AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖೇಲೋ ಇಂಡಿಯಾ ಯೂತ್ ಗೇಮ್ಸ್‌‘: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿವ ಉದಯನಿಧಿ ಸ್ಟಾಲಿನ್

ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಜನವರಿ 19 ರಿಂದ 31ರ ವರೆಗೆ ನಡೆಯಲಿರುವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್‌’ಗೆ ಆಹ್ವಾನಿಸಿದ್ದಾರೆ.

‘ಖೇಲೋ ಇಂಡಿಯಾ ಯೂತ್ ಗೇಮ್ಸ್‌‘: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿವ ಉದಯನಿಧಿ ಸ್ಟಾಲಿನ್
ಸಚಿವ ಉದಯನಿಧಿ ಸ್ಟಾಲಿನ್, ಪ್ರಧಾನಿ ಮೋದಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 04, 2024 | 9:35 PM

ದೆಹಲಿ, ಜನವರಿ 04: ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಜನವರಿ 19 ರಿಂದ 31ರ ವರೆಗೆ ನಡೆಯಲಿರುವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್‌’ಗೆ ಆಹ್ವಾನಿಸಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ ಎಂದು ಉದಯನಿಧಿ ಸ್ಟಾಲಿನ್​​ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತಾಗಿ ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಫೋಟೋಗಳನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ಜನವರಿ 19, 2024 ರಂದು ಚೆನ್ನೈನಲ್ಲಿ ನಡೆಯಲಿರುವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್‌ನ ಉದ್ಘಾಟನಾ ಸಮಾರಂಭ’ಕ್ಕೆ ಗೌರವಾನ್ವಿತ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಕ್ಕೆ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

ಉದಯನಿಧಿ ಸ್ಟಾಲಿನ್ ಟ್ವೀಟ್​​

ಸಿಎಂ ಎಂಕೆ ಸ್ಟಾಲಿನ್ ಅವರ ಕೋರಿಕೆ ಮೇರೆಗೆ ತಮಿಳುನಾಡಿನ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರದ ಪರವಾಗಿ ಉದಯನಿಧಿ ಸ್ಟಾಲಿನ್​ ಪ್ರಧಾನಿಗೆ ಮನವಿ ಮಾಡಿದ್ದಾರೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ನೇತೃತ್ವದಲ್ಲಿ ಭಾರತದಲ್ಲಿನ ಆರ್ಥಿಕ ಬೆಳವಣಿಗೆ, ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಚೀನಾ ಮಾಧ್ಯಮ

ತಮಿಳುನಾಡಿನ ಸಾರ್ವಜನಿಕ ಪ್ರಾಮುಖ್ಯತೆಯ ಬಗ್ಗೆ, ವಿಶೇಷವಾಗಿ ತಮಿಳುನಾಡಿನ ಕ್ರೀಡೆಗಳ ಬಹುಮುಖಿ ಅಭಿವೃದ್ಧಿಯ ಬಗ್ಗೆ ಪ್ರಧಾನಿಯವರೊಂದಿಗೆ ಚರ್ಚಿಸಲಾಗಿದೆ. ಸಭೆಯಲ್ಲಿ, ಸಿಎಂ ಟ್ರೋಫಿ ಗೇಮ್ಸ್ 2023 ಮತ್ತು ತಮಿಳುನಾಡು ಆಯೋಜಿಸಿದ್ದ ಏಷ್ಯನ್ ಪುರುಷರ ಹಾಕಿ ಚಾಂಪಿಯನ್‌ ಶಿಪ್‌ನ ಯಶಸ್ವಿ ನಿರ್ವಹಣೆಯನ್ನು ಪ್ರದರ್ಶಿಸುವ ಕಾಫಿ ಟೇಬಲ್ ಪುಸ್ತಕವನ್ನು ಪ್ರಧಾನಿಗೆ ನೀಡಲಾಗಿದೆ.

ಉದಯನಿಧಿ ಸ್ಟಾಲಿನ್​ ಪ್ರಧಾನಿ ಮೋದಿ ಅವರನ್ನು ಎರಡನೇ ಭಾರಿಗೆ ಭೇಟಿಯಾಗಿದ್ದು, ಕಳೆದ ವರ್ಷ, ಫೆಬ್ರವರಿ 28 ರಂದು ರಾಜ್ಯಕ್ಕೆ ನೀಟ್ ವಿನಾಯಿತಿಗಾಗಿ ತಮಿಳುನಾಡಿನ ಬೇಡಿಕೆಗಾಗಿ ಭೇಟಿ ಮಾಡಿದ್ದರು. ಜೊತೆಗೆ ಕ್ರೀಡಾ ಸಂಬಂಧಿತ ವಿಷಯಗಳ ಬಗ್ಗೆಯೂ ಚರ್ಚೆ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ