ಕೇರಳದ ಆರ್ಥಿಕ ಪರಿಸ್ಥಿತಿ: ಕೇಂದ್ರಕ್ಕೆ ವರದಿ ಸಲ್ಲಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಚಿಂತನೆ

ಕೆಎಸ್‌ಆರ್‌ಟಿಸಿಯ ನಿವೃತ್ತ ನೌಕರರು ಸಲ್ಲಿಸಿದ ಮನವಿಯ ಮೇಲೆ ಕೇರಳ ಸರ್ಕಾರವು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಅನ್ನು ಉಲ್ಲೇಖಿಸಿದ ರಾಜ್ಯಪಾಲ ಆರಿಫ್ ಖಾನ್, ರಾಜ್ಯ ಸರ್ಕಾರವು ತನ್ನ ಸಿಬ್ಬಂದಿಗೆ ಪಿಂಚಣಿ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ನೀಡಿರುವ ಹಣಕಾಸು ಖಾತರಿಗಳನ್ನು ಪೂರೈಸುವ ಸ್ಥಿತಿಯಲ್ಲಿಲ್ಲ ಎಂದು ಮುಖ್ಯ ಕಾರ್ಯದರ್ಶಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಕೇರಳದ ಆರ್ಥಿಕ ಪರಿಸ್ಥಿತಿ: ಕೇಂದ್ರಕ್ಕೆ ವರದಿ ಸಲ್ಲಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಚಿಂತನೆ
ಆರಿಫ್ ಮೊಹಮ್ಮದ್ ಖಾನ್
Follow us
|

Updated on:Dec 12, 2023 | 8:43 PM

ದೆಹಲಿ ಡಿಸೆಂಬರ್ 12: ರಾಜ್ಯವು ಭಾರೀ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂಬ ವರದಿಗಳ ನಡುವೆ, ಕೇರಳದ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರು ಪರಿಸ್ಥಿತಿಯನ್ನು ಕೇಂದ್ರಕ್ಕೆ ತಿಳಿಸಲು ಕರ್ತವ್ಯ ಬದ್ಧರಾಗಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖಾನ್, ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಸರ್ಕಾರದಿಂದ ವರದಿಯನ್ನು ಕೇಳಿದ್ದಾರೆ. ರಾಜ್ಯದಿಂದ ಪ್ರತಿಕ್ರಿಯೆ ಬರಲು 10 ದಿನಗಳ ಕಾಲ ಕಾಯುತ್ತೇನೆ ಎಂದಿದ್ದಾರೆ ಅವರು.

ಸಂವಿಧಾನದ ಪರಿಚ್ಛೇದ 360(1)ರ ಪ್ರಕಾರ ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಹೇರುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಆರ್.ಎಸ್.ಶಶಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ರಾಜ್ಯಪಾಲರು ವರದಿ ಕೇಳಿದ್ದರು.

ಕೆಎಸ್‌ಆರ್‌ಟಿಸಿಯ ನಿವೃತ್ತ ನೌಕರರು ಸಲ್ಲಿಸಿದ ಮನವಿಯ ಮೇಲೆ ಕೇರಳ ಸರ್ಕಾರವು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಅನ್ನು ಉಲ್ಲೇಖಿಸಿದ ರಾಜ್ಯಪಾಲರು, ರಾಜ್ಯ ಸರ್ಕಾರವು ತನ್ನ ಸಿಬ್ಬಂದಿಗೆ ಪಿಂಚಣಿ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ನೀಡಿರುವ ಹಣಕಾಸು ಖಾತರಿಗಳನ್ನು ಪೂರೈಸುವ ಸ್ಥಿತಿಯಲ್ಲಿಲ್ಲ ಎಂದು ಮುಖ್ಯ ಕಾರ್ಯದರ್ಶಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಗವರ್ನರ್ ಖಾನ್ ಹೇಳಿದರು.

ರಾಜ್ಯವು ಬಿಕ್ಕಟ್ಟಿನಲ್ಲಿದ್ದರೆ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದು ನನ್ನ ಕರ್ತವ್ಯ. ಆಡಳಿತಾರೂಢ ಎಲ್​​ಡಿಎಫ್ ಸರ್ಕಾರದಿಂದ ಉತ್ತರವನ್ನು ಪಡೆಯಲು 10 ದಿನಗಳವರೆಗೆ ಕಾಯುವುದಾಗಿ ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ:ಕೇರಳ ರಾಜ್ಯಪಾಲರ ಕಾರಿನ ಮೇಲೆ ದಾಳಿ, ಕಪ್ಪು ಬಾವುಟ ಪ್ರದರ್ಶನ: 7 ಎಸ್ಎಫ್ಐ ಕಾರ್ಯಕರ್ತರ ಬಂಧನ 

ಎಸ್ಎಫ್ಐ ವಿರುದ್ಧ ಸೆಕ್ಷನ್ 124 ರ ಅಡಿಯಲ್ಲಿ ಆರೋಪ

ರಾಜ್ಯಪಾಲರು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಮೇಲ್ ಕಳುಹಿಸಿದ ಕೆಲವೇ ಗಂಟೆಗಳ ನಂತರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ರ ಅಡಿಯಲ್ಲಿ (ಅಧ್ಯಕ್ಷರು, ರಾಜ್ಯಪಾಲರು, ಇತ್ಯಾದಿಗಳ ಮೇಲೆ ಹಲ್ಲೆ ನಡೆಸುವುದು, ಯಾವುದೇ ಕಾನೂನುಬದ್ಧ ಅಧಿಕಾರವನ್ನು ಬಲವಂತಪಡಿಸುವ ಅಥವಾ ನಿರ್ಬಂಧಿಸುವ ಉದ್ದೇಶದಿಂದ) SFI ವಿರುದ್ಧ ಆರೋಪ ಹೊರಿಸಲಾಯಿತು. ಎಸ್ಎಫ್ಐ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸೋಮವಾರ ರಾತ್ರಿ ರಾಜ್ಯಪಾಲರ ಅಧಿಕೃತ ವಾಹನಕ್ಕೆ ಡಿಕ್ಕಿ ಹೊಡೆದು ದಾರಿಗೆ ಅಡ್ಡಿಪಡಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 pm, Tue, 12 December 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ