಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಸುವಾಸನೆಯ ಅಕ್ಕಿ ಮತ್ತು ಮಾಂಸವನ್ನು ಒಳಗೊಂಡಿರುವ ಯೆಮೆನ್ ಮೂಲದ ಕುಝಿಮಂದಿ ಜತೆ ಬಡಿಸಿದ ಮಯೋನಿಸ್​​ನಿಂದ ಆಹಾರದಿಂದ ವಿಷ ಉಂಟಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ನಂತರ ಅಧಿಕಾರಿಗಳು ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದ್ದಾರೆ ಎಂದು ಕೈಪಮಂಗಲಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ರೆಸ್ಟೋರೆಂಟ್ ಬಂದ್

ಈ ಸ್ಥಳೀಯ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಸ್ಥಳೀಯ ಅಧಿಕಾರಿಗಳು ರೆಸ್ಟೋರೆಂಟ್ ವಿರುದ್ಧ ಕಠಿಣ ಕ್ರಮಗಳ ಭರವಸೆ ನೀಡಿದ್ದಾರೆ. ಪಂಚಾಯಿತಿ ಅಧ್ಯಕ್ಷೆ ವಿನೀತಾ ಮೋಹನ್‌ದಾಸ್ ಮಾತನಾಡಿ, ಪೆರಿಂಞನಂ ಮತ್ತು ಕಯ್ಪಮಂಗಲಂ ನಿವಾಸಿಗಳು ಆಸ್ಪತ್ರೆಯಲ್ಲಿದ್ದಾರೆ. ಅವರನ್ನು ಕೊಡಂಗಲ್ಲೂರು ಮತ್ತು ಇರಿಂಞಾಲಕುಡದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ, ಪಂಚಾಯತ್, ಆಹಾರ ಮತ್ತು ಸುರಕ್ಷತಾ ಅಧಿಕಾರಿಗಳು ಮತ್ತು ಪೊಲೀಸರು ಹೋಟೆಲ್‌ನಲ್ಲಿ ತಪಾಸಣೆ ನಡೆಸಿದರು ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಜಿಲ್ಲಾ ವೈದ್ಯಕೀಯ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಕಲಾ ನೇತೃತ್ವದ ತಂಡವು ಐಡಿಎಸ್ಪಿ ಅಧಿಕಾರಿ ಡಾ. ಗೀತಾ ಅವರೊಂದಿಗೆ ರೆಸ್ಟೋರೆಂಟ್‌ನಲ್ಲಿ ಪುರಾವೆಗಳನ್ನು ಸಂಗ್ರಹಿಸಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಆಹಾರದಲ್ಲಿ ವಿಷವಿರುವುದು ಪತ್ತೆಯಾಗಿದೆ. ಪ್ರಾಥಮಿಕ ಸಂಶೋಧನೆಗಳು ರೆಸ್ಟೋರೆಂಟ್ ಕೊಳು ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ 24 ವರ್ಷದ ಯುವಕನ ಸಾವು; ಪೋಷಕರಿಂದ ಕೊಲೆಯ ಶಂಕೆ

ಶನಿವಾರ ರಾತ್ರಿ, ಆಹಾರ ಸೇವಿಸಿದ ಪೆರಿಂಞನಂನಲ್ಲಿರುವ ಸೇನ್ ಹೋಟೆಲ್‌ನ ಪೋಷಕರಿಗೆ ಜ್ವರ, ಅತಿಸಾರ ಮತ್ತು ವಾಂತಿಯಂತಹ ಲಕ್ಷಣಗಳು ಕಾಣಿಸಿಕೊಂಡವು. ಹಲವರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರು. ಹೋಟೆಲ್ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಘಟನೆಗೆ ಸಂಬಂಧಿಸಿದಂತೆ ಕಯ್ಪಮಂಗಲಂ ಪೊಲೀಸ್ ಠಾಣೆ ಮತ್ತು ಪೆರಿಂಞನಂ ಪಂಚಾಯತ್‌ಗೆ ಅಧಿಕೃತ ವರದಿ ಸಲ್ಲಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Wed, 29 May 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!