Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆ ವಿಡಿಯೊ: ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನುನ್ ವಿರುದ್ಧ ಪ್ರಕರಣ ದಾಖಲು

ನವೆಂಬರ್ 4 ರಂದು ಬಿಡುಗಡೆಯಾದ ವಿಡಿಯೊ ಸಂದೇಶಗಳಲ್ಲಿ, ಪನ್ನುನ್ ಸಿಖ್ಖರು ತಮ್ಮ ಜೀವಕ್ಕೆ ಸಂಭವನೀಯ ಬೆದರಿಕೆಯನ್ನು ಉಲ್ಲೇಖಿಸಿ ನವೆಂಬರ್ 19 ರಂದು ಮತ್ತು ನಂತರ ಏರ್ ಇಂಡಿಯಾ ವಿಮಾನಗಳಲ್ಲಿ ಹಾರಾಟವನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದರು.

ಬೆದರಿಕೆ ವಿಡಿಯೊ: ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನುನ್ ವಿರುದ್ಧ ಪ್ರಕರಣ ದಾಖಲು
ಗುರುಪತ್‌ವಂತ್ ಸಿಂಗ್ ಪನ್ನುನ್
Follow us
ರಶ್ಮಿ ಕಲ್ಲಕಟ್ಟ
|

Updated on: Nov 20, 2023 | 8:19 PM

ದೆಹಲಿ ನವೆಂಬರ್ 20: ನವೆಂಬರ್ 19 ರಿಂದ ಏರ್ ಇಂಡಿಯಾ(Air India) ಮತ್ತು ವಿಮಾನದಲ್ಲಿ ಪ್ರಯಾಣಿಸುತ್ತಿರುವವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ನಿಯೋಜಿತ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಐಎ ಹೇಳಿದೆ. ಭಾರತೀಯ ದಂಡ ಸಂಹಿತೆ ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 4 ರಂದು ಬಿಡುಗಡೆಯಾದ ವಿಡಿಯೊ ಸಂದೇಶಗಳಲ್ಲಿ, ಪನ್ನುನ್ ಸಿಖ್ಖರು ತಮ್ಮ ಜೀವಕ್ಕೆ ಸಂಭವನೀಯ ಬೆದರಿಕೆಯನ್ನು ಉಲ್ಲೇಖಿಸಿ ನವೆಂಬರ್ 19 ರಂದು ಮತ್ತು ನಂತರ ಏರ್ ಇಂಡಿಯಾ ವಿಮಾನಗಳಲ್ಲಿ ಹಾರಾಟವನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದರು.

ಸಿಖ್ಸ್ ಫಾರ್ ಜಸ್ಟಿಸ್ (SFJ) ನ ಸ್ವಯಂ ಘೋಷಿತ ಸಾಮಾನ್ಯ ಸಲಹೆಗಾರ ಪನ್ನುನ್, ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊ ಸಂದೇಶಗಳನ್ನು ಬಿಡುಗಡೆ ಮಾಡಿದರು. ಇದರ ನಂತರ ಹೆಚ್ಚಿನ ಎಚ್ಚರಿಕೆಯನ್ನು ನೀಡಲಾಯಿತು. ಕೆನಡಾ, ಭಾರತ ಮತ್ತು ಏರ್ ಇಂಡಿಯಾ ಹಾರಾಟ ನಡೆಸುವ ಇತರ ಕೆಲವು ದೇಶಗಳಲ್ಲಿ ಭದ್ರತಾ ಪಡೆಗಳು ತನಿಖೆಯನ್ನು ಪ್ರಾರಂಭಿಸಿದವು.

2019 ರಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆ ತನ್ನ ಮೊದಲ ಪ್ರಕರಣವನ್ನು ದಾಖಲಿಸಿದಾಗಿನಿಂದ ಪನ್ನುನ್ ಎನ್‌ಐಎ ಕಣ್ಗಾವಲಿನಲ್ಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ಎನ್‌ಐಎ ಪಂಜಾಬ್‌ನ ಅಮೃತಸರ ಮತ್ತು ಚಂಡೀಗಢದಲ್ಲಿ ಅವರ ಪಾಲಿನ ಮನೆ ಮತ್ತು ಜಮೀನನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್

ಫೆಬ್ರವರಿ 3, 2021 ರಂದು NIA ವಿಶೇಷ ನ್ಯಾಯಾಲಯವು ಪನ್ನುನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದು, ಕಳೆದ ವರ್ಷ ನವೆಂಬರ್ 29 ರಂದು ಅವರನ್ನು “ಘೋಷಿತ ಅಪರಾಧಿ” ಎಂದು ಘೋಷಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು