AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ನಾಯಕರ ಟೀಕೆ ಕುರಿತು ಮೋದಿಗೆ ಖರ್ಗೆ ಪತ್ರ

ಈ ವಿಷಯಗಳು ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಅತ್ಯಂತ ಮಹತ್ವದ್ದಾಗಿರುವುದರಿಂದ ಈ ವಿಷಯಗಳ ಬಗ್ಗೆ ಚರ್ಚಿಸಬೇಕಾಗಿದೆ. "ಭಾರತೀಯ ರಾಜಕೀಯದಲ್ಲಿ ಇಂತಹ ಕಟು ಟೀಕೆ ನೋಡಲು ಮಾತ್ರ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹುತಾತ್ಮರಾಗಿದ್ದಾರೆಯೇ?" ಎಂದು  ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ನಾಯಕರ ಟೀಕೆ ಕುರಿತು ಮೋದಿಗೆ ಖರ್ಗೆ ಪತ್ರ
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
|

Updated on: Sep 17, 2024 | 6:29 PM

Share

ದೆಹಲಿ ಸೆಪ್ಟೆಂಬರ್ 17: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಎನ್‌ಡಿಎ ನಾಯಕರು ಮಾಡಿದ ಟೀಕೆಗಳಿಗೆ ಕಳವಳ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ರವನೀತ್ ಬಿಟ್ಟು ಬಳಸಿದ ನಂಬರ್ ಒನ್ ಭಯೋತ್ಪಾದಕ ಪದಗಳು ಮತ್ತು ಬಿಜೆಪಿಯ ಮಾಜಿ ಶಾಸಕ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿರುವುದು ತೀವ್ರ ಆತಂಕಕಾರಿಯಾಗಿದೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಷಯಗಳು ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಅತ್ಯಂತ ಮಹತ್ವದ್ದಾಗಿರುವುದರಿಂದ ಈ ವಿಷಯಗಳ ಬಗ್ಗೆ ಚರ್ಚಿಸಬೇಕಾಗಿದೆ. “ಭಾರತೀಯ ರಾಜಕೀಯದಲ್ಲಿ ಇಂತಹ ಕಟು ಟೀಕೆ ನೋಡಲು ಮಾತ್ರ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹುತಾತ್ಮರಾಗಿದ್ದಾರೆಯೇ?” ಎಂದು  ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.

ಖರ್ಗೆಯವರ ಟ್ವೀಟ್

ರಾಹುಲ್ ಗಾಂಧಿ ವಿರುದ್ಧ ನೀಡಿರುವ ಇಂತಹ ಬೆದರಿಕೆಗಳು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಕೆಲಸ.ಕೇಂದ್ರ ಸರ್ಕಾರದ ಹಾಲಿ ಸಚಿವರಿಂದ ವಿರೋಧ ಪಕ್ಷದ ನಾಯಕರಿಗೆ ಇಂತಹ ಹಲವು ಟೀಕೆಗಳು ಬಂದಿವೆ ಎಂದು ಖರ್ಗೆ ಹೇಳಿದರು. “ನಿಮ್ಮ ಮೈತ್ರಿಯಲ್ಲಿ ರಾಜಕಾರಣಿಗಳು ಬಳಸುತ್ತಿರುವ ಹಿಂಸಾತ್ಮಕ ಭಾಷೆ ನಮ್ಮ ಭವಿಷ್ಯಕ್ಕೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ ಎಂಬುದನ್ನು ನಾನು ಬಹಳ ದುಃಖದಿಂದ ಗಮನಿಸಬೇಕು” ಎಂದು ಖರ್ಗೆ ಹೇಳಿದರು.

ತಮ್ಮ ಮನವಿಯಲ್ಲಿ, ಖರ್ಗೆ ಅವರು ತಮ್ಮ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಮಾರ್ಗದರ್ಶನ ನೀಡುವಂತೆ ಪ್ರಧಾನ ಮಂತ್ರಿಯನ್ನು ಕೇಳಿದ್ದು, ಅಂತಹ ಎಲ್ಲಾ ಹೇಳಿಕೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು “ನೀವು ನಿಮ್ಮ ಬಣದ ರಾಜಕಾರಣಿಗಳಲ್ಲಿ ಶಿಸ್ತು ಮತ್ತು ಗಡಿಗಳನ್ನು ಅಳವಡಿಸಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ”ಎಂದು ಖರ್ಗೆ ಹೇಳಿದ್ದಾರೆ.

ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರು, “ವಿಮಾನಗಳು, ರೈಲುಗಳು, ರಸ್ತೆಗಳನ್ನು ಸ್ಫೋಟಿಸಲು ಪ್ರಯತ್ನಿಸುವ ದೇಶದ ಶತ್ರುಗಳು, ಅವರು ರಾಹುಲ್ ಗಾಂಧಿಗೆ ಬೆಂಬಲವಾಗಿದ್ದಾರೆ. ನಂಬರ್ ಒನ್ ಭಯೋತ್ಪಾದಕ ಮತ್ತು ದೇಶದ ದೊಡ್ಡ ಶತ್ರುವನ್ನು ಹಿಡಿಯಲು ಪ್ರಶಸ್ತಿ ನೀಡಬೇಕಾದರೆ, ಅದು ರಾಹುಲ್ ಗಾಂಧಿಗೆ ಕೊಡಬೇಕು” ಎಂದಿದ್ದರು.

ಇದನ್ನೂ ಓದಿ: Arvind Kejriwal resigns: ದೆಹಲಿ ಸಿಎಂ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ ₹11 ಲಕ್ಷ ಬಹುಮಾನ ನೀಡುವುದಾಗಿ ಶಿವಸೇನಾ ನಾಯಕ ಸಂಜಯ್ ಗಾಯಕ್ವಾಡ್ ಅವರು ಇತ್ತೀಚೆಗೆ ಮಾಡಿದ ಕಾಮೆಂಟ್ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಖರ್ಗೆ ಅವರ ಪತ್ರ ಬಂದಿದೆ. ಗಾಯಕ್‌ವಾಡ್‌ ಅವರ ಹೇಳಿಕೆಯನ್ನು ನಾವು ಅನುಮೋದಿಸಿಲ್ಲ ಎಂದು ಬಿಜೆಪಿ ಅಂತರ ಕಾಪಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ