ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
Follow us
|

Updated on: Jun 01, 2023 | 8:53 PM

ಖಾಪ್ ನಿಯೋಗವು ಸರ್ಕಾರ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ರಾಕೇಶ್ ಟಿಕಾಯತ್ (Rakesh Tikait) ಅವರು ಗುರುವಾರ ಹೇಳಿದ್ದಾರೆ. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರು ಕುಸ್ತಿಪಟುಗಳು (Wrestlers Protest) ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಖಾಪ್ ನಿಯೋಗ ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದೆ. ಖಾಪ್ ಮತ್ತು ಈ ಮಹಿಳೆಯರು (ಪ್ರತಿಭಟಿಸುವ ಕುಸ್ತಿಪಟುಗಳು) ಸೋಲಬಾರದು. ನಾಳೆ ಕುರುಕ್ಷೇತ್ರದಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ಖಾಪ್‌ಗಳ ಪ್ರತಿನಿಧಿಗಳು ಗುರುವಾರ ಮುಜಫರ್‌ನಗರದ ಸೋರಂ ಗ್ರಾಮದಲ್ಲಿ ಮಾಜಿ ಬ್ರಿಜ್ ಭೂಷಣ್ ಮೇಲಿನ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಮಹಿಳಾ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ

ಹರ್ಯಾಣದಲ್ಲಿ ನಾಳೆ ಮತ್ತೊಂದು ಪಂಚಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು. ಕುಸ್ತಿಪಟುಗಳ ಬೆಂಬಲಕ್ಕೆ ಖಾಪ್‌ಗಳ ಪ್ರತಿನಿಧಿಗಳು ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದ್ದು, ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ:100 ವರ್ಷ ಪುರಾತನ ದೇಗುಲ ಸೇರಿದಂತೆ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳ ದಾಂಧಲೆ; 12 ಮೂರ್ತಿಗಳು ಧ್ವಂಸ

ಕುಸ್ತಿಪಟುಗಳ ಬೇಡಿಕೆ

12 ವರ್ಷಗಳ ಕಾಲ ಭಾರತೀಯ ಕುಸ್ತಿಯನ್ನು ಆಳಿದ ಗೊಂಡಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತೆ ಸೇರಿದಂತೆ ಅಥ್ಲೀಟ್‌ಗಳ ಲೈಂಗಿಕ ಕಿರುಕುಳ ನೀಡಿದ್ದು ಅವರನ್ನು ಮೇಲೆ ಬಂಧಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಬ್ರಿಜ್ ಭೂಷಣ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ. ಕುಸ್ತಿಪಟುಗಳ ವಿರುದ್ಧ ಗುಡುಗಿದ ಸಿಂಗ್, ಪದಕಗಳು ತಲಾ ₹15 ಮೌಲ್ಯದ್ದಾಗಿವೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು