AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 01, 2023 | 8:53 PM

Share

ಖಾಪ್ ನಿಯೋಗವು ಸರ್ಕಾರ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ರಾಕೇಶ್ ಟಿಕಾಯತ್ (Rakesh Tikait) ಅವರು ಗುರುವಾರ ಹೇಳಿದ್ದಾರೆ. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರು ಕುಸ್ತಿಪಟುಗಳು (Wrestlers Protest) ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಖಾಪ್ ನಿಯೋಗ ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದೆ. ಖಾಪ್ ಮತ್ತು ಈ ಮಹಿಳೆಯರು (ಪ್ರತಿಭಟಿಸುವ ಕುಸ್ತಿಪಟುಗಳು) ಸೋಲಬಾರದು. ನಾಳೆ ಕುರುಕ್ಷೇತ್ರದಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ಖಾಪ್‌ಗಳ ಪ್ರತಿನಿಧಿಗಳು ಗುರುವಾರ ಮುಜಫರ್‌ನಗರದ ಸೋರಂ ಗ್ರಾಮದಲ್ಲಿ ಮಾಜಿ ಬ್ರಿಜ್ ಭೂಷಣ್ ಮೇಲಿನ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಮಹಿಳಾ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ

ಹರ್ಯಾಣದಲ್ಲಿ ನಾಳೆ ಮತ್ತೊಂದು ಪಂಚಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು. ಕುಸ್ತಿಪಟುಗಳ ಬೆಂಬಲಕ್ಕೆ ಖಾಪ್‌ಗಳ ಪ್ರತಿನಿಧಿಗಳು ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದ್ದು, ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ:100 ವರ್ಷ ಪುರಾತನ ದೇಗುಲ ಸೇರಿದಂತೆ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳ ದಾಂಧಲೆ; 12 ಮೂರ್ತಿಗಳು ಧ್ವಂಸ

ಕುಸ್ತಿಪಟುಗಳ ಬೇಡಿಕೆ

12 ವರ್ಷಗಳ ಕಾಲ ಭಾರತೀಯ ಕುಸ್ತಿಯನ್ನು ಆಳಿದ ಗೊಂಡಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತೆ ಸೇರಿದಂತೆ ಅಥ್ಲೀಟ್‌ಗಳ ಲೈಂಗಿಕ ಕಿರುಕುಳ ನೀಡಿದ್ದು ಅವರನ್ನು ಮೇಲೆ ಬಂಧಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಬ್ರಿಜ್ ಭೂಷಣ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ. ಕುಸ್ತಿಪಟುಗಳ ವಿರುದ್ಧ ಗುಡುಗಿದ ಸಿಂಗ್, ಪದಕಗಳು ತಲಾ ₹15 ಮೌಲ್ಯದ್ದಾಗಿವೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ