AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushbu Sundar | ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್​ ಖಾತೆ ಹ್ಯಾಕ್

Khushbu Sundar Twitter | ಖುಷ್ಬೂ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದವರು ಅದರ ಅಕೌಂಟ್ ನೇಮ್ ಅನ್ನು ಬ್ರಿಯಾನ್ ಎಂದು ಬದಲಾಯಿಸಿದ್ದಾರೆ. ಹಾಗೇ, ಡಿಸ್​ಪ್ಲೇ ಫೋಟೋವನ್ನು ಕೂಡ ಬದಲಾಯಿಸಲಾಗಿದೆ.

Khushbu Sundar | ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್​ ಖಾತೆ ಹ್ಯಾಕ್
ಖುಷ್ಬೂ ಸುಂದರ್
TV9 Web
| Updated By: ಸುಷ್ಮಾ ಚಕ್ರೆ|

Updated on: Jul 20, 2021 | 12:40 PM

Share

ಚೆನ್ನೈ: ಖ್ಯಾತ ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಅವರ ಟ್ವಿಟ್ಟರ್​ ಖಾತೆಯನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. 2020ರ ಏಪ್ರಿಲ್ ತಿಂಗಳಲ್ಲಿ ಕೂಡ ಖುಷ್ಬೂ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ಆಕೆಯ ಅಭಿಮಾನಿಗಳಿಂದ ಈ ವಿಷಯ ಬೆಳಕಿಗೆ ಬಂದಿತ್ತು. ಇದೀಗ ಮತ್ತೊಂದು ಬಾರಿ ಖುಷ್ಬೂ ಟ್ವಿಟ್ಟರ್​ ಅಕೌಂಟ್ ಅನ್ನು ಹ್ಯಾಕ್ ಮಾಡಲಾಗಿದ್ದು, ಅಕೌಂಟ್ ನೇಮ್ ಮತ್ತು ಕವರ್ ಪೇಜ್ ಅನ್ನು ಬದಲಾಯಿಸಲಾಗಿದೆ. ಅಷ್ಟೇ ಅಲ್ಲದೆ, ನಟಿ ಖುಷ್ಬೂ ಇದುವರೆಗೆ ಮಾಡಿರುವ ಎಲ್ಲ ಟ್ವೀಟ್​ಗಳನ್ನೂ ಡಿಲೀಟ್ ಮಾಡಲಾಗಿದೆ.

ಖುಷ್ಬೂ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದವರು ಅದರ ಅಕೌಂಟ್ ನೇಮ್ ಅನ್ನು ಬ್ರಿಯಾನ್ ಎಂದು ಬದಲಾಯಿಸಿದ್ದಾರೆ. ಹಾಗೇ, ಡಿಸ್​ಪ್ಲೇ ಫೋಟೋವನ್ನು ಕೂಡ ಬದಲಾಯಿಸಲಾಗಿದೆ. ಈ ಹಿಂದೆ 2020ರಲ್ಲಿ ತಮ್ಮ ಟ್ವಿಟ್ಟರ್​ ಖಾತೆ ಹ್ಯಾಕ್ ಆದಾಗ ನಟಿ ಖುಷ್ಬೂ ತಮ್ಮ ಇನ್​ಸ್ಟಾಗ್ರಾಂ ಖಾತೆಯ ಮೂಲಕ ಈ ವಿಷಯವನ್ನು ಅಭಿಮಾನಿಗಳಿಗೆ ತಿಳಿಸಿದ್ದರು.

Actress BJP Leader Khushbu Sundar's Twitter account hacked Tweets Deleted

ಹ್ಯಾಕ್ ಆಗಿರುವ ಖುಷ್ಬೂ ಟ್ವಿಟ್ಟರ್ ಖಾತೆ

ಅಂದಹಾಗೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಸುಂದರ್ 2020ರ ಅಕ್ಟೋಬರ್ 12ರಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದರು. ಅದೇ ದಿನ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ನಟಿ ಖುಷ್ಬೂ 2021ರ ಚುನಾವಣೆಯಲ್ಲಿ ಥೌಸಂಡ್ ಲೈಟ್ಸ್​ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಬರೋಬ್ಬರಿ 32,200 ಮತಗಳ ಅಂತರದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋತಿದ್ದರು.

ಹಲವಾರು ವಿವಾದಗಳಿಂದ ಹೆಸರಾಗಿರುವ ಖುಷ್ಬೂ ಸುಂದರ್ ಕಳೆದ ಮೂರು ವರ್ಷಗಳಿಂದ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ರಾಜಕೀಯದಲ್ಲಿ ಸಕ್ರಿಯರಾಗಿದ್ದ ಖುಷ್ಬೂ ಇದೀಗ ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಮೂಲಕ ಮತ್ತೆ ಚಿತ್ರರಂಗಕ್ಕೆ ವಾಪಾಸಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: BJP ನಾಯಕಿ ಖುಷ್ಬೂ ಕಾರು ಅಪಘಾತ: ‘ಗಂಡ ಮುರುಗನ ಆರಾಧಕ; ಅವನೇ ನನ್ನನ್ನು ಕಾಪಾಡಿದ’

(Actress BJP Leader Khushbu Sundar’s Twitter account hacked Tweets Deleted)

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ