AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khargone Communal Clash: ಮಧ್ಯಪ್ರದೇಶದಲ್ಲಿ ರಾಮನವಮಿ ವೇಳೆ ಕೋಮು ಸಂಘರ್ಷದಿಂದ ಹತ್ಯೆ ಪ್ರಕರಣ; ಐವರ ಬಂಧನ

ಕೋಮು ಸಂಘರ್ಷ ನಡೆದ ರಾತ್ರಿ ಇಬ್ರಿಸ್ ಖಾನ್ ಅವರನ್ನು 7-8 ಜನರು ಕೊಲೆ ಮಾಡಿದ್ದರು. ಮರುದಿನ ಪತ್ತೆಯಾದ ಶವವನ್ನು ಯಾರೂ ಗುರುತಿಸಿರಲಿಲ್ಲ. ಖಾರ್ಗೋನ್‌ನಲ್ಲಿ ಫ್ರೀಜರ್ ಸೌಲಭ್ಯಗಳಿಲ್ಲದ ಕಾರಣ ಇಂದೋರ್ ಶವಾಗಾರಕ್ಕೆ ಕಳುಹಿಸಲಾಗಿತ್ತು.

Khargone Communal Clash: ಮಧ್ಯಪ್ರದೇಶದಲ್ಲಿ ರಾಮನವಮಿ ವೇಳೆ ಕೋಮು ಸಂಘರ್ಷದಿಂದ ಹತ್ಯೆ ಪ್ರಕರಣ; ಐವರ ಬಂಧನ
ಮಧ್ಯಪ್ರದೇಶದಲ್ಲಿ ನಡೆದ ಕೋಮುಗಲಭೆ
TV9 Web
| Updated By: ಸುಷ್ಮಾ ಚಕ್ರೆ|

Updated on: Apr 22, 2022 | 8:40 AM

Share

ಭೂಪಾಲ್: ರಾಮನವಮಿ (Rama Navami) ಆಚರಣೆ ವೇಳೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ (Khargone Clashes) ನಡೆದ ಕೋಮು ಸಂಘರ್ಷದಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ (Murder) ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಏಪ್ರಿಲ್ 10ರ ರಾತ್ರಿ ಆನಂದ್ ನಗರ-ಕಪಾಸ್ ಮಂಡಿ ಪ್ರದೇಶದಲ್ಲಿ ಇಬ್ರಿಸ್ ಖಾನ್ ಮೇಲೆ ಈ ವ್ಯಕ್ತಿಗಳು ದಾಳಿ ಮಾಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹತ್ಯೆ ಪ್ರಕರಣದಲ್ಲಿ ಬಂಧಿತರಾದವರು ಆನಂದ್ ನಗರ- ರಹೀಂಪುರ ಪ್ರದೇಶದವರು ಎನ್ನಲಾಗಿದೆ. 30 ವರ್ಷದ ಇಬ್ರಿಸ್ ಖಾನ್ ಮುನ್ಸಿಪಲ್ ಉದ್ಯೋಗಿಯಾಗಿದ್ದು, ಏಪ್ರಿಲ್ 10ರಂದು ನಡೆದ ಹಿಂಸಾಚಾರದ ಬಳಿಕ ನಾಪತ್ತೆಯಾಗಿದ್ದರು. ಅದಾದ 8 ದಿನಗಳ ನಂತರ ಖಾರ್ಗೋನ್‌ನಿಂದ 120 ಕಿಮೀ ದೂರದಲ್ಲಿರುವ ಇಂದೋರ್‌ನಲ್ಲಿರುವ ಶವಾಗಾರದಲ್ಲಿ ಅವರ ದೇಹವು ಪತ್ತೆಯಾಗಿತ್ತು.

ಸ್ಥಳೀಯ ಪೊಲೀಸರ ಪ್ರಕಾರ, ಕೋಮು ಸಂಘರ್ಷ ನಡೆದ ರಾತ್ರಿ ಇಬ್ರಿಸ್ ಖಾನ್ ಅವರನ್ನು 7-8 ಜನರು ಕೊಲೆ ಮಾಡಿದ್ದರು. ಮರುದಿನ ಪತ್ತೆಯಾದ ಶವವನ್ನು ಯಾರೂ ಗುರುತಿಸಿರಲಿಲ್ಲ. ಖಾರ್ಗೋನ್‌ನಲ್ಲಿ ಫ್ರೀಜರ್ ಸೌಲಭ್ಯಗಳಿಲ್ಲದ ಕಾರಣ ಇಂದೋರ್ ಶವಾಗಾರಕ್ಕೆ ಕಳುಹಿಸಲಾಗಿತ್ತು.

ಆದರೆ, ಪೊಲೀಸರು ಸಾವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಆತನ ಕುಟುಂಬದವರು ಆರೋಪಿಸಿದ್ದಾರೆ. ಇಬ್ರಿಸ್‌ ಖಾನ್‌ ಅವರ ಸಹೋದರ ಇಖ್ಲಾಕ್‌ ಖಾನ್‌ ಪೊಲೀಸರು ಇದಕ್ಕೆ ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ”ಆನಂದನಗರದ ಜನರು ನನ್ನ ಸಹೋದರನ ಮೇಲೆ ಆಯುಧಗಳಿಂದ ಹಲ್ಲೆ ನಡೆಸಿ ತಲೆಯನ್ನು ಕಲ್ಲಿನಿಂದ ಪುಡಿ ಮಾಡಿದ್ದಾರೆ. ಇದರ ವಿರುದ್ಧ ಮಾಧ್ಯಮದ ಮುಂದೆ ಹೋಗುವುದಾಗಿ ಬೆದರಿಕೆ ಹಾಕಿದ ನಂತರವೇ ಪೊಲೀಸರು ಆತನ ಶವದ ಬಗ್ಗೆ ನಮ್ಮ ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ

ಏಪ್ರಿಲ್ 10ರಂದು ರಾಮನವಮಿ ಮೆರವಣಿಗೆಯಲ್ಲಿ ಎರಡು ಗುಂಪುಗಳು ಘರ್ಷಣೆಗೊಂಡಾಗ ಖಾರ್ಗೋನ್‌ನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದರು. ಎರಡೂ ಕಡೆಯಿಂದ ಕಲ್ಲುಗಳನ್ನು ಎಸೆಯಲಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ 4 ಜನರು ಗಾಯಗೊಂಡಿದ್ದರು. ಈ ಸಂಘರ್ಷದಲ್ಲಿ ಭಾಗಿಯಾಗಿರುವವರ ಬಗ್ಗೆ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕೋಮುಗಲಭೆ ಪ್ರಕರಣ; ಗಲಭೆಯ ಮಾಸ್ಟರ್‌ಮೈಂಡ್‌ ಮೌಲ್ವಿ ವಸೀಂ ಪಠಾಣ್ ಪೊಲೀಸರ ವಶಕ್ಕೆ​

ರಾಮನವಮಿ-ಹನುಮಜಯಂತಿ ವೇಳೆ ಕೋಮು ಸಂಘರ್ಷ; ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್