Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್​ನಿಂದ ಎಚ್ಚರಿಕೆ

ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳ ಸಂಚಾರಕ್ಕೆ ಅಡ್ಡಿಪಡಿಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಹಾಕಿದ್ದಾನೆ. ನವೆಂಬರ್ 19 ರಂದು ಜಾಗತಿಕ ದಿಗ್ಬಂಧನದ ಭಾಗವಾಗಿ, ನಾವು ಏರ್ ಇಂಡಿಯಾವನ್ನು ಕಾರ್ಯನಿರ್ವಹಿಸಲು ಅನುಮತಿಸುವುದಿಲ್ಲ ಎಂದು ಆತ ಹೇಳಿದ್ದಾನೆ.

ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್​ನಿಂದ ಎಚ್ಚರಿಕೆ
ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು
Follow us
TV9 Web
| Updated By: Ganapathi Sharma

Updated on: Nov 04, 2023 | 6:50 PM

ನವದೆಹಲಿ, ನವೆಂಬರ್ 4: ಕ್ರಿಕೆಟ್ ವಿಶ್ವಕಪ್ ಫೈನಲ್ ದಿನ, ಅಂದರೆ ನವೆಂಬರ್ 19ರಂದು ಏರ್ ಇಂಡಿಯಾ ವಿಮಾನಗಳು ಹಾರಾಡುವಂತಿಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು (Gurpatwant Singh Pannun) ಬೆದರಿಕೆ ಹಾಕಿದ್ದಾನೆ. ಸಿಖ್ಸ್ ಫಾರ್ ಜಸ್ಟಿಸ್ ವಾಟರ್‌ಮಾರ್ಕ್ ಹೊಂದಿರುವ ವೀಡಿಯೊದಲ್ಲಿ ಗುರುಪತ್ವಂತ್ ಸಿಂಗ್ ಪನ್ನು ಮಾತನಾಡುತ್ತಿರುವುದನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ ಬಳಕೆದಾರರು ಹಂಚಿಕೊಂಡಿದ್ದಾರೆ.

ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳ ಸಂಚಾರಕ್ಕೆ ಅಡ್ಡಿಪಡಿಸುವುದಾಗಿ ಅತ ಬೆದರಿಕೆ ಹಾಕಿದ್ದಾನೆ. ನವೆಂಬರ್ 19 ರಂದು ಜಾಗತಿಕ ದಿಗ್ಬಂಧನದ ಭಾಗವಾಗಿ, ನಾವು ಏರ್ ಇಂಡಿಯಾವನ್ನು ಕಾರ್ಯನಿರ್ವಹಿಸಲು ಅನುಮತಿಸುವುದಿಲ್ಲ. ನಾವು ನವೆಂಬರ್ 19 ರಿಂದ ಏರ್ ಇಂಡಿಯಾ ಸೇವೆಗಳನ್ನು ಬಳಸದಂತೆ ಸಿಖ್ ಸಮುದಾಯದ ಎಲ್ಲಾ ಸದಸ್ಯರಿಗೆ ಸಲಹೆ ನೀಡುತ್ತೇವೆ. ಹಾಗೆ ಮಾಡಿದಲ್ಲಿ, ಅದು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಪನ್ನು ಬೆದರಿಕೆಯೊಡ್ಡಿದ್ದಾನೆ.

ನವೆಂಬರ್ 19 ರಂದು ಇಂದಿರಾ ಗಾಂಧಿ ವಿಮಾನ ನಿಲ್ದಾಣವನ್ನು ಮುಚ್ಚಬೇಕು ಎಂದೂ ಆತ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾನೆ. ಈ ನವೆಂಬರ್ 19 ‘ವಿಶ್ವ ಭಯೋತ್ಪಾದಕ ಕಪ್‌ನ ಫೈನಲ್‌’ಗೆ ಹೊಂದಿಕೆಯಾಗುತ್ತದೆ ಎಂದು ಆತ ‘ಕ್ರಿಕೆಟ್ ವಿಶ್ವಕಪ್ 2023’ ರ ಫೈನಲ್ ಅನ್ನು ಉಲ್ಲೇಖಿಸಿ ಪ್ರಸ್ತಾಪಿಸಿದ್ದಾನೆ. ಕ್ರಿಕೆಟ್ ವಿಶ್ವಕಪ್ ಫೈನಲ್ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: ವಿಡಿಯೋ ನೋಡಿ: ದೆಹಲಿಯಲ್ಲಿ ಡಿಟಿಸಿ ಬಸ್ ಭೀಕರ ಅಪಘಾತ, ತಪ್ಪಿದ ಭಾರೀ ಅನಾಹುತ

‘ಅಂದು, ಸಿಖ್ ಸಮುದಾಯದ ಮೇಲೆ ಭಾರತದ ದಬ್ಬಾಳಿಕೆಗೆ ಜಗತ್ತು ಸಾಕ್ಷಿಯಾಗಲಿದೆ. ಪಂಜಾಬ್ ಸ್ವಾತಂತ್ರ್ಯ ಸಾಧಿಸಿದ ನಂತರ ವಿಮಾನ ನಿಲ್ದಾಣದ ಹೆಸರನ್ನು ಶಾಹಿದ್ ಬಿಯಾಂತ್ ಸಿಂಗ್, ಶಾಹಿದ್ ಸತ್ವಂತ್ ಸಿಂಗ್ ಖಲಿಸ್ತಾನ್ ವಿಮಾನ ನಿಲ್ದಾಣ ಎಂದು ಬದಲಾಯಿಸಲಾಗುತ್ತದೆ’ ಎಂದು ಆತ ಹೇಳಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು