AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ದೌರ್ಜನ್ಯದ ಬಗ್ಗೆ ದೂರು ಆಲಿಸುವ ವೇಳೆ ಒರಟಾಗಿ ವರ್ತಿಸಿ ಟೀಕೆಗೊಳಗಾಗಿದ್ದ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

MC Josephine Resigned: 2017 ರಿಂದ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಜೋಸೆಫೈನ್ ಅವರಲ್ಲಿ ಶುಕ್ರವಾರ ತಿರುವನಂತಪುರಂನ ಎಕೆಜಿ ಭವನದಲ್ಲಿ ನಡೆದ ಸಿಪಿಎಂ ರಾಜ್ಯ ಸಚಿವಾಲಯದ ಸಭೆಯಲ್ಲಿ ವಿವರಣೆ ಕೇಳಲಾಯಿತು.

ಕೌಟುಂಬಿಕ ದೌರ್ಜನ್ಯದ ಬಗ್ಗೆ ದೂರು ಆಲಿಸುವ ವೇಳೆ ಒರಟಾಗಿ ವರ್ತಿಸಿ ಟೀಕೆಗೊಳಗಾಗಿದ್ದ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ
ಜೋಸೆಫೈನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 25, 2021 | 5:43 PM

Share

ಕೊಚ್ಚಿ: ಕೇರಳ ಮಹಿಳಾ ಆಯೋಗದ ಅಧ್ಯಕ್ಷ ಎಂ.ಸಿ.ಜೋಸೆಫೈನ್ ಸುದ್ದಿವಾಹಿನಿಯ ಲೈವ್ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಕರೆ ಆಲಿಸುವಾಗ ಒರಟಾಗಿ ವರ್ತಿಸಿದ್ದಕ್ಕೆ ಜನರಿಂದ ವ್ಯಾಪಕ ಟೀಕೆಗೊಳಗಾದ ಬೆನ್ನಲ್ಲೇ ಪ್ರಸ್ತುತ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2017 ರಿಂದ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಜೋಸೆಫೈನ್ ಅವರಲ್ಲಿ ಶುಕ್ರವಾರ ತಿರುವನಂತಪುರಂನ ಎಕೆಜಿ ಭವನದಲ್ಲಿ ನಡೆದ ಸಿಪಿಎಂ ರಾಜ್ಯ ಸಚಿವಾಲಯದ ಸಭೆಯಲ್ಲಿ ವಿವರಣೆ ಕೇಳಲಾಯಿತು. ಆದರೆ ಆಕೆಯ ಸ್ಪಷ್ಟೀಕರಣದ ಹೊರತಾಗಿಯೂ, ಸೆಕ್ರೆಟರಿಯೇಟ್‌ನ ಅನೇಕ ಸದಸ್ಯರು ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಳ್ಳುವಾಗ ಇಂತಹ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಆಕೆಯನ್ನು ಖಂಡಿಸಿದ್ದಾರೆಂದು ತಿಳಿದುಬಂದಿದೆ. ಪಕ್ಷದ ಒತ್ತಾಯದ ಮೇರೆಗೆ ಜೋಸೆಫೈನ್ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಮನೋರಮ ನ್ಯೂಸ್ ಲೈವ್ ಫೋನ್ ಇನ್ ಕಾರ್ಯಕ್ರಮದಲ್ಲಿ ಎರ್ನಾಕುಲಂ ಜಿಲ್ಲೆಯಿಂದ ಕರೆ ಮಾಡಿದ ಮಹಿಳೆಯೊಬ್ಬರು ತಮ್ಮ ಪತಿ ಮತ್ತು ಅತ್ತೆ ನನಗೆ ಹಿಂಸೆ ನೀಡುತ್ತಿದ್ದಾರೆ ಎಂದು ಅವಲತ್ತುಕೊಂಡಿದ್ದಾರೆ. ಹೀಗಿರುವಾಗ ಪೊಲೀಸರಿಗೆ ಯಾಕೆ ದೂರು ನೀಡಿಲ್ಲ? ಎಂದು ಜೋಸೆಫೈನ್ ಆಕೆಯಲ್ಲಿ ಕೇಳಿದಾಗ, ನಾನು ಯಾರಿಗೂ ಹೇಳಲಿಲ್ಲ ಎಂದು ಆ ಮಹಿಳೆ ಉತ್ತರಿಸಿದ್ದಾರೆ. ಮಹಿಳೆಯ ಈ ಮಾತನ್ನು ಕೇಳಿದ ಜೋಸೆಫೈನ್ “ಎನ್ನಾ ಪಿನ್ನೆ ಅನುಭವಿಚ್ಚೋ ! (ಓಹ್,ಹಾಗಾದ್ರೆ ಸಹಿಸಿಕೊಂಡಿರು ) ಎಂದಿದ್ದಾರೆ.

ಫೋನ್ ಇನ್ ಕಾರ್ಯಕ್ರಮದುದ್ದಕ್ಕೂ ಮಹಿಳಾ ಆಯೋಗದ ಮುಖ್ಯಸ್ಥರು ಕರೆ ಮಾಡುತ್ತಿರುವ ಮಹಿಳೆಯರಿಗೆ ಒರಟಾಗಿ,ಮನಸ್ಸಿಲ್ಲದ ಮನಸ್ಸಲ್ಲಿ ಉತ್ತರಿಸುತ್ತಿದ್ದರು. ಸರಿಯಾಗಿ ಆಲಿಸುವ ಮನಸ್ಥಿತಿಯೂ ಅವರಿಗಿರಲಿಲ್ಲ ಎಂಬಂತಿತ್ತು ಅವರ ಹಾವಭಾವ. ಕೌಟುಂಬಿಕ ಹಿಂಸೆ ಬಗ್ಗೆ ಕುಟುಂಬದ ನ್ಯಾಯಾಲಯಕ್ಕೆ ಸಮೀಪಿಸುವಂತೆ ದೂರುದಾರರಿಗೆ ಸಲಹೆ ನೀಡಿದ ಜೋಸೆಫೈನ್ ಇದರಿಂದಾಗಿ ತನ್ನ ಕುಟುಂಬವನ್ನು ಸರಿದೂಗಿಸಬಹುದು ಎಂದಿದ್ದಾರೆ. “ನಾನು ಹೇಳಿದ್ದನ್ನು ನೀವು ಅರ್ಥಮಾಡಿಕೊಂಡಿದ್ದೀರಾ? ನಿಮ್ಮ ಪತಿಯೊಂದಿಗೆ ನೀವು ವಾಸಿಸಲು ಬಯಸದಿದ್ದರೆ, ನೀವು ಉತ್ತಮ ವಕೀಲರನ್ನು ಸಂಪರ್ಕಿಸಿ ವರದಕ್ಷಿಣೆ ಹಿಂಪಡೆಯಬೇಕು ಪರಿಹಾರವನ್ನು ಪಡೆಯಲು ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿ ಎಂದು ಹೇಳಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮತ್ತೊಂದು ಕರೆ ಸ್ವೀಕರಿಸಿ ಮಾತನಾಡಿದ ಜೋಸೆಫೈನ್ , “ನೀವು ಮಾಡಿದ್ದು ಮೂರ್ಖತನ. ನೀವು ಬೇರೆ ಬೇರೆ ಆದ ನಂತರ ನಂತರ, ನೀವು ಯಾಕೆ ರಾಜಿಯಾಲು ಹೋಗಿದ್ದು? ನಿಮಗೊಂದ ಮಗು ಇದೆ. ನನಗೆ ಮಾತನಾಡಲು ಬಿಡಿ. ನೀವು ಮಾತನಾಡುತ್ತಾ ಹೋಗ್ತೀರಿ. ಎಲ್ಲ ತಪ್ಪುಗಳನ್ನು ಮಾಡುತ್ತಿರುವವರು ಮಹಿಳೆಯರೇ ಎಂದು ಗೊಣಗಿದ್ದಾರೆ.

ಈ ರೀತಿ ಪ್ರತಿಕ್ರಿಯಿಸಿದ ಬಗ್ಗೆ ವಾಹಿನಿಯ ಪತ್ರಕರ್ತೆ ಜೋಸೆಫೈನ್ ಅವರಲ್ಲಿ ಕೇಳಿದಾಗ ಮೊದಲು ಪ್ರತಿಕ್ರಿಯಿಸಲು ನಿರಾಕರಿಸಿದರು. ಆಮೇಲೆ ನಾನು ಯಾವ ಕೆಟ್ಟ ಪದಗಳಿಂದ ಬೈದಿಲ್ಲ. ಪೊಲೀಸರಿಗೆ ದೂರು ನೀಡಬೇಕಿತ್ತು ಎಂದಷ್ಟೇ ನಾನು ಹೇಳಿದೆ ಎಂದಿದ್ದಾರೆ.

“ಕೇರಳದ ಮಹಿಳೆಯರು ತನ್ನ ಸವಲತ್ತುಗಳ ಅಹಂಕಾರದಿಂದ ಅಸಹಾಯಕ ಯುವತಿಯರಿಗೆ ಪ್ರತಿಕ್ರಿಯಿಸುವ ವ್ಯಕ್ತಿಯನ್ನು ಏಕೆ ಸಹಿಸಬೇಕುಟ ಎಂದು ಕವಿ ದೀಪಾ ನಿಶಾಂತ್ ಫೇಸ್ಬುಕ್ ಜೋಸೆಫೈನ್  ವರ್ತನೆ ಖಂಡಿಸಿದ್ದರು.

ಸಿಪಿಎಂನ ಕೇಂದ್ರ ಸಮಿತಿಯ ಸದಸ್ಯರಾಗಿದ್ದ ಜೋಸೆಫೈನ್ ಅವರು ಈ ರೀತಿ ವಿವಾದಕ್ಕೀಡಾಗಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ವರ್ಷ, ಸಿಪಿಎಂ ನಾಯಕರ ವಿರುದ್ಧ ಪ್ರಕರಣಗಳ ಮೇಲೆ ಕಮಿಷನ್ ನಿಲುವು ಕುರಿತು ವರದಿಗಾರರಿಂದ ಪ್ರಶ್ನಿಸಿದಾಗ, ಜೋಸೆಫೀನ್ ತನ್ನ ಪಕ್ಷವು ನ್ಯಾಯಾಲಯ ಮತ್ತು ಪೊಲೀಸ್ ಠಾಣೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. ಈ ಹೇಳಿಕೆಯನ್ನು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ವ್ಯಾಪಕವಾಗಿ ಖಂಡಿಸಿದ್ದವು.

ಇದನ್ನೂ ಓದಿ:  ಕೌಟುಂಬಿಕ ದೌರ್ಜನ್ಯ ಬಗ್ಗೆ ಕರೆ ಮಾಡಿ ದೂರು ನೀಡಿದ ಮಹಿಳೆಯಲ್ಲಿ ‘ಹಾಗಾದರೆ ನೀನು ಸಹಿಸಿಕೊಂಡಿರು’ ಎಂದು ಉತ್ತರಿಸಿದ ಕೇರಳದ ಮಹಿಳಾ ಆಯೋಗದ ಅಧ್ಯಕ್ಷೆ

(Kerala Women’s Commission chief MC Josephine resigned after intense public backlash over her insensitive comments to a domestic violence victim)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!