AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ಮಾಡುತ್ತೇವೆ: ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ

ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ನಡೆಸುತ್ತೇವೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಇಸ್ರೇಲ್​-ಪ್ಯಾಲೆಸ್ತೀನ್ ಸಂಘರ್ಷದಿಂದಾರೂ ಬುದ್ಧಿ ಕಲಿತುಕೊಳ್ಳಿ, ಹಮಾಸ್ ಮಾದರಿಯಲ್ಲೇ ನಾವು ದಾಳಿ ನಡೆಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಎಚ್ಚರಿಕೆ ನೀಡಿದ್ದಾನೆ. ಇಸ್ರೇಲ್​ನಲ್ಲಿ ಹಮಾಸ್ ದಾಳಿಯಿಂದ ಪಾಠ ಕಲುಯುವಂತೆ ಪನ್ನು ಭಾರತ ಸರ್ಕಾರ ಹಾಗೂ ಪಂಜಾಬ್ ಸಿಎಂ ಮಾನ್​ಗೆ ಹೇಳಿದ್ದಾನೆ.

ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ಮಾಡುತ್ತೇವೆ: ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ
ಉಗ್ರ ಗುರುಪತ್ವಂತ್ ಸಿಂಗ್Image Credit source: News 18
ನಯನಾ ರಾಜೀವ್
|

Updated on: Oct 11, 2023 | 10:23 AM

Share

ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ನಡೆಸುತ್ತೇವೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಇಸ್ರೇಲ್​-ಪ್ಯಾಲೆಸ್ತೀನ್ ಸಂಘರ್ಷದಿಂದಾರೂ ಬುದ್ಧಿ ಕಲಿತುಕೊಳ್ಳಿ, ಹಮಾಸ್ ಮಾದರಿಯಲ್ಲೇ ನಾವು ದಾಳಿ ನಡೆಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಎಚ್ಚರಿಕೆ ನೀಡಿದ್ದಾನೆ. ಇಸ್ರೇಲ್​ನಲ್ಲಿ ಹಮಾಸ್ ದಾಳಿಯಿಂದ ಪಾಠ ಕಲುಯುವಂತೆ ಪನ್ನು ಭಾರತ ಸರ್ಕಾರ ಹಾಗೂ ಪಂಜಾಬ್ ಸಿಎಂ ಮಾನ್​ಗೆ ಹೇಳಿದ್ದಾನೆ.

ಖಲಿಸ್ತಾನಿ ಉಗ್ರ ಪನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಬೆದರಿಕೆ ಹಾಕಿದ್ದಾನೆ.ಇದು 40 ಸೆಕೆಂಡುಗಳ ವಿಡಿಯೋವಾಗಿದ್ದು, ಪನ್ನು ಭಾರತದ ವಿರುದ್ಧ ವಿಷ ಉಗುಳಿದ್ದಾನೆ. ನಾವು ಪಂಜಾಬ್​ನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ ಅದನ್ನು ಭಾರತದಿಂದ ಮುಕ್ತಗೊಳಿಸಲು ಯಾವ ಹಂತಕ್ಕೆ ಬೇಕಾದರೂ ಇಳಿಯುತ್ತೇವೆ ಎಂದಿದ್ದಾನೆ.

ಪಂಜಾಬ್​ನಲ್ಲಿ ವಾಸಿಸುವ ಜನರು ಪ್ಯಾಲೆಸ್ತೀನ್​ನಂತೆ ಹಿಂಸಾಚಾರವನ್ನು ಪ್ರಾರಂಭಿಸಿದರೆ ಪರಿಸ್ಥಿತಿ ವಿನಾಶಕಾರಿಯಾಗುತ್ತದೆ ಎಂದು ಹೇಳಿದ್ದಾನೆ. ಕೆಲ ದಿನಗಳ ಹಿಂದೆ ವಿಶ್ವಕಪ್ ಕ್ರಿಕೆಟ್ ವೇಳೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಖಲಿಸ್ತಾನಿ ಧ್ವಜವನ್ನು ಹಾರಿಸುವುದಾಗಿ ಬೆದರಿಕೆ ಹಾಕಿದ್ದ.

ಮತ್ತಷ್ಟು ಓದಿ: ಪಂಜಾಬ್: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಆಸ್ತಿಗಳ ಮೇಲೆ ಎನ್​ಐಎ ದಾಳಿ

ವಿಡಿಯೋದಲ್ಲಿ ಇದು ಕ್ರಿಕೆಟ್ ವಿಶ್ವಕಪ್ ಅಲ್ಲ, ಭಯೋತ್ಪಾದನಾ ವಿಶ್ವಕಪ್ ಎಂದು ಹೇಳಿದ್ದ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು, ಕ್ರೀಡಾಂಗಣದಲ್ಲಿ ಖಲಿಸ್ತಾನದ ಧ್ವಜ ಮಾತ್ರ ಕಾಣಿಸುತ್ತದೆ ಎಂದು ವಿಡಿಯೋದಲ್ಲಿ ಹೇಳಿದ್ದ.

ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯ ಅಧಿಕಾರಿಗಳು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಆಸ್ತಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿತ್ತು ಆತ ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್​ನ ಮುಖಂಡ. ಚಂಡೀಗಢ ಮತ್ತು ಅಮೃತಸರದಲ್ಲಿರುವ ಆತನ ಆಸ್ತಿಯನ್ನು ಎನ್‌ಐಎ ವಶಪಡಿಸಿಕೊಂಡಿದೆ. ಪನ್ನು ಅಮೃತಸರ ನಿವಾಸಿಯಾಗಿದ್ದು, ಆತನ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿದೆ. ಕೆನಡಾದಲ್ಲಿ ಪನ್ನು ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಭಾರತದಲ್ಲಿ ಪನ್ನು ವಿರುದ್ಧ ದೇಶವಿರೋಧಿ ಪಿತೂರಿ

ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿದ್ದು, ಅದರ ವಿವರಗಳನ್ನು ನೀಡಲಾಗಿದೆ. ಪನ್ನುನ ಅಪರಾಧಗಳ ಬಗ್ಗೆ ಕೆನಡಾಕ್ಕೆ ಹಲವಾರು ಬಾರಿ ತಿಳಿಸಲಾಗಿದೆ. ಆದರೆ ಕೆನಡಾ ಭಯೋತ್ಪಾದಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಚಂಡೀಗಢದಲ್ಲಿ, ಖಾಲಿಸ್ತಾನಿ ಗುರುಪತ್ವಂತ್ ಪನ್ನು ಅವರ ಸೆಕ್ಟರ್ 15 ರ ಮನೆಯನ್ನು ಎನ್ಐಎ ವಶಪಡಿಸಿಕೊಂಡಿದೆ. ಸುಮಾರು ಅರ್ಧ ಗಂಟೆ ಕಾಲ ಎನ್‌ಐಎ ತಂಡ ಇಲ್ಲಿ ಹಾಜರಿದ್ದು, ಮನೆಯ ಹೊರಗೆ ಸೂಚನಾ ಫಲಕ ಹಾಕಿತ್ತು. ಅದೇ ರೀತಿ ಅಮೃತಸರದ ಖಾನ್ಕೋಟ್ ಗ್ರಾಮದಲ್ಲಿ ಪನ್ನುವಿನ 46 ಕನಾಲ್ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!