AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushbu Sundar | ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್​ ಖಾತೆ ಹ್ಯಾಕ್

Khushbu Sundar Twitter | ಖುಷ್ಬೂ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದವರು ಅದರ ಅಕೌಂಟ್ ನೇಮ್ ಅನ್ನು ಬ್ರಿಯಾನ್ ಎಂದು ಬದಲಾಯಿಸಿದ್ದಾರೆ. ಹಾಗೇ, ಡಿಸ್​ಪ್ಲೇ ಫೋಟೋವನ್ನು ಕೂಡ ಬದಲಾಯಿಸಲಾಗಿದೆ.

Khushbu Sundar | ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್​ ಖಾತೆ ಹ್ಯಾಕ್
ಖುಷ್ಬೂ ಸುಂದರ್
TV9 Web
| Edited By: |

Updated on: Jul 20, 2021 | 12:40 PM

Share

ಚೆನ್ನೈ: ಖ್ಯಾತ ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಅವರ ಟ್ವಿಟ್ಟರ್​ ಖಾತೆಯನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. 2020ರ ಏಪ್ರಿಲ್ ತಿಂಗಳಲ್ಲಿ ಕೂಡ ಖುಷ್ಬೂ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ಆಕೆಯ ಅಭಿಮಾನಿಗಳಿಂದ ಈ ವಿಷಯ ಬೆಳಕಿಗೆ ಬಂದಿತ್ತು. ಇದೀಗ ಮತ್ತೊಂದು ಬಾರಿ ಖುಷ್ಬೂ ಟ್ವಿಟ್ಟರ್​ ಅಕೌಂಟ್ ಅನ್ನು ಹ್ಯಾಕ್ ಮಾಡಲಾಗಿದ್ದು, ಅಕೌಂಟ್ ನೇಮ್ ಮತ್ತು ಕವರ್ ಪೇಜ್ ಅನ್ನು ಬದಲಾಯಿಸಲಾಗಿದೆ. ಅಷ್ಟೇ ಅಲ್ಲದೆ, ನಟಿ ಖುಷ್ಬೂ ಇದುವರೆಗೆ ಮಾಡಿರುವ ಎಲ್ಲ ಟ್ವೀಟ್​ಗಳನ್ನೂ ಡಿಲೀಟ್ ಮಾಡಲಾಗಿದೆ.

ಖುಷ್ಬೂ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದವರು ಅದರ ಅಕೌಂಟ್ ನೇಮ್ ಅನ್ನು ಬ್ರಿಯಾನ್ ಎಂದು ಬದಲಾಯಿಸಿದ್ದಾರೆ. ಹಾಗೇ, ಡಿಸ್​ಪ್ಲೇ ಫೋಟೋವನ್ನು ಕೂಡ ಬದಲಾಯಿಸಲಾಗಿದೆ. ಈ ಹಿಂದೆ 2020ರಲ್ಲಿ ತಮ್ಮ ಟ್ವಿಟ್ಟರ್​ ಖಾತೆ ಹ್ಯಾಕ್ ಆದಾಗ ನಟಿ ಖುಷ್ಬೂ ತಮ್ಮ ಇನ್​ಸ್ಟಾಗ್ರಾಂ ಖಾತೆಯ ಮೂಲಕ ಈ ವಿಷಯವನ್ನು ಅಭಿಮಾನಿಗಳಿಗೆ ತಿಳಿಸಿದ್ದರು.

Actress BJP Leader Khushbu Sundar's Twitter account hacked Tweets Deleted

ಹ್ಯಾಕ್ ಆಗಿರುವ ಖುಷ್ಬೂ ಟ್ವಿಟ್ಟರ್ ಖಾತೆ

ಅಂದಹಾಗೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಸುಂದರ್ 2020ರ ಅಕ್ಟೋಬರ್ 12ರಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದರು. ಅದೇ ದಿನ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ನಟಿ ಖುಷ್ಬೂ 2021ರ ಚುನಾವಣೆಯಲ್ಲಿ ಥೌಸಂಡ್ ಲೈಟ್ಸ್​ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಬರೋಬ್ಬರಿ 32,200 ಮತಗಳ ಅಂತರದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋತಿದ್ದರು.

ಹಲವಾರು ವಿವಾದಗಳಿಂದ ಹೆಸರಾಗಿರುವ ಖುಷ್ಬೂ ಸುಂದರ್ ಕಳೆದ ಮೂರು ವರ್ಷಗಳಿಂದ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ರಾಜಕೀಯದಲ್ಲಿ ಸಕ್ರಿಯರಾಗಿದ್ದ ಖುಷ್ಬೂ ಇದೀಗ ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಮೂಲಕ ಮತ್ತೆ ಚಿತ್ರರಂಗಕ್ಕೆ ವಾಪಾಸಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: BJP ನಾಯಕಿ ಖುಷ್ಬೂ ಕಾರು ಅಪಘಾತ: ‘ಗಂಡ ಮುರುಗನ ಆರಾಧಕ; ಅವನೇ ನನ್ನನ್ನು ಕಾಪಾಡಿದ’

(Actress BJP Leader Khushbu Sundar’s Twitter account hacked Tweets Deleted)

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!