AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಕುರಿತು ವದಂತಿ: ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು

ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡಿದ್ದಕ್ಕಾಗಿ ಉತ್ತರ ಪ್ರದೇಶದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಕುರಿತು ವದಂತಿ: ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು
ಪ್ರಶಾಂತ್ ಉಮ್ರಾವ್Image Credit source: NDTV
ನಯನಾ ರಾಜೀವ್
|

Updated on: Mar 04, 2023 | 2:49 PM

Share

ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡಿದ್ದಕ್ಕಾಗಿ ಉತ್ತರ ಪ್ರದೇಶದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿಯ ಉತ್ತರ ಪ್ರದೇಶ ಘಟಕದ ವಕ್ತಾರರಾದ ಪ್ರಶಾಂತ್ ಉಮ್ರಾವ್ ಬಿಹಾರದ 12 ವಲಸಿಗರನ್ನು ತಮಿಳುನಾಡಿನಲ್ಲಿ ನೇಣು ಬಿಗಿದು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಪ್ರದೇಶ ಮತ್ತು ಭಾಷೆಯ ಆಧಾರದ ಮೇಲೆ ಜನರ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು ಪ್ರಶಾಂತ್ ಉಮ್ರಾವ್ ವಿರುದ್ಧ ಆರೋಪ ಹೊರಿಸಿದ್ದಾರೆ. ದಕ್ಷಿಣ ರಾಜ್ಯದಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರ ಮೇಲೆ ದಾಳಿಗಳ ಕುರಿತು ಹಲವಾರು ನಕಲಿ ಸಂದೇಶಗಳನ್ನು ಹಂಚಿಕೊಳ್ಳಲಾಗಿದೆ.

ರಾಜ್ಯದ ವಲಸೆ ಕಾರ್ಮಿಕರ ಸುರಕ್ಷತೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭರವಸೆ ನೀಡಿದ್ದಾರೆ. ವಲಸೆ ಕಾರ್ಮಿಕರು ಭಯಪಡುವ ಅಗತ್ಯವಿಲ್ಲ, ಯಾರಾದರೂ ನಿಮಗೆ ಬೆದರಿಕೆ ಹಾಕಿದರೆ ಸಹಾಯವಾಣಿಗೆ ಕರೆ ಮಾಡಿ. ತಮಿಳುನಾಡು ಸರ್ಕಾರ ಮತ್ತು ಜನರು ನಮ್ಮ ವಲಸೆ ಸಹೋದರರನ್ನು ರಕ್ಷಿಸಲು ನಿಲ್ಲುತ್ತಾರೆ ಎಂದು ಅವರು ಹೇಳಿದರು.

ವಲಸೆ ಕಾರ್ಮಿಕರು ಭಯಪಡಬೇಡಿ ಎಂದು ತಮಿಳುನಾಡಿನ ಜಿಲ್ಲಾಧಿಕಾರಿಗಳು ಹಿಂದಿಯಲ್ಲಿ ಮನವಿ ಮಾಡಿದ್ದಾರೆ. ವಲಸೆ ಕಾರ್ಮಿಕರ ಮೇಲಿನ ದಾಳಿಯ ಬಗ್ಗೆ ವದಂತಿಗಳನ್ನು ಪರಿಶೀಲಿಸಲು ಎರಡೂ ರಾಜ್ಯಗಳ ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿಕಟವಾಗಿ ಕಣ್ಣಿಟ್ಟಿದ್ದಾರೆ. ಬಿಹಾರ ಸರ್ಕಾರವು ಸ್ಥಳೀಯ ಅಧಿಕಾರಿಗಳೊಂದಿಗೆ ವಲಸೆ ಕಾರ್ಮಿಕರನ್ನು ಭೇಟಿ ಮಾಡಲು ಅಧಿಕಾರಿಗಳನ್ನು ತಮಿಳುನಾಡಿಗೆ ಕಳುಹಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕಚೇರಿಯ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ತಮಿಳುನಾಡಿನಲ್ಲಿ ಬಿಹಾರ ಮೂಲದ ಕಾರ್ಮಿಕರಿಗೆ ಥಳಿಸಿದ ಪ್ರಕರಣದಲ್ಲಿ ಬಿಹಾರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಈ ಬಗ್ಗೆ ತನಿಖೆ ನಡೆಸಲು ತಮಿಳುನಾಡಿಗೆ ತಂಡವನ್ನು ಕಳುಹಿಸಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ, ಬಿಹಾರದಿಂದ ವಲಸೆ ಹೋಗಿರುವ ಕಾರ್ಮಿಕರಿಗೆ ತಮಿಳುನಾಡಿನಲ್ಲಿ ಥಳಿಸಿ, ಹತ್ಯೆ ಮಾಡಲಾಗಿದೆ ಎನ್ನುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ಸುಳ್ಳು ಸುದ್ದಿ ಎಂದು ತಮಿಳುನಾಡು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ