AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ್ ಪರ ಸಂಘಟನೆಯಿಂದ ಹಣಪಡೆದ ಆರೋಪದ ನಡುವೆ ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ

ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ನಿಂದ ಹಣವನ್ನು ಪಡೆದ ಆರೋಪ ಎದುರಿಸುತ್ತಿರುವ, ಯುಕೆ ಮೂಲದ ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್‌ನ ಭಾರತ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದ್ದು, ಅದು ಖಾಲ್ಸಾ ಏಡ್‌ನಿಂದ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಎನ್‌ಜಿಒ ರಚನೆಯಲ್ಲಿ ಸಾಂಸ್ಥಿಕ ಬದಲಾವಣೆಗಳು ಅಗತ್ಯವೆಂದು ಹೇಳುತ್ತದೆ.

ಖಲಿಸ್ತಾನ್ ಪರ ಸಂಘಟನೆಯಿಂದ ಹಣಪಡೆದ ಆರೋಪದ ನಡುವೆ ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ
ಅಮರ್​ಪ್ರೀತ್ ಸಿಂಗ್Image Credit source: India Today
ನಯನಾ ರಾಜೀವ್
|

Updated on: Oct 08, 2023 | 12:47 PM

Share

ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ನಿಂದ ಹಣವನ್ನು ಪಡೆದ ಆರೋಪ ಎದುರಿಸುತ್ತಿರುವ, ಯುಕೆ ಮೂಲದ ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್‌ನ ಭಾರತ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದ್ದು, ಅದು ಖಾಲ್ಸಾ ಏಡ್‌ನಿಂದ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಎನ್‌ಜಿಒ ರಚನೆಯಲ್ಲಿ ಸಾಂಸ್ಥಿಕ ಬದಲಾವಣೆಗಳು ಅಗತ್ಯವೆಂದು ಹೇಳುತ್ತದೆ.

ಆಗಸ್ಟ್‌ನಲ್ಲಿ, ಭಯೋತ್ಪಾದನಾ ವಿರೋಧಿ ಸಂಸ್ಥೆ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಪಟಿಯಾಲದಲ್ಲಿರುವ ಖಾಲ್ಸಾ ಏಡ್‌ನ ಭಾರತದ ಪ್ರಧಾನ ಕಚೇರಿಯ ಆವರಣದ ಮೇಲೆ ದಾಳಿ ನಡೆಸಿತ್ತು. ಅಮರ್‌ಪ್ರೀತ್ ಸಿಂಗ್ ಮಾಲೀಕತ್ವದ ಕೆಲವು ದಾಖಲೆಗಳು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಸಂಸ್ಥೆ ವಶಪಡಿಸಿಕೊಂಡಿದೆ.

ಮಾರ್ಚ್ 19 ರಂದು ಲಂಡನ್‌ನಲ್ಲಿ ಭಾರತೀಯ ಮಿಷನ್ ಮೇಲೆ ದಾಳಿ ನಡೆದ ನಂತರ ಎನ್‌ಐಎ ತಂಡವು ಪಟಿಯಾಲ ಪ್ರದೇಶದಲ್ಲಿ ನೆಲೆಗೊಂಡಿರುವ ಅಮರ್‌ಪ್ರೀತ್ ಸಿಂಗ್ ಅವರ ಮನೆಯಲ್ಲಿ ಹುಡುಕಾಟ ನಡೆಸಿತ್ತು . ಹಣದ ಮೂಲ ಮತ್ತು ಎನ್‌ಜಿಒಗೆ ಸಂಬಂಧಿಸಿದ ಸ್ವಯಂಸೇವಕರ ವಿವರಗಳ ಬಗ್ಗೆಯೂ ಅವರನ್ನು ಪ್ರಶ್ನಿಸಲಾಯಿತು.

ಮತ್ತಷ್ಟು ಓದಿ: ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA

ಈ ವರ್ಷ ಜುಲೈನಲ್ಲಿ ಕೆನಡಾದಲ್ಲಿ ಕೊಲ್ಲಲ್ಪಟ್ಟ ಹರ್ದೀಪ್ ಸಿಂಗ್ ನಿಜ್ಜರ್ ಅವರು SFJ ನ ಪ್ರಮುಖ ಸದಸ್ಯರಾಗಿದ್ದರು. ಅಮರ್‌ಪ್ರೀತ್ ಸಿಂಗ್ ಪ್ರತಿಕ್ರಿಯೆಗೆ ಸಿಗದಿದ್ದರೂ ಪಟಿಯಾಲ ಸಿಐಡಿ ಅಧಿಕಾರಿಗಳು ಅವರು ಖಾಲ್ಸಾ ಏಡ್‌ನ ಇಂಡಿಯಾ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ