AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
ರಶ್ಮಿ ಕಲ್ಲಕಟ್ಟ
|

Updated on: Jun 01, 2023 | 8:53 PM

Share

ಖಾಪ್ ನಿಯೋಗವು ಸರ್ಕಾರ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ರಾಕೇಶ್ ಟಿಕಾಯತ್ (Rakesh Tikait) ಅವರು ಗುರುವಾರ ಹೇಳಿದ್ದಾರೆ. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರು ಕುಸ್ತಿಪಟುಗಳು (Wrestlers Protest) ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಖಾಪ್ ನಿಯೋಗ ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದೆ. ಖಾಪ್ ಮತ್ತು ಈ ಮಹಿಳೆಯರು (ಪ್ರತಿಭಟಿಸುವ ಕುಸ್ತಿಪಟುಗಳು) ಸೋಲಬಾರದು. ನಾಳೆ ಕುರುಕ್ಷೇತ್ರದಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ಖಾಪ್‌ಗಳ ಪ್ರತಿನಿಧಿಗಳು ಗುರುವಾರ ಮುಜಫರ್‌ನಗರದ ಸೋರಂ ಗ್ರಾಮದಲ್ಲಿ ಮಾಜಿ ಬ್ರಿಜ್ ಭೂಷಣ್ ಮೇಲಿನ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಮಹಿಳಾ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ

ಹರ್ಯಾಣದಲ್ಲಿ ನಾಳೆ ಮತ್ತೊಂದು ಪಂಚಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು. ಕುಸ್ತಿಪಟುಗಳ ಬೆಂಬಲಕ್ಕೆ ಖಾಪ್‌ಗಳ ಪ್ರತಿನಿಧಿಗಳು ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದ್ದು, ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ:100 ವರ್ಷ ಪುರಾತನ ದೇಗುಲ ಸೇರಿದಂತೆ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳ ದಾಂಧಲೆ; 12 ಮೂರ್ತಿಗಳು ಧ್ವಂಸ

ಕುಸ್ತಿಪಟುಗಳ ಬೇಡಿಕೆ

12 ವರ್ಷಗಳ ಕಾಲ ಭಾರತೀಯ ಕುಸ್ತಿಯನ್ನು ಆಳಿದ ಗೊಂಡಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತೆ ಸೇರಿದಂತೆ ಅಥ್ಲೀಟ್‌ಗಳ ಲೈಂಗಿಕ ಕಿರುಕುಳ ನೀಡಿದ್ದು ಅವರನ್ನು ಮೇಲೆ ಬಂಧಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಬ್ರಿಜ್ ಭೂಷಣ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ. ಕುಸ್ತಿಪಟುಗಳ ವಿರುದ್ಧ ಗುಡುಗಿದ ಸಿಂಗ್, ಪದಕಗಳು ತಲಾ ₹15 ಮೌಲ್ಯದ್ದಾಗಿವೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!