AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faizan Ahmed: ಖರಗ್‌ಪುರದ ಐಐಟಿ ವಿದ್ಯಾರ್ಥಿ ಸಾವು ಪ್ರಕರಣ: ಶಂಕಿತರ ಮೇಲೆ ನಾರ್ಕೋ ಪರೀಕ್ಷೆಗೆ ಕಲ್ಕತ್ತಾ ಹೈಕೋರ್ಟ್ ಅನುಮತಿ

ಖರಗ್‌ಪುರದ ಐಐಟಿ ವಿದ್ಯಾರ್ಥಿ ಫೈಜಾನ್ ಅಹ್ಮದ್ ಸಾವಿನ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಪ್ರಕರಣದಲ್ಲಿ ತನಿಖಾ ತಂಡವು ಶಂಕಿತ ವ್ಯಕ್ತಿಗಳನ್ನು ನಾರ್ಕೋ ಪರೀಕ್ಷೆ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ.

Faizan Ahmed: ಖರಗ್‌ಪುರದ ಐಐಟಿ ವಿದ್ಯಾರ್ಥಿ ಸಾವು ಪ್ರಕರಣ: ಶಂಕಿತರ ಮೇಲೆ ನಾರ್ಕೋ ಪರೀಕ್ಷೆಗೆ ಕಲ್ಕತ್ತಾ ಹೈಕೋರ್ಟ್ ಅನುಮತಿ
ಫೈಜಾನ್ ಅಹ್ಮದ್
ಅಕ್ಷಯ್​ ಪಲ್ಲಮಜಲು​​
|

Updated on:Jun 14, 2023 | 1:00 PM

Share

ಕೋಲ್ಕತ್ತಾ: ಖರಗ್‌ಪುರದ ಐಐಟಿ ವಿದ್ಯಾರ್ಥಿ ಫೈಜಾನ್ ಅಹ್ಮದ್ ಸಾವಿನ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಪ್ರಕರಣದಲ್ಲಿ ತನಿಖಾ ತಂಡವು ಶಂಕಿತ ವ್ಯಕ್ತಿಗಳನ್ನು ನಾರ್ಕೋ ಪರೀಕ್ಷೆ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಫೈಜಾನ್ ಅಹ್ಮದ್ ಅವರ ದೇಹವನ್ನು ಎರಡನೇ ಬಾರಿಗೆ ಶವಪರೀಕ್ಷೆ ಮಾಡಲಾಗಿದ್ದು, ಸಾವಿಗೂ ಮೊದಲು ಉಂಟಾದ ಗಾಯಗಳನ್ನು ತನಿಖೆ ವರದಿಯಲ್ಲಿ ತಿಳಿಸಲಾಗಿದ್ದು, ಇದಕ್ಕೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ನಾರ್ಕೋ ಪರೀಕ್ಷೆ ಒಳಪಡಿಸುವಂತೆ ಕೋರ್ಟ್ ಹೇಳಿದೆ. ಇದು ನರಹತ್ಯೆಯ ಸ್ವರೂಪವಾಗಿದೆ ಎಂದು ಹೇಳಿದೆ.

ಫೈಜಾನ್ ಅವರ ದೇಹವನ್ನು ಸುಮಾರು ಮೂರು ವಾರಗಳ ಹಿಂದೆ ಕಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಅಸ್ಸಾಂನಲ್ಲಿ ಎರಡನೇ ಬಾರಿಗೆ ಶವಪರೀಕ್ಷೆಗಾಗಿ ದೇಹ ಹೊರತೆಗೆಯಲಾಯಿತು, ಈ ಬಗ್ಗೆ ನ್ಯಾಯಾಲಯವು ನೇಮಿಸಿದ ತಜ್ಞರ ಪ್ರಕಾರ ತನಿಖೆಯ ಹಲವಾರು ಲೋಪದೋಷಗಳನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಐಐಟಿ ವಿದ್ಯಾರ್ಥಿ ಸಾವು ಪ್ರಕರಣ: ಸಮಾಧಿಯಿಂದ ದೇಹವನ್ನು ಹೊರತೆಗೆದು ಮತ್ತೆ ಮರಣೋತ್ತರ ಪರೀಕ್ಷೆ ನಡೆಸಿ: ಕೋರ್ಟ್

ಮೃತದೇಹವನ್ನು ಪಶ್ಚಿಮ ಬಂಗಾಳ ಪೊಲೀಸರ ತಂಡ ಕೋಲ್ಕತ್ತಾಗೆ ಕೊಂಡೊಯ್ದಿದ್ದು, ನ್ಯಾಯಾಲಯ ನೇಮಿಸಿದ ತಜ್ಞರಿಂದ ಎರಡನೇ ಶವಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಅಕ್ಟೋಬರ್‌ನಲ್ಲಿ 23 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಾಲೇಜು ಹೇಳಿಕೊಂಡಿತ್ತು. ಆದರೆ ಆತನ ಪೋಷಕರು ಆತನನ್ನು ಕೊಲೆ ಮಾಡಲಾಗಿದೆ ಎಂದು ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್​​ ಈ ಬಗ್ಗೆ ವಿಚಾರಣೆ ನಡೆಸಿ, ಒಂದು ಸಮಿತಿಯನ್ನು ರಚನೆ ಮಾಡಿ, ಆ ಮೂಲಕ ತನಿಖೆ ನಡೆಸಲು ಆದೇಶವನ್ನು ನೀಡಿತ್ತು. ತನಿಖಾ ತಂಡವು ಕೂಡ ಇದಕ್ಕೆ ಒಪ್ಪಿಗೆ ನೀಡಿತ್ತು, ಮತ್ತೊಮ್ಮೆ ಪ್ರಾಥಮಿಕ ತನಿಖಾ ನಡೆಸಬೇಕು, ಅದಕ್ಕೆ ಮತ್ತೆ ಶವಪರೀಕ್ಷೆ ಮಾಡಬೇಕಿದೆ ಎಂದು ಹೇಳಿತ್ತು. ಇದಕ್ಕೆ ಒಪ್ಪಿದ ಹೈಕೋರ್ಟ್​ ಶವವನ್ನು ಸಮಾಧಿಯಿಂದ ಹೊರತೆಗೆಯುವಂತೆ ಆದೇಶವನ್ನು ನೀಡಿತ್ತು.

ಈಗಾಗಲೇ ಅಸ್ಸಾಂನಲ್ಲಿ ಫೈಜಾನ್ ಅಹ್ಮದ್ ಅವರ ದೇಹವನ್ನು ಮುಸ್ಲಿಂ ವಿಧಿವಿಧಾನಗಳ ಪ್ರಕಾರ ಸಮಾಧಿ ಮಾಡಲಾಗಿದೆ. ಫೈಜಾನ್ ಅಹ್ಮದ್ ಅವರ ದೇಹವನ್ನು ಹೊರತೆಗೆಯಲು ಆದೇಶಿಸಿದ ನಂತರ ದೇಹವನ್ನು ಹೊರತೆಗೆಯಲಾಗಿತ್ತು. ಪ್ರಾಥಮಿಕ ತನಿಖೆಯನ್ನು ನಡೆಸಿದ್ದು,  ವರದಿಯನ್ನು ಹೈಕೋರ್ಟ್​ಗೆ ತನಿಖಾ ತಂಡ ಸಲ್ಲಿಸಿದೆ, ಈ ವರದಿ ಆಧಾರದ ಮೇಲೆ ಹೈಕೋರ್ಟ್​ ಶಂಕಿತರ ಮೇಲೆ ನಾರ್ಕೋ ಪರೀಕ್ಷೆ ನಡೆಸುವಂತೆ ಅನುಮತಿ ನೀಡಿದೆ.  ಇದರ ಜತೆಗೆ ತನಿಖಾಧಿಕಾರಿಗಳು ಅಸ್ಸಾಂ ಪೊಲೀಸರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Wed, 14 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ