AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿ ಅಮೃತಪಾಲ್ ಸಿಂಗ್ ಮಾತು ಕೂಡಾ ರಾಹುಲ್ ಗಾಂಧಿಯಂತೆಯೇ ಇದೆ: ಹಿಮಂತ ಬಿಸ್ವಾ ಶರ್ಮಾ

1947 ರ ಮೊದಲು ಭಾರತ ಇರಲಿಲ್ಲ, ಇಂಡಿಯಾ ಇರಲಿಲ್ಲ. ಇದು ರಾಜ್ಯಗಳ ಒಕ್ಕೂಟವಾಗಿದೆ. ನಾವು ಒಕ್ಕೂಟಗಳನ್ನು ಗೌರವಿಸಬೇಕು. ನಾವು ರಾಜ್ಯಗಳನ್ನು ಗೌರವಿಸಬೇಕು. ಭಾರತದ ವ್ಯಾಖ್ಯಾನವನ್ನು ನಾನು ಒಪ್ಪುವುದಿಲ್ಲ ಎಂದು ಅಮೃತಪಾಲ್ ಸಿಂಗ್ ಟಿವಿ ವಾಹಿನಿಯೊಂದರಲ್ಲಿ ಹೇಳಿದ್ದರು

ಖಲಿಸ್ತಾನಿ ಅಮೃತಪಾಲ್ ಸಿಂಗ್ ಮಾತು ಕೂಡಾ ರಾಹುಲ್ ಗಾಂಧಿಯಂತೆಯೇ ಇದೆ: ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮ
ರಶ್ಮಿ ಕಲ್ಲಕಟ್ಟ
|

Updated on:Feb 24, 2023 | 8:06 PM

Share

ಪಂಜಾಬ್‌ನ ತೀವ್ರಗಾಮಿ ನಾಯಕ, ಸ್ವಯಂ ಘೋಷಿತ ಖಲಿಸ್ತಾನಿ ಅಮೃತಪಾಲ್ ಸಿಂಗ್ (Amritpal Singh) ಅವರು ರಾಹುಲ್ ಗಾಂಧಿ (Rahul Gandhi) ಅವರ ಭಾಷೆಯಲ್ಲಿ ಮಾತನಾಡುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಅದರ ನಾಯಕರು “ವಿಭಜನೆಯುಂಟು ಮಾಡುವ ಭಾಷೆ” ಬಳಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಶರ್ಮಾ ಪಟ್ಟು ಹಿಡಿದಿದ್ದಾರೆ. ರಾಹುಲ್ ಗಾಂಧಿಯವರ ಭಾಷೆ ಯಾರು ಮಾತನಾಡುತ್ತಾರೆ ನೋಡಿ. ಅಮೃತಸರದ ಪೊಲೀಸ್ ಠಾಣೆಗೆ ಧಿಕ್ಕಾರದ ರೀತಿಯಲ್ಲಿ ದಾಳಿ ಮಾಡಿದ ಅಮೃತಪಾಲ್ ಸಿಂಗ್ ಅವರ ಮಾತನ್ನು ಅನುಕರಿಸುತ್ತಾರೆ ಎಂದು ಅಸ್ಸಾಂ ಪೊಲೀಸರು ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅನ್ನು ಬಂಧಿಸಿದ ಒಂದು ದಿನದ ನಂತರ ಶರ್ಮಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಪ್ರಧಾನಿ ಮೋದಿಯವರ ‘ನರೇಂದ್ರ ಗೌತಮ್‌ದಾಸ್’ ಎಂದು ವ್ಯಂಗ್ಯವಾಡಿದ್ದಕ್ಕಾಗಿ ಅವರನ್ನು ಬುಧವಾರ ಬಂಧಿಸಲಾಗಿತ್ತು.

1947 ರ ಮೊದಲು ಭಾರತ ಇರಲಿಲ್ಲ, ಇಂಡಿಯಾ ಇರಲಿಲ್ಲ. ಇದು ರಾಜ್ಯಗಳ ಒಕ್ಕೂಟವಾಗಿದೆ. ನಾವು ಒಕ್ಕೂಟಗಳನ್ನು ಗೌರವಿಸಬೇಕು. ನಾವು ರಾಜ್ಯಗಳನ್ನು ಗೌರವಿಸಬೇಕು. ಭಾರತದ ವ್ಯಾಖ್ಯಾನವನ್ನು ನಾನು ಒಪ್ಪುವುದಿಲ್ಲ ಎಂದು ಅಮೃತಪಾಲ್ ಸಿಂಗ್ ಟಿವಿ ವಾಹಿನಿಯೊಂದರಲ್ಲಿ ಹೇಳಿದ್ದರು. ಈ ವಿಡಿಯೊದ ಜತೆಗೆ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾಡಿದ ಭಾಷಣದ ವಿಡಿಯೊ ಟ್ವೀಟ್ ಮಾಡಿದ ಶರ್ಮಾ, ಖಲಿಸ್ತಾನಿಗಳು ರಾಹುಲ್ ಗಾಂಧಿಯವರ ಮಾತು ಅನುಸರಿಸುತ್ತಾರೆ ಎಂದಿದ್ದಾರೆ.

ಶುಕ್ರವಾರ ಬಿಡುಗಡೆಯಾದ ಲವ್‌ಪ್ರೀತ್ ತೂಫಾನ್ ಬಂಧನಕ್ಕೆ ಸಂಬಂಧಿಸಿದಂತೆ ಖಲಿಸ್ತಾನಿ ಅಮೃತಪಾಲ್ ಸಿಂಗ್ ಅವರ ಬೆಂಬಲಿಗರು ಮತ್ತು ಪೊಲೀಸರ ನಡುವೆ ಭಾರಿ ಘರ್ಷಣೆ ನಡೆದಿದ್ದು ಈ ಹೊತ್ತಲ್ಲೇ, ಅಸ್ಸಾಂ ಮುಖ್ಯಮಂತ್ರಿ ಕಾಂಗ್ರೆಸ್ ಅನ್ನು ದೂಷಿಸಿದ್ದಾರೆ.

ಇದನ್ನೂ ಓದಿ: ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಲವ್‌ಪ್ರೀತ್ ತೂಫಾನ್ ಜೈಲಿನಿಂದ ಬಿಡುಗಡೆ

‘ಭಿಂದ್ರನ್‌ವಾಲೆ 2.0’ ಎಂದು ಕರೆಯಲ್ಪಡುವ, ದೀಪ್ ಸಿಧು ಅವರ ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರು ಇತ್ತೀಚೆಗೆ ಖಲಿಸ್ತಾನ್ ಬೇಡಿಕೆಯನ್ನು ಪುನಃ ಎತ್ತಿದ್ದಾರೆ. ಹಲವಾರು ಸಂದರ್ಶನಗಳಲ್ಲಿ, ಟಿವಿ ಚಾನೆಲ್‌ಗಳಲ್ಲಿ ಅವರು ಖಲಿಸ್ತಾನ್ ಪಿಡುಗು ಅಲ್ಲ, ದುಃಖವನ್ನು ಕೊನೆಗೊಳಿಸುವುದು ಬೇಡಿಕೆಯಾಗಿದೆ ಎಂದು ಹೇಳಿದರು. “ಖಾಲಿಸ್ತಾನ ಭಾವನೆ ಉಳಿಯುತ್ತದೆ, ನೀವು ಅದನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಖಲಿಸ್ತಾನ್ ಅನ್ನು ಸೈದ್ಧಾಂತಿಕ ದೃಷ್ಟಿಕೋನವಾಗಿ ನೋಡಬೇಕು ಎಂದಿದ್ದರು ಅವರು.

ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ. ಭಾರತವನ್ನು ರಾಷ್ಟ್ರವೆಂದು ವಿವರಿಸಲಾಗಿಲ್ಲ, ಆದರೆ ರಾಜ್ಯಗಳ ಒಕ್ಕೂಟವಾಗಿದೆ. ಇದು ಪಾಲುದಾರಿಕೆಯಾಗಿದೆ, ಸಾಮ್ರಾಜ್ಯವಲ್ಲ, ”ಎಂದು ರಾಹುಲ್ ಗಾಂಧಿ 2022 ರಲ್ಲಿ ಲೋಕಸಭೆಯಲ್ಲಿ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Fri, 24 February 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!