AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ್ ಪರ ಸಂಘಟನೆಯಿಂದ ಹಣಪಡೆದ ಆರೋಪದ ನಡುವೆ ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ

ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ನಿಂದ ಹಣವನ್ನು ಪಡೆದ ಆರೋಪ ಎದುರಿಸುತ್ತಿರುವ, ಯುಕೆ ಮೂಲದ ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್‌ನ ಭಾರತ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದ್ದು, ಅದು ಖಾಲ್ಸಾ ಏಡ್‌ನಿಂದ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಎನ್‌ಜಿಒ ರಚನೆಯಲ್ಲಿ ಸಾಂಸ್ಥಿಕ ಬದಲಾವಣೆಗಳು ಅಗತ್ಯವೆಂದು ಹೇಳುತ್ತದೆ.

ಖಲಿಸ್ತಾನ್ ಪರ ಸಂಘಟನೆಯಿಂದ ಹಣಪಡೆದ ಆರೋಪದ ನಡುವೆ ಖಾಲ್ಸಾ ಏಡ್‌ನ ಭಾರತದ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ
ಅಮರ್​ಪ್ರೀತ್ ಸಿಂಗ್Image Credit source: India Today
Follow us
ನಯನಾ ರಾಜೀವ್
|

Updated on: Oct 08, 2023 | 12:47 PM

ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ನಿಂದ ಹಣವನ್ನು ಪಡೆದ ಆರೋಪ ಎದುರಿಸುತ್ತಿರುವ, ಯುಕೆ ಮೂಲದ ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್‌ನ ಭಾರತ ಮುಖ್ಯಸ್ಥ ಅಮರ್‌ಪ್ರೀತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದ್ದು, ಅದು ಖಾಲ್ಸಾ ಏಡ್‌ನಿಂದ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಎನ್‌ಜಿಒ ರಚನೆಯಲ್ಲಿ ಸಾಂಸ್ಥಿಕ ಬದಲಾವಣೆಗಳು ಅಗತ್ಯವೆಂದು ಹೇಳುತ್ತದೆ.

ಆಗಸ್ಟ್‌ನಲ್ಲಿ, ಭಯೋತ್ಪಾದನಾ ವಿರೋಧಿ ಸಂಸ್ಥೆ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಪಟಿಯಾಲದಲ್ಲಿರುವ ಖಾಲ್ಸಾ ಏಡ್‌ನ ಭಾರತದ ಪ್ರಧಾನ ಕಚೇರಿಯ ಆವರಣದ ಮೇಲೆ ದಾಳಿ ನಡೆಸಿತ್ತು. ಅಮರ್‌ಪ್ರೀತ್ ಸಿಂಗ್ ಮಾಲೀಕತ್ವದ ಕೆಲವು ದಾಖಲೆಗಳು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಸಂಸ್ಥೆ ವಶಪಡಿಸಿಕೊಂಡಿದೆ.

ಮಾರ್ಚ್ 19 ರಂದು ಲಂಡನ್‌ನಲ್ಲಿ ಭಾರತೀಯ ಮಿಷನ್ ಮೇಲೆ ದಾಳಿ ನಡೆದ ನಂತರ ಎನ್‌ಐಎ ತಂಡವು ಪಟಿಯಾಲ ಪ್ರದೇಶದಲ್ಲಿ ನೆಲೆಗೊಂಡಿರುವ ಅಮರ್‌ಪ್ರೀತ್ ಸಿಂಗ್ ಅವರ ಮನೆಯಲ್ಲಿ ಹುಡುಕಾಟ ನಡೆಸಿತ್ತು . ಹಣದ ಮೂಲ ಮತ್ತು ಎನ್‌ಜಿಒಗೆ ಸಂಬಂಧಿಸಿದ ಸ್ವಯಂಸೇವಕರ ವಿವರಗಳ ಬಗ್ಗೆಯೂ ಅವರನ್ನು ಪ್ರಶ್ನಿಸಲಾಯಿತು.

ಮತ್ತಷ್ಟು ಓದಿ: ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA

ಈ ವರ್ಷ ಜುಲೈನಲ್ಲಿ ಕೆನಡಾದಲ್ಲಿ ಕೊಲ್ಲಲ್ಪಟ್ಟ ಹರ್ದೀಪ್ ಸಿಂಗ್ ನಿಜ್ಜರ್ ಅವರು SFJ ನ ಪ್ರಮುಖ ಸದಸ್ಯರಾಗಿದ್ದರು. ಅಮರ್‌ಪ್ರೀತ್ ಸಿಂಗ್ ಪ್ರತಿಕ್ರಿಯೆಗೆ ಸಿಗದಿದ್ದರೂ ಪಟಿಯಾಲ ಸಿಐಡಿ ಅಧಿಕಾರಿಗಳು ಅವರು ಖಾಲ್ಸಾ ಏಡ್‌ನ ಇಂಡಿಯಾ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ