AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ಪರೇಡ್​​ಗೆ ಕೇರಳದ ಜಟಾಯುಪಾರ ಮತ್ತು ಶ್ರೀ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ

ಜಟಾಯುಪಾರ ದ್ವಾರದ ಮಾದರಿಯ ಸ್ತಬ್ಧಚಿತ್ರದ ಮುಂಭಾಗದಲ್ಲಿ ಶ್ರೀನಾರಾಯಣ ಗುರು ಪ್ರತಿಮೆ  ಇರಿಸಿ ಸಿದ್ಧಪಡಿಸಲಾಗಿತ್ತು. ಆದರೆ ಶ್ರೀಶಂಕರಾಚಾರ್ಯರ ಪ್ರತಿಮೆಯನ್ನು ಮುಂಭಾಗದಲ್ಲಿ ಇಡಬೇಕು ಎಂದು ರಕ್ಷಣಾ ಸಚಿವಾಲಯ ಸೂಚಿಸಿದೆ. ಒಂದು ವೇಳೆ ಈ ಬದಲಾವಣೆಯನ್ನು ಬಯಸದೇ ಇದ್ದರೆ ಸ್ತಬ್ಧಚಿತ್ರವನ್ನು ಹಿಂಪಡೆಯಬಹುದು ಎಂದು ಸಚಿವಾಲಯ ಹೇಳಿತ್ತು.

ಗಣರಾಜ್ಯೋತ್ಸವ ಪರೇಡ್​​ಗೆ ಕೇರಳದ ಜಟಾಯುಪಾರ ಮತ್ತು ಶ್ರೀ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ
ಕೇರಳದ ಸ್ತಬ್ದಚಿತ್ರ (ಕೃಪೆ: ಮಾತೃಭೂಮಿ ನ್ಯೂ,ಸ್ )
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 13, 2022 | 8:23 PM

Share

ದೆಹಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ (Republic Day parade) ಪ್ರದರ್ಶಿಸುವುದಕ್ಕಾಗಿ ಅನುಮೋದನೆ ನೀಡಲು ಕೇರಳ (Kerala) ಸಲ್ಲಿಸಿದ ಸ್ತಬ್ಧ ಚಿತ್ರವನ್ನು  ರಕ್ಷಣಾ ಸಚಿವಾಲಯ (Ministry of Defence) ತಿರಸ್ಕರಿಸಿದೆ. ಪ್ರವಾಸೋದ್ಯಮದ ಸಾಮರ್ಥ್ಯದ ಜೊತೆಗೆ ಮಹಿಳಾ ಸಬಲೀಕರಣದ ಸಂದೇಶವನ್ನು ಸಾರುವ ಚಡಯಮಂಗಲಂ ಜಟಾಯುಪಾರ (Chadayamangalam Jatayupara) ಮಾದರಿಯನ್ನು ಕೇರಳ ಸಿದ್ಧಪಡಿಸಿದೆ. ಈ ಸ್ತಬ್ಧ ಚಿತ್ರದ ಮುಂದೆ ಶ್ರೀ ನಾರಾಯಣ ಗುರು(Sree Narayana Gurudevan) ಪ್ರತಿಮೆಯನ್ನು ಇರಿಸಲು ರಾಜ್ಯವು ಉದ್ದೇಶಿಸಿತ್ತು. ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ “ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳು” ಎಂಬ ವಿಷಯವನ್ನು ಆಧರಿಸಿದ ಸ್ತಬ್ಧ ಚಿತ್ರವಾಗಿದೆ ಇದು. ಸ್ತಬ್ಧ ಚಿತ್ರದ ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ರಕ್ಷಣಾ ಸಚಿವಾಲಯವು ನೇಮಿಸಿದ ತೀರ್ಪುಗಾರರು ಎಲ್ಲಾ ಐದು ಸುತ್ತಿನ ಚರ್ಚೆಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದರು. ಡಿಸೆಂಬರ್ 18 ರಂದು ನಡೆದ ಅಂತಿಮ ಸುತ್ತಿನಲ್ಲಿ ತೀರ್ಪುಗಾರರು ಕೇರಳದ ಸ್ತಬ್ಧ ಚಿತ್ರವನ್ನು ಅನುಮೋದಿಸಿದರು ಮತ್ತು ಸಂಗೀತ ಸಂಯೋಜಿಸಲು ನಿರ್ದೇಶಿಸಿದರು.

ಸ್ತಬ್ಧ ಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದಿಂದ ಪತ್ರ ಬರದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ 12 ರಾಜ್ಯಗಳ ಪಟ್ಟಿಯಲ್ಲಿ ಕೇರಳ ಇಲ್ಲ ಎಂಬುದು ತಿಳಿದುಬಂದಿದೆ. ಅರುಣಾಚಲ ಪ್ರದೇಶ, ಹರ್ಯಾಣ, ಛತ್ತೀಸ್‌ಗಢ, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಹಾರಾಷ್ಟ್ರ, ಮೇಘಾಲಯ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಿಂದ ಸ್ತಬ್ಧ ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಪಂಜಾಬ್, ಮಹಾರಾಷ್ಟ್ರ ಮತ್ತು ಛತ್ತೀಸಗಢ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಕೇರಳದ ಸ್ತಬ್ಧ ಚಿತ್ರ ಈ ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.

ತೀರ್ಪುಗಾರರು ಆದಿ ಶಂಕರರನ್ನು ಕೇಳಿದ್ದರು, ಕೇರಳ ಗುರುದೇವನನ್ನು ಶಿಫಾರಸು ಮಾಡಿತ್ತು

ಜಟಾಯುಪಾರ ದ್ವಾರದ ಮಾದರಿಯ ಸ್ತಬ್ಧಚಿತ್ರದ ಮುಂಭಾಗದಲ್ಲಿ ಶ್ರೀನಾರಾಯಣ ಗುರು ಪ್ರತಿಮೆ  ಇರಿಸಿ ಸಿದ್ಧಪಡಿಸಲಾಗಿತ್ತು. ಆದರೆ ಶ್ರೀಶಂಕರಾಚಾರ್ಯರ ಪ್ರತಿಮೆಯನ್ನು ಮುಂಭಾಗದಲ್ಲಿ ಇಡಬೇಕು ಎಂದು ರಕ್ಷಣಾ ಸಚಿವಾಲಯ ಸೂಚಿಸಿದೆ. ಒಂದು ವೇಳೆ ಈ ಬದಲಾವಣೆಯನ್ನು ಬಯಸದೇ ಇದ್ದರೆ ಸ್ತಬ್ಧಚಿತ್ರವನ್ನು ಹಿಂಪಡೆಯಬಹುದು ಎಂದು ಸಚಿವಾಲಯ ಹೇಳಿತ್ತು ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದೆ. ಆದರೆ ಆದಿಶಂಕರರ ಪ್ರತಿಮೆಯನ್ನು ಜಟಾಯುಪಾರದ ಜತೆ ಇರಿಸುವ ಮೂಲಕ ಇದನ್ನು ತೀರ್ಥಯಾತ್ರೆ ಎಂದು ಪರಿಗಣಿಸಲಾಗುವುದು. ಜಟಾಯುಪಾರ ಇರುವ ಚಡಯಮಂಗಲಂ, ವರ್ಕಲ ಮತ್ತು ಚೆಂಪಳಂತಿಗೆ ಸಮೀಪದಲ್ಲಿರುವುದರಿಂದ ಗುರುದೇವನ ಪ್ರತಿಮೆ ಉತ್ತಮವಾಗಿರುತ್ತದೆ ಎಂದು ರಾಜ್ಯವು ವಿವರಣೆ ನೀಡಿದೆ. ತೀರ್ಪುಗಾರರ ಕೋರಿಕೆಯಂತೆ ಕೇರಳವೂ ಆದಿಶಂಕರರ ಪ್ರತಿಮೆ ಇರುವ ರೇಖಾಚಿತ್ರವನ್ನು ಸಲ್ಲಿಸಿತ್ತು ಎಂದು ಮಲಯಾಳಂ ಪತ್ರಿಕೆ ಕೇರಳ ಕೌಮುದಿ ವರದಿ ಮಾಡಿದೆ.

ಇದನ್ನೂ ಓದಿGender neutral ಶಿಕ್ಷಕರನ್ನು ಸರ್, ಮೇಡಂ ಎನ್ನುವ ಬದಲು ಟೀಚರ್ ಎಂದು ಸಂಬೋಧಿಸಲು ವಿದ್ಯಾರ್ಥಿಗಳಿಗೆ ನಿರ್ದೇಶಿಸಿದ ಕೇರಳದ ಶಾಲೆ

Published On - 8:20 pm, Thu, 13 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ